ವಿಶ್ವ ನೃತ್ಯ ದಿನ: ಕೊರೋನಾ ಕಾಲದಲ್ಲೊಂದು ಕುಣಿತ
ಬೆಂಗಳೂರು, ಏಪ್ರಿಲ್ 29: ಇಡೀ ಜಗತ್ತೇ ಕೊರೋನಾ ವೈರಾಣು ಹಾವಳಿಯಿಂದ ನಲುಗಿಹೋಗಿರುವ ಈ ಸಂದರ್ಭದಲ್ಲಿ ಕೊರೋನಾ ನಿರ್ಮೂಲನೆಗಾಗಿ ಸಾಮಾಜಿಕ ಅಂತರ, ಲಾಕ್ ಡೌನ್ ಪಾಲನೆ ಕುರಿತಂತೆ ಜಾಗೃತಿ ಮೂಡಿಸುವ ಹಲವು ಕಿರುಚಿತ್ರಗಳನ್ನು ಸೃಜನಶೀಲ ಮನಸ್ಸುಗಳು ತಯಾರಿಸುತ್ತಿವೆ.
ಈ ಸರಣಿಯಲ್ಲಿ ಮುಖ್ಯವಾದುದು 'DANCE IN THE TIME OF LOCKDOWN... ಕೊರೋನಾ ಕಾಲದಲ್ಲೊಂದು ಕುಣಿತ'. ಲಾಕ್ ಡೌನ್ ಅವಧಿಯಲ್ಲಿ ತನ್ನ ಪ್ರೇಯಸಿಯನ್ನು ಭೇಟಿ ಮಾಡಲು ತೆರಳುವ ನೃತ್ಯಪಟು ಯುವಕನೊಬ್ಬನ ಕಥಾವಸ್ತುವನ್ನು ಕಿರುಚಿತ್ರ ಒಳಗೊಂಡಿದೆ. ಕೊರೋನಾದಿಂದಾಗಿ ಮಾನಸಿಕ ಆತಂಕ, ಖಿನ್ನತೆ ಮುಂತಾದವುಗಳಿಗೆ 'ಯೋಗ' ಉತ್ತಮ ಪರಿಹಾರ ಎಂಬ ಸಂದೇಶವೂ ಚಿತ್ರದಲ್ಲಿದೆ.
'ಮೆಣಸಿನಕಾಯ್ ಮೂವೀಸ್' ಸಂಸ್ಥೆ ನಿರ್ಮಿಸಿರುವ 12 ನಿಮಿಷ ಅವಧಿಯ ಈ ಕಿರುಚಿತ್ರದಲ್ಲಿ ಮೂವರು ಪಾತ್ರಧಾರಿಗಳಿದ್ದು, ಇವರೂ ಸೇರಿದಂತೆ ನಿರ್ದೇಶನ ತಂಡದ ಸದಸ್ಯರೆಲ್ಲಾ ಪ್ರತ್ಯೇಕವಾಗಿ ತಮ್ಮ ತಮ್ಮ ಮನೆಗಳಲ್ಲಿದ್ದುಕೊಂಡೇ ಚಿತ್ರೀಕರಣ ನಡೆಸಿರುವುದು ವಿಶೇಷ. ಚಿತ್ರ ನಿರ್ಮಾಣ ಪ್ರಕ್ರಿಯೆಯಲ್ಲಿ ಯಾರೊಬ್ಬರೂ ಮನೆಯ ಕಾಂಪೌಂಡ್ ದಾಟಿಲ್ಲ. ಪಾತ್ರಧಾರಿಗಳ ಕುಟುಂಬ ಸದಸ್ಯರು ಮೊಬೈಲ್ ಫೋನ್ ಕ್ಯಾಮರಾದಲ್ಲೇ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ.

ಏಪ್ರಿಲ್ 29ರ ವಿಶ್ವ ನೃತ್ಯ ದಿನದ ಅಂಗವಾಗಿ ಈ ಚಿತ್ರ ತಯಾರಿಸಿರುವುದು ಮತ್ತೊಂದು ವಿಶೇಷ. ಚಿತ್ರಕಥೆ, ಸಂಕಲನ ಜತೆಗೆ ನಿರ್ದೇಶನ ವೀರನಾರಾಯಣ ಅವರದ್ದು. ಸಹಾಯಕ ನಿರ್ದೇಶನ ರಮ್ಯ ಜಿ.ಎಸ್. ಮತ್ತು ಇಂಗ್ಲಿಷ್ ಉಪಶೀರ್ಷಿಕೆ ವೆಂಕಟೇಶ ಬೆಳಗುಲಿ. ನಟವರ್ಗದಲ್ಲಿ ಧನಂಜಯ ಟಿ.ಆರ್., ಕೃಪಾಶ್ರೀ ವಿ ಮತ್ತು ರಘುನಾಥ್ ಎಂ.ಎಸ್. ಇದ್ದಾರೆ. ಚಿತ್ರದ ಲಿಂಕ್ ಇಲ್ಲಿದೆ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications