ಗೋವಾ ವಿಮಾನ ನಿಲ್ದಾಣದಲ್ಲಿ ರನ್ವೇಗೆ ನುಗ್ಗಿದ ಬೀದಿ ನಾಯಿ, ಬೆಂಗಳೂರಿಗೇ ಹಿಂತಿರುಗಿದ ವಿಸ್ತಾರಾ ವಿಮಾನ
ಪಣಜಿ, ನವೆಂಬರ್ 14: ಏರ್ ಟ್ರಾಫಿಕ್ ಕಂಟ್ರೋಲರ್ಗೆ ರನ್ವೇಯಲ್ಲಿ ಬೀದಿನಾಯಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಸ್ತಾರಾ ವಿಮಾನವು ಗೋವಾದ ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ ಇಳಿಯದೆ ಬೆಂಗಳೂರಿಗೆ ಮರಳಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ದಾಬೋಲಿಮ್ ವಿಮಾನ ನಿಲ್ದಾಣದ ರನ್ವೇಯಲ್ಲಿ ಬೀದಿ ನಾಯಿ ಕಾಣಿಸಿಕೊಂಡಿದ್ದರಿಂದ ಪೈಲಟ್ಗೆ "ಸ್ವಲ್ಪ ತಡೆಯಿರಿ" ಎಂದು ಹೇಳಲಾಯಿತು. ಬಳಿಕ ಬೆಂಗಳೂರಿಗೆ ಮರಳಲು ಅವರು ಆದೇಶ ನೀಡಿದರು ಎಂದು ಗೋವಾ ವಿಮಾನ ನಿಲ್ದಾಣದ ನಿರ್ದೇಶಕ ಎಸ್ವಿಟಿ ಧನಂಜಯ ರಾವ್ ಪಿಟಿಐಗೆ ತಿಳಿಸಿದರು.

ಗೋವಾದ ದಾಬೋಲಿಮ್ ವಿಮಾನ ನಿಲ್ದಾಣವು ನೌಕಾಪಡೆಯ INS ಹನ್ಸಾ ನೆಲೆಯ ಭಾಗವಾಗಿದೆ. ವಿಸ್ತಾರಾ ವಿಮಾನ ಯುಕೆ 881 ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೋಮವಾರ ಮಧ್ಯಾಹ್ನ 12.55 ಕ್ಕೆ ಹೊರಟು ಮಧ್ಯಾಹ್ನ 3.05 ಕ್ಕೆ ಹಿಂತಿರುಗಿತು. ಮತ್ತೆ ಬೆಂಗಳೂರಿನಿಂದ ಸಂಜೆ 4.55ಕ್ಕೆ ಹೊರಟ ವಿಮಾನ 6.15ಕ್ಕೆ ಗೋವಾ ತಲುಪಿತು ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ವಿಸ್ತಾರಾ ಎಕ್ಸ್ ಪೋಸ್ಟ್ನಲ್ಲಿ, "ಗೋವಾವಿಮಾನ ನಿಲ್ದಾಣದಲ್ಲಿ ರನ್ವೇ ನಿರ್ಬಂಧದ ಕಾರಣದಿಂದ ಬೆಂಗಳೂರಿನಿಂದ ಗೋವಾಕ್ಕೆ ಯುಕೆ 881 ವಿಮಾನವನ್ನು ಬೆಂಗಳೂರಿಗೆ ತಿರುಗಿಸಲಾಗಿದೆ. 15.05 ಗಂಟೆಗೆ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ" ಎಂದು ಹೇಳಿತು. ಎರಡು ಗಂಟೆಗಳ ನಂತರ ಮತ್ತೊಂದು ಪೋಸ್ಟ್ನಲ್ಲಿ, "ಬೆಂಗಳೂರು ಕಡೆಗೆ ತಿರುಗಿಸಲಾದ ಯುಕೆ 881 ವಿಮಾನವು ಬೆಂಗಳೂರಿನಿಂದ 16.55 ಗಂಟೆಗೆ ಹೊರಟಿದೆ ಮತ್ತು 18.15 ಗಂಟೆಗೆ ಗೋವಾ ತಲುಪುವ ನಿರೀಕ್ಷೆಯಿದೆ" ಎಂದು ಅದು ಹೇಳಿತು.
ಒಮ್ಮೊಮ್ಮೆ ಬೀದಿ ನಾಯಿ ರನ್ವೇಗೆ ಪ್ರವೇಶಿಸಿದ ನಿದರ್ಶನಗಳಿವೆ. ಆದರೆ ಆ ಪ್ರದೇಶವನ್ನು ಮೈದಾನದ ಸಿಬ್ಬಂದಿ ತಕ್ಷಣವೇ ತೆರವುಗೊಳಿಸುತ್ತಾರೆ. ಕಳೆದ ಒಂದೂವರೆ ವರ್ಷಗಳ ನನ್ನ ಅಧಿಕಾರಾವಧಿಯಲ್ಲಿ ಇದು ಮೊದಲ ಘಟನೆಯಾಗಿದೆ ಎಂದು ಎಸ್ವಿಟಿ ಧನಂಜಯ ರಾವ್ ಅವರು ಹೇಳಿದರು.
ಟಾಟಾ ಎಸ್ಐಎ ಏರ್ಲೈನ್ಸ್ ಲಿಮಿಟೆಡ್ ವಿಸ್ತಾರಾ ಎಂದು ಕಾರ್ಯನಿರ್ವಹಿಸುತ್ತಿದೆ. ಇದು ಗುರುಗ್ರಾಮ್ನಲ್ಲಿ ನೆಲೆಗೊಂಡಿರುವ ಭಾರತೀಯ ಪೂರ್ಣ-ಸೇವಾ ವಿಮಾನಯಾನ ಸಂಸ್ಥೆಯಾಗಿದ್ದು, ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತನ್ನ ಕೇಂದ್ರವನ್ನು ಹೊಂದಿದೆ. ಟಾಟಾ ಸನ್ಸ್ ಮತ್ತು ಸಿಂಗಾಪುರ್ ಏರ್ಲೈನ್ಸ್ ನಡುವಿನ ಜಂಟಿ ಉದ್ಯಮವಾದ ವಾಹಕವು 9 ಜನವರಿ 2015 ರಂದು ದೆಹಲಿ ಮತ್ತು ಮುಂಬೈ ನಡುವಿನ ತನ್ನ ಉದ್ಘಾಟನಾ ವಿಮಾನದೊಂದಿಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ











Click it and Unblock the Notifications