ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ, 4 ಪಿವಿಆರ್ ಟಿಕೆಟ್ ಗೆಲ್ಲಿ!
ಬೆಂಗಳೂರು, ಜ.19: ನಗರವಾಸಿಗಳ ಮುಂದೆ ಒಂದು ಅರ್ಥಪೂರ್ಣ ಸಮೀಕ್ಷೆಯನ್ನು ಎಂಐಟಿಯ ವಿದ್ಯಾರ್ಥಿ ಹಾಗೂ ಐಐಎಂ-ಬಿ ಹಮ್ಮಿಕೊಂಡಿದೆ. ವಾಟರ್ ಟ್ಯಾಂಕರ್ ಬೆಲೆ ತಾರತಮ್ಯದ ಬಗ್ಗೆ ಕೂಲಂಕುಷ ಮಾಹಿತಿ ಕಲೆ ಹಾಕಲು 'ನೀವು ಕುಡಿಯುವ ನೀರಿಗೆ ಎಷ್ಟು ಬೆಲೆ ತೆರುತ್ತಿದ್ದೀರಾ? ಎಂಬ ಪ್ರಶ್ನೆಯೊಂದಿಗೆ ಸಮೀಕ್ಷೆ ಆರಂಭಿಸಲಾಗುತ್ತಿದೆ.
ಬೆಂಗಳೂರಿನಲ್ಲಿ ನೀರಿನ ಬಳಕೆ ಸ್ವರೂಪಗಳನ್ನು ಮತ್ತು ನೀರಿನ ಟ್ಯಾಂಕರ್ ಉದ್ಯಮದ ಕ್ರಿಯಾಶೀಲತೆಯನ್ನು ಉತ್ತಮವಾಗಿ ತಿಳಿಯಲು ಉತ್ಸುಕರಾಗಿದ್ದೇವೆ.ನಾವು ನಿಮ್ಮ ಬೆಂಬಲ ಮತ್ತು ನಿಮ್ಮ ಉತ್ತರಗಳನ್ನು ಮಹತ್ತರವಾಗಿ ಪ್ರಶಂಸಿಸುತ್ತೇವೆ. ಎಲ್ಲಾ ಮಾಹಿತಿಗಳನ್ನು ಗೌಪ್ಯವಾಗಿಡಲಾಗುವುದು ಎಂದು ಸಮೀಕ್ಷೆ ಪುಟದಲ್ಲಿ ಹೇಳಲಾಗಿದೆ.
Massachusetts Institute of Technology (MIT)ಯ ನಗರ ಅಧ್ಯಯನ ಹಾಗೂ ಯೋಜನೆ ವಿಭಾಗದ ವಿದ್ಯಾರ್ಥಿ ಅನಿರುದ್ಧ್ ರಾಜಶೇಖರ್ ಹಾಗೂ ಬೆಂಗಳೂರಿನ ಐಐಎಂನ ನ್ಯೂ ರಿಯಲ್ ಎಸ್ಟೇಟ್ ಯೋಜನೆ ನಡೆಸುತ್ತಿರುವ ಈ ಸಮೀಕ್ಷೆಯಿಂದ ನಗರದ ಕುಡಿಯುವ ನೀರಿನ ಸಮಸ್ಯೆಗೆ ಒಂದು ಪರಿಹಾರ ಕಾಣುವ ಸಾಧ್ಯತೆಯಿದೆ.

ನೀವು ಆನ್ ಲೈನ್ ಅರ್ಜಿಯಲ್ಲಿ ತುಂಬಿದ ಮಾಹಿತಿಯನ್ನು ಗೌಪ್ಯವಾಗಿಡಲಾಗುತ್ತದೆ. ಸಮೀಕ್ಷೆಯ ಅಂತಿಮ ವರದಿಯನ್ನು ಮಾತ್ರ ಎಂಐಟಿ, ಐಐಎಂ ಬೆಂಗಳೂರು ಹಾಗೂ ಸಿಟಿಜನ್ ಮ್ಯಾಟರ್ಸ್ ವೆಬ್ ತಾಣದಲ್ಲಿ ಪ್ರಕಟಿಸಲಾಗುತ್ತದೆ.
ಈ ಸಮೀಕ್ಷೆಯಲ್ಲಿ ಹೆಚ್ಚಿನ ಜನ ಪಾಲ್ಗೊಳ್ಳುವಂತೆ ಮಾಡಲು ಅದೃಷ್ಟವಂತರಿಗೆ ಪಿವಿಆರ್ ನಲ್ಲಿ ಸಿನಿಮಾ ನೋಡುವ ಅವಕಾಶ ಲಭ್ಯವಾಗಲಿದೆ. ಫೆ.20, 2015ರಂದು ಸಮೀಕ್ಷೆ ಮುಕ್ತಾಯಗೊಳ್ಳಲಿದ್ದು ಅಂದೇ ಮೂವರು ಲಕ್ಕಿ ಡ್ರಾ ವಿಜೇತರಿಗೆ ತಲಾ ನಾಲ್ಕು ಪಿವಿಆರ್ ಟಿಕೆಟ್ ವಿತರಿಸಲಾಗುತ್ತದೆ.
ಅರ್ಜಿ ತುಂಬಲು ಇಲ್ಲಿ ಕ್ಲಿಕ್ ಮಾಡಿ
ಗೃಹ ಉಪಯೋಗಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವ ನೀರಿನ ದರಕಗಳನ್ನು ನವೆಂಬರ್ 2014ರಲ್ಲಿ ಏರಿಕೆ ಮಾಡಲಾಗಿತ್ತು.[ಕಾವೇರಿ ನೀರಿನ ದರ ಏರಿಕೆ ಶಾಕ್]
ರಾಜ್ಯದಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ 1,800 ಹಳ್ಳಿಗಳನ್ನು ಗುರುತಿಸಲಾಗಿದ್ದು, ಇದಕ್ಕಾಗಿ 5.2ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ನೀರಿನ ಕೊರತೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. [ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ]
ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಇದ್ದರೆ 1800-425-8666 ಸಂಖ್ಯೆಗೆ ಶುಲ್ಕರಹಿತವಾಗಿ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ










Click it and Unblock the Notifications