ದುಡಿಮೆಗೆ ಅಡ್ಡಿಯಾಗದ ಅಂಗವೈಕಲ್ಯ: ಬೆಂಗಳೂರಿನ ಸ್ವಿಗ್ಗಿ ಡೆಲಿವರಿ ಏಜೆಂಟ್ಗೆ ನೆಟ್ಟಿಗರ ಬಹುಪರಾಕ್
ಬೆಂಗಳೂರು, ಆಗಸ್ಟ್ 12: ಬದುಕುವ ಛಲವೊಂದಿದ್ದರೆ ನೂರಾರು ದಾರಿಗಳಿವೆ. ಸಾಧನೆ ಮಾಡಲೇಬೇಕೆಂದುಕೊಂಡವರಿಗೆ ಅಂಗವಿಕಲತೆ ಎಂದಿಗೂ ಅಡ್ಡಿಯಾಗಲಾರದು. ಅಂಗವೈಕಲ್ಯವನ್ನೂ ಮೀರಿ ಸಾಧನೆ ಮಾಡಿದ ಹಲವು ಕಥೆಗಳು ನಮ್ಮ ಮುಂದಿವೆ, ಇದೂ ಅದೇ ರೀತಿ ಒಬ್ಬ ವ್ಯಕ್ತಿಯ ಕಥೆ.
ರೋಹಿತ್ ಕುಮಾರ್ ಸಿಂಗ್ ಎನ್ನುವ ಬೆಂಗಳೂರಿನ ವ್ಯಕ್ತಿಯೊಬ್ಬರು ತಾವು ಭೇಟಿಯಾದ ವಿಶೇಷ ವ್ಯಕ್ತಿಯೊಬ್ಬರ ಬಗ್ಗೆ ವಿವರವಾಗಿ ಬರೆದುಕೊಂಡಿದ್ದು, ಆ ಪೋಸ್ಟ್ ಈಗ ವೈರಲ್ ಆಗಿದೆ.
ಭಾನುವಾರ ಎಂದಿನಂತೆ ಕಚೇರಿಗೆ ರಜೆ ಇದ್ದುದ್ದರಿಂದ ರೋಹಿತ್ ಕುಮಾರ್ ಸಿಂಗ್ ನಿದ್ದೆಯಿಂದ ತಡವಾಗಿ ಎದ್ದಿದ್ದಾರೆ. ಸ್ವಿಗ್ಗಿ ಮೂಲಕ ಉಪಹಾರಕ್ಕಾಗಿ ಆರ್ಡರ್ ಮಾಡಿದ್ದಾರೆ. ನಿರೀಕ್ಷಿತ ಸಮಯಕ್ಕೆ ಸ್ವಿಗ್ಗಿ ಡೆಲಿವರಿ ಏಜೆಂಟ್ ಬರದಿದ್ದಾಗ ರೋಹಿತ್ ಕುಮಾರ್ ಕರೆ ಮಾಡಿದ್ದಾರೆ, ಆ ಕಡೆಯಿಂದ ಕರೆ ಸ್ವೀಕರಿಸಿದ ಏಜೆಂಟ್, ಐದು ನಿಮಿಷಗಳಲ್ಲೇ ಬರುವುದಾಗಿ ತಿಳಿಸಿದ್ದಾರೆ.

ಐದು ನಿಮಿಷಗಳಾದರೂ ಉಪಾಹಾರ ಬರದಿದ್ದಾಗ ರೋಹಿತ್ ಕುಮಾರ್ ಸಿಂಗ್ ಸಹನೆ ಕಳೆದುಕೊಂಡಿದ್ದಾರೆ. ಮತ್ತೆ ಸ್ವಿಗ್ಗಿ ಡೆಲಿವರಿ ಏಜೆಂಟ್ಗೆ ಕರೆ ಮಾಡಿ ಹಸಿವಾಗುತ್ತಿದೆ ಬೇಗ ಬನ್ನಿ ಎಂದು ಮನವಿ ಮಾಡಿದ್ದಾರೆ. ಕರೆ ಸ್ವೀಕರಿಸಿದ ಆ ವ್ಯಕ್ತಿ ಪುನಃ ಸಮಾಧಾನದ ಧ್ವನಿಯಲ್ಲಿ ಐದು ನಿಮಿಷಗಳಲ್ಲೇ ಬರುವುದಾಗಿ ತಿಳಿಸಿದ್ದಾರೆ.
ಬಾಗಿಲು ತೆರೆದು ಶಾಕ್ ಆದ ರೋಹಿತ್ ಕುಮಾರ್; ಮುಂದಿನ 5-10 ನಿಮಿಷಗಳಲ್ಲೇ ಡೋರ್ ಬೆಲ್ ಶಬ್ದ ಮಾಡಿದೆ. ಅಸಹನೆಯಿಂದಲೇ ಹೋಗಿ ಬಾಗಿಲು ತೆರೆದ ರೋಹಿತ್ ಶಾಕ್ ಆಗಿದ್ದಾರೆ. ಎದುರಿನಲ್ಲಿ ಊರುಗೋಲಿನ ಸಹಾಯದಿಂದ ನಿಂತಿದ್ದ ವ್ಯಕ್ತಿಯೊಬ್ಬರು ರೋಹಿತ್ ಕುಮಾರ್ ಸಿಂಗ್ ಆರ್ಡರ್ ಮಾಡಿದ್ದ ಆಹಾರವನ್ನು ಹಿಡಿದು ನಗುತ್ತಾ ನಿಂತಿದ್ದರು. ಸ್ವಿಗ್ಗಿ ಡೆಲಿವರಿ ಎಕ್ಸಿಕ್ಯೂಟಿವ್ ಕೃಷ್ಣಪ್ಪ ರಾಥೋಡ್ ಎನ್ನುವ ವ್ಯಕ್ತಿ ರೋಹಿತ್ ಕುಮಾರ್ ಸಿಂಗ್ ಎದುರಲ್ಲಿದ್ದರು.
"40 ವರ್ಷ ವಯಸ್ಸಿನ ಬೂದು ಕೂದಲು, ಊರುಗೋಲುಗಳಿಂದ ತನ್ನನ್ನು ತಾನು ಸಮತೋಲನಗೊಳಿಸುತ್ತಿದ್ದ ವ್ಯಕ್ತಿ ನನ್ನನ್ನು ನೋಡಿ ನಗುತ್ತಿದ್ದರು. ನನ್ನ ವರ್ತನೆ ಬಗ್ಗೆ ನನಗೆ ನಾಚಿಕೆಯಾಯಿತು. ನಾನು ತಕ್ಷಣವೇ ಅವನಲ್ಲಿ ಕ್ಷಮೆಯಾಚಿಸಿದೆ ಮತ್ತು ಅವರ ಜೊತೆ ಮಾತನಾಡಲು ಪ್ರಯತ್ನಿಸಿದೆ" ಎಂದು ರೋಹಿತ್ ಹೇಳಿದರು.

ಕೋವಿಡ್ನಿಂದ ಕೆಲಸ ಕಳೆದುಕೊಂಡ ಕೃಷ್ಣಪ್ಪ; ಸಿಕ್ಕ ಎರಡು ಮೂರು ನಿಮಿಷಗಳ ಕಾಲವಕಾಶದಲ್ಲೇ ರೋಹಿತ್ ಕುಮಾರ್ ಸಿಂಗ್ ಸ್ವಿಗ್ಗಿ ಡೆಲಿವರಿ ಎಕ್ಸಿಕ್ಯೂಟಿವ್ ಕೃಷ್ಣಪ್ಪ ರಾಥೋಡ್ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಕೆಫೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣಪ್ಪ ಕೋವಿಡ್ ಲಾಕ್ಡೌನ್ ವೇಳೆಯಲ್ಲಿ ಕೆಲಸ ಕಳೆದುಕೊಂಡರು.
ನಂತರ ಹೊಟ್ಟೆಪಾಡಿಗಾಗಿ ಸ್ವಿಗ್ಗಿ ಡೆಲಿವರಿ ಎಕ್ಸಿಕ್ಯೂಟಿವ್ ಆಗಿ ಕೆಲಸ ಆರಂಭಿಸಿದರು. ಅವರಿಗೆ ಮೂರು ಮಕ್ಕಳಿದ್ದಾರೆ. ಆದರೆ ಅವರ ಆರ್ಥಿಕ ಸ್ಥಿತಿಯಿಂದಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಬೆಂಗಳೂರಿಗೆ ಕರೆತರಲು ಸಾಧ್ಯವಾಗಲಿಲ್ಲ. ಮುಂಜಾನೆ ಎದ್ದೇಳುವುದರಿಂದ ಹಿಡಿದು ಇಡೀ ದಿನ ದಣಿವರಿಯಿಲ್ಲದೆ ದುಡಿಯುವವರೆಗೆ ಎಲ್ಲ ಕಷ್ಟಗಳನ್ನೂ ಧಿಕ್ಕರಿಸುವ ಮಹಾಶಕ್ತಿ ಅವರಲ್ಲಿದೆ.
ಎರಡು ಮೂರು ನಿಮಿಷ ರೋಹಿತ್ ಮಾತನಾಡಿದ ಕೃಷ್ಣಪ್ಪ ತನ್ನ ಮುಂದಿನ ಆರ್ಡರ್ ನೀಡಲು ತಡವಾಗುತ್ತದೆ ಎಂದು ಹೊರಟು ಹೋಗಿದ್ದಾರೆ. ಈ ಹೃದಯಸ್ಪರ್ಶಿ ಕಥೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲವರು ಕೃಷ್ಣಪ್ಪ ಅವರ ದುಡಿಯುವ ಛಲಕ್ಕೆ ಸಲಾಂ ಎಂದಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ವ್ಯಕ್ತಿಯೊಬ್ಬರು, "ಅವನ ಹೃದಯ ಸ್ಪರ್ಶಿಸುವ ನಗು ಮತ್ತು ಅವನ ಕಣ್ಣುಗಳಲ್ಲಿರುವ ಬಹಳಷ್ಟು ಕನಸುಗಳು ನನ್ನ ದಿನವನ್ನು ಸುಂದರವಾಗಿಸಿದವು" ಎಂದು ಬರೆದುಕೊಂಡಿದ್ದಾರೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ












Click it and Unblock the Notifications