ರೋಗಿಗಳಿಂದ ಹಣ ವಸೂಲಿ, ಟಾಯ್ಲೆಟ್ ಸರಿಯಿಲ್ಲ! ಕೆ.ಸಿ.ಜನರಲ್ ಆಸ್ಪತ್ರೆ ಕಂಡು ಲೋಕಾಯುಕ್ತ ಶಾಕ್
ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯು ಈಗ ಹಲವು ವಿಚಾರಗಳಲ್ಲಿ ಕುಖ್ಯಾತಿಯಾಗಿದೆ. ಲೋಕಾಯುಕ್ತ ನ್ಯಾಯಾಧೀಶರಾದ ಬಿ.ಎಸ್.ಪಾಟೀಲ್, ನ್ಯಾ.ವೀರಪ್ಪ ಮತ್ತು ನ್ಯಾ.ಫಣೀಂದ್ರ ಅವರು ನಿನ್ನೆ ದಿಢೀರ್ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ ವೇಳೆ ಅಲ್ಲಿದ್ದ ಅವ್ಯವಸ್ಥೆಗಳನ್ನು ಕಂಡು ದಂಗಾಗಿದ್ದಾರೆ.
ಹೌದು ಕೆ.ಸಿ.ಜನರಲ್ ಆಸ್ಪತ್ರೆಯ ಅವ್ಯವಹಾರಗಳ ಬಗ್ಗೆ ಹಲವು ದೂರುಗಳು ಕೇಳಿಬಂದ ಹಿನ್ನೆಲೆ ನಿನ್ನೆ ದಿಢೀರ್ ಭೇಟಿ ನೀಡಿದ್ದಾರೆ. ಈ ವೇಳೆ ಅಲ್ಲಿ ತುರ್ತು ಚಿಕಿತ್ಸಾ ವಿಭಾಗಗಳಲ್ಲಿ ವೈದ್ಯರೇ ಇರಲಿಲ್ಲ. ಆಸ್ಪತ್ರೆಯಲ್ಲೇ ಲಭ್ಯವಿದ್ದರೂ ಹೊರಗಿನ ಔಷಧಿ ಖರೀದಿಗೆ ವೈದ್ಯರು ಚೀಟಿ ಬರೆದು ಕಳಿಸುವುದು ಸಹ ಕಂಡು ಬಂದಿದೆ ಎನ್ನಲಾಗಿದೆ.

ಇನ್ನು ಬೆಳಿಗ್ಗೆ 9 ಗಂಟೆಗೆ ರೋಗಿಗಳಿಗೆ ಚಿಕಿತ್ಸೆ ಆರಂಭಿಸುವಂತೆ ಸ್ಪಷ್ಟ ಸೂಚನೆ ನೀಡಿದ್ದರೂ 10 ಗಂಟೆಯಾದರೂ ಐವರು ವೈದ್ಯರಲ್ಲಿ ಒಬ್ಬರು ಮಾತ್ರ ಹಾಜರಿದ್ದರು. ಆಸ್ಪತ್ರೆಯಲ್ಲಿರೋ 10 ವಿಶೇಷ ವಾರ್ಡ್ಗಳಲ್ಲಿ ಕೇವಲ ಮೂರು ಮಾತ್ರ ಬಳಕೆಯಲ್ಲಿದೆ. ಚಿಕಿತ್ಸೆಗಾಗಿ ರೋಗಿಗಳು ಬಂದಿದ್ದರೂ ವಾರ್ಡ್ಗಳು ಖಾಲಿಯಾಗೇ ಇದ್ದವು ಎಂದು ಲೋಕಾಯುಕ್ತ ಪರಿಶೀಲನೆ ವೇಳೆ ತಿಳಿದುಬಂದಿದೆ.
ಗರ್ಭಾವಸ್ಥೆಯ ವಾರ್ಡ್ನಲ್ಲಿರುವ ಇಸಿಜಿ ಯಂತ್ರ ಮತ್ತು ಮಕ್ಕಳ ತೀವ್ರ ನಿಗಾ ಘಟಕದಲ್ಲಿನ ವೆಂಟಿಲೇಟರ್ ಕಾರ್ಯನಿರ್ವಹಿಸುತ್ತಿಲ್ಲ. ರೋಗಿಗಳಿಗೆ ಗುಣಮಟ್ಟವಲ್ಲದ ಔಷಧಗಳನ್ನು ನೀಡುತ್ತಿರುವುದು ಕಂಡುಬಂದಿದೆ. ಆಸ್ಪತ್ರೆಯಲ್ಲಿ ತುರ್ತು ಸಂದರ್ಭಗಳಲ್ಲಿ ಬಳಸುವ ಎಬಿಜಿ ಔಷಧಗಳೂ ಇರಲಿಲ್ಲ ಎಂದು ಗೊತ್ತಾಗಿದೆ.

ಆಸ್ಪತ್ರೆಯ ಕೆಲವು ಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ನೀರು ಸೋರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಸಿಬ್ಬಂದಿ ಹಾಗೂ ವೈದ್ಯರು ನೇಮಕಗೊಂಡಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಹಾಜರಾತಿ ಮತ್ತು ನಗದು ರಿಜಿಸ್ಟರ್ ಅನ್ನು ಸರಿಯಾಗಿ ನಿರ್ವಹಿಸಿಲ್ಲ. ಅವಧಿ ಮೀರಿದ ಔಷಧಿಗಳನ್ನು ವಿಲೇವಾರಿ ಕೂಡ ಮಾಡಿಲ್ಲ ಎಂದು ಗೊತ್ತಾಗಿದೆ. ಈ ಸಂಬಂಧ ಲೋಕಾಯುಕ್ತರು ನ್ಯಾಯಾಧೀಶರು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಮತ್ತು ಅಧಿಕಾರಿಗಳನ್ನು ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ.
ಇನ್ನು ಇದೇ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕಳೆದ ವಾರ ಗರ್ಭಿಣಿ ಮಹಿಳೆಯನ್ನು ದಾಖಲಿಸಿಕೊಳ್ಳಲು ವಿಳಂಬ ಮಾಡಿದ್ದರು. ಲಂಚ ಪಡೆದ ನಂತರವೇ ಅವರನ್ನು ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಒಳಗೆ ಬಿಟ್ಟರು ಎಂಬ ಆರೋಪ ಕೇಳಿಬಂದಿತ್ತು. ಪ್ರತಿನಿತ್ಯ 1,500 ರಿಂದ 1,750 ರೋಗಿಗಳು ಬರುವ ಈ ಆಸ್ಪತ್ರೆಯಲ್ಲಿ ಕೇವಲ ಒಂದು ಶೌಚಾಲಯ ಮಾತ್ರ ಬಳಕೆಯ ಸ್ಥಿತಿಯಲ್ಲಿದೆ. ಹೆರಿಗೆಯಾದ ಮಹಿಳೆಯರಿಗೆ ಸರಿಯಾದ ಕುಡಿಯುವ ನೀರಿನ ಘಟಕಗಳು ಹಾಗೂ ಬಿಸಿನೀರಿನ ವ್ಯವಸ್ಥೆ ಇಲ್ಲ ಎಂದು ಹೇಳಲಾಗಿದೆ.

ರೋಗಿಗಳಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆಯೂ ದೊಡ್ಡ ಆರೋಪವಿದ್ದು, ಮೊದಲಿನಿಂದಲೂ ಈ ದೂರುಗಳು ಕೇಳಿಬರುತ್ತಲೇ ಇವೆ. ಈ ಕಾರಣದಿಂದ ಲೋಕಾಯುಕ್ತ ನ್ಯಾಯಾಧೀಶರ ತಂಡ ದಾಳಿ ನಡೆಸಿ ಬಿಸಿ ಮುಟ್ಟಿಸಿದೆ. ಈ ವೇಳೆ ಲೋಕಾಯುಕ್ತ ಅಧಿಕಾರಿಗಳ ಮುಂದೆ ರೋಗಿಗಳು, ಅವರ ಕುಟುಂಬಸ್ಥರು ತಮ್ಮ ನೋವು ಬಿಚ್ಚಿಟ್ಟಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಕನಿಷ್ಠ ಅಂದರೂ 500 ರೂಪಾಯಿ ಕೊಡಲೇಬೇಕು ಅಂತಾರೆ. ಇಲ್ಲದಿದ್ರೆ ತಾಯಿ ಕಾರ್ಡೇ ಕೊಡಲ್ಲ ಎಂದು ಹೆದರಿಸುತ್ತಾರೆ ಎಂದು ಅಳಲು ತೋಡಿಕೊಂಡಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications