ಸಿ. ಅಶ್ವಥ್ 75 ಹೆಸರಿನಲ್ಲಿ ಮತ್ತೆ 'ಕನ್ನಡವೇ ಸತ್ಯ'
ಬೆಂಗಳೂರು, ಡಿ.14: ಗಾನ ಗಾರುಡಿಗ ದಿವಂಗತ ಡಾ. ಸಿ. ಅಶ್ವಥ್ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಡಿ.29 ರಂದು 'ಕನ್ನಡವೇ ಸತ್ಯ' ಹೆಸರಿನಲ್ಲಿ ಭಾವ ರೂಪಕ ಪ್ರತಿಷ್ಠಾನ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಭಾವ ರೂಪಕ ಪ್ರತಿಷ್ಠಾನದ ಅಧ್ಯಕ್ಷ ರವೀಂದ್ರನಾಥ್ ಮಾತನಾಡಿ, 'ಕನ್ನಡವೇ ಸತ್ಯ' ಎಂದು ಹಾಡಿದ ನಂತರ ಅಶ್ವಥ್ ಅವರು ಸಂಗೀತ ಲೋಕಕ್ಕೆ ಬಹಳ ಹತ್ತಿರವಾದರು, ಅವರು ಗಾಯನ ಲೋಕವನ್ನು ಬಿಟ್ಟು ಹೋದರು ಸಹ ಅವರ ನೆನಪು, ಒಡನಾಟ ಇನ್ನೂ ಎಲ್ಲರೊಂದಿಗೆ ಉಳಿದಿದೆ ಎಂದು ತಿಳಿಸಿದರು.
'ಕನ್ನಡವೇ ಸತ್ಯ' ಕಾರ್ಯಕ್ರಮವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಸಂಜೆ 5 ಗಂಟೆಗೆ ಏರ್ಪಡಿಸಲಾಗಿದ್ದು, ನಾಡಿನ ಅನೇಕ ಗಾಯಕರು, ರಂಗ ಕಲಾವಿದರು, ರಾಜಕೀಯ ರಂಗದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಅಂದು ಅಶ್ವಥ್ ಹಾಡಿದ ಹಲವಾರು ಗೀತೆಗಳನ್ನು ಹಾಡಲಾಗುವುದು ಹಾಗೂ ಅವರು ಬಳಸಿದ ಸಂಗೀತ ವಾದ್ಯಗಳನ್ನು ಪ್ರದರ್ಶಿಸಲಾಗುತ್ತದೆ.

ಗ್ಲೋಬಲ್ ಇವೆಂಟ್ ಸಂಸ್ಥೆ ಈ ಹಿಂದೆ ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಕನ್ನಡವೇ ಸತ್ಯ ಕಾರ್ಯಕ್ರಮ ಭಾರಿ ಯಶಸ್ವಿಯಾಗಿತ್ತು. ಸಿ. ಅಶ್ವಥ್ ಅವರು ಈ ಕಾರ್ಯಕ್ರಮಗಳ ಮೂಲಕ ಭಾವಗೀತೆ, ಸುಗಮ ಸಂಗೀತದ ಜನಪ್ರಿಯತೆಯನ್ನು ಮನೆ ಮನೆಗೆ ಕೊಂಡೊಯ್ದಿದ್ದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications