ಡಿಕೆ ಸುರೇಶ್ಗೆ ಮತದಾನ ಹಾಕಿದ ವಿಡಿಯೋ ಮಾಡಿ ಸ್ಟೇಟಸ್ ಇಟ್ಟ ಭೂಪ
ಬೆಂಗಳೂರು, ಏಪ್ರಿಲ್ 26: ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ಇಂದು ನಡೆಯಿತು. ಮತದಾನ ವೇಳೆ ತಾನು ಯಾರಿಗೆ ಮತ ಹಾಕಿದ್ದೇನೆ ಎಂಬುದರ ವಿಡಿಯೋ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆದಿದೆ.
ಹೌದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಡಿಕೆ ಸುರೇಶ್ ಅವರು ಕಣಕ್ಕಿಳಿದಿದ್ದರು. ಇವರಿಗೆ ಇಂದು ಶುಕ್ರವಾರ (ಏಪ್ರಿಲ್ 26) ರಂದು ಮತದಾನ ಮಾಡಿದ ವ್ಯಕ್ತಿಯೊಬ್ಬರು ಅದನ್ನು ವಿಡಿಯೋ ಮಾಡಿದ್ದಾರೆ. ಅಚ್ಚರಿ ಎಂದರೆ, ಈಗ ವಿಡಿಯೋ ಮಾಡುವವರೆಗೂ ಮತಗಟ್ಟೆಯಲ್ಲಿದ್ದ ಚುನಾವಣಾಧಿಕಾರಿಗಳು ಏನು ಮಾಡುತ್ತಿದ್ದರು ಎಂಬುದೇ ಪ್ರಶ್ನೆಯಾಗಿದೆ.

ಮತಗಟ್ಟೆಗಳಲ್ಲಿ ಮೊಬೈಲ್ ತರಬಾರದು ಎಂಬ ಸೂಚನೆ ಇದೆ. ಆದರೆ ಈ ವ್ಯಕ್ತಿ ಎಲ್ಲರಂತೆ ನೇರವಾಗಿ ಮತಗಟ್ಟೆಗೆ ತೆರಳಿ ಡಿಕೆ ಸುರೇಶ್ ಭಾವಚಿತ್ರ ಪಕ್ಷದ ಚಿಹ್ನ ಇರುವ ಇವಿಎಂ ಆಯ್ಕೆ ಬಟನ್ ಮೇಲೆ ಒತ್ತಿದ್ದಾನೆ. ಕೂಡಲೇ ಬೀಪ್ ಸೌಂಡ್ ಬಂದು, ಇಂಥವರಿಗೆ ವೋಟ್ ಮಾಡಿದ್ದಾಗಿ ಸಣ್ಣ ಕೆಂಪು ಲೈಟ್ ಕಾಣಿಸುತ್ತದೆ. ಇದೆಲ್ಲವು ಆತನ ಮೊಬೈಲ್ನಲ್ಲಿ ರೆಕಾರ್ಡ್ ಆಗಿದೆ.
ಈ ಮತದಾರ ತಾನು ಮತದಾನ ಮಾಡಿದ ವಿಡಿಯೋ ಮಾಡಿದ್ದಲ್ಲದೇ ಅದನ್ನು ವಾಟ್ಸಾಪ್ ಸ್ಟೇಟಸ್ಗೆ ಹಾಕಿಕೊಂಡಿದ್ದಾಗಿ ವರದಿ ಆಗಿದೆ. ಇಷ್ಟೆಲ್ಲ ಆದರೂ ಮತಗಟ್ಟೆಯಲ್ಲಿದ್ದ ಅಧಿಕಾರಿಗಳು, ಸಿಬ್ಬಂದಿ ಏನು ಮಾಡುತ್ತಿದ್ದು?. ಇಷ್ಟು ನಿರ್ಲಕ್ಷ್ಯ ವಹಿಸಿದ್ದು, ಯಾಕೆ ಎಂಬುದು ತಿಳಿಯಬೇಕಿದೆ.
ಬೆಂಗಳೂರು ಗ್ರಾಮಾಂತರದಲ್ಲಿ ಕಳೆದ 2019 ರಕ್ಕಿಂತ ಹೆಚ್ಚು ಮತದಾವಾಗಿ. ಆಗ 64.4 ರಷ್ಟು ಮತದಾನವಾಗಿತ್ತು. ಈ ಭಾರಿ ಹೆಚ್ಚು 67.29ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಮತದಾನ ನಿರೀಕ್ಷಿತ ಮಟ್ಟ ಮುಟ್ಟಿಲ್ಲ ಎನ್ನಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications