ಕೆಲಸಕ್ಕೆ ನೇಮಿಸಿಕೊಳ್ಳಲಿಲ್ಲವೆಂದು ಟಿಸಿಎಸ್ ಕ್ಯಾಂಪಸ್ಗೆ ಬಾಂಬ್ ಹಾಕಿರುವುದಾಗಿ ಕರೆ ಮಾಡಿದ ಮಹಿಳೆ!
ಬೆಂಗಳೂರು, ನವೆಂಬರ್ 16: ಬೆಂಗಳೂರಿನ ಟಿಸಿಎಸ್ ಕಚೇರಿಗೆ ಬಾಂಬ್ ಹಾಕಿರುವುದಾಗಿ ಬೆದರಿಕೆ ಕರೆ ಮಾಡಿದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಮಾಜಿ ಉದ್ಯೋಗಿಯೊಬ್ಬರನ್ನು ಪರಪ್ಪನ ಅಗ್ರಹಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಮಹಿಳೆಯನ್ನು ಬೆಳಗಾವಿಯ ಶಾಹು ನಗರದ ನಿವಾಸಿ ಶ್ರುತಿ ಶೆಟ್ಟಿ ಎಂದು ಗುರುತಿಸಲಾಗಿದೆ. ಎರಡನೇ ಬಾರಿಗೆ ಕೆಲಸಕ್ಕೆ ಅರ್ಜಿ ಸಲ್ಲಿಸಿದಾಗಲೂ ಕಂಪನಿಯು ತನ್ನನ್ನು ನೇಮಿಸಿಕೊಳ್ಳಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಆಕೆ ತನ್ನ ತಾಯಿಯ ಫೋನ್ನಿಂದ ಬಾಂಬ್ ಹಾಕಿರುವುದಾಗಿ ಕರೆ ಮಾಡಿದಳು ಎಂದು ಒಪ್ಪಿಕೊಂಡಿದ್ದಾಳೆ.

ಕ್ಯಾಂಪಸ್ನಿಂದ ಓಡಿದ ನೌಕರರು:
ಟಿಸಿಎಸ್ ಕ್ಯಾಂಪಸ್ನಲ್ಲಿ ಕೆಲಸ ಮಾಡುತ್ತಿದ್ದ ಎಲ್ಲಾ ಉದ್ಯೋಗಿಗಳಿಗೆ ಬೆದರಿಕೆ ಕರೆ ಬಂದ ನಂತರ ಹೊರ ಹೋಗುವಂತೆ ಸೂಚನೆ ನೀಡಲಾಯಿತು. ಬಾಂಬ್ ಬೆದರಿಕೆ ಕರೆ ಕುರಿತು ಕಚೇರಿ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿತ್ತು. ಬಾಂಬ್ ನಿಷ್ಕ್ರಿಯ ದಳ ಮತ್ತು ಸ್ನಿಫರ್ ಡಾಗ್ನೊಂದಿಗೆ ಪೊಲೀಸರು ಭೇಟಿ ನೀಡಿದರು. ಕಚೇರಿಯಲ್ಲಿ ಪರಿಶೀಲನೆ ನಡೆಸಿದಾಗ ಯಾವುದೇ ಬಾಂಬ್ ಪತ್ತೆಯಾಗಲಿಲ್ಲ. ಈ ಬಗ್ಗೆ ತನಿಖೆ ನಡೆಸಿದಾಗ ಬೆಳಗಾವಿಯಿಂದ ಕರೆ ಮಾಡಿರುವುದು ಪೊಲೀಸರಿಗೆ ಗೊತ್ತಾಯಿತು.
ಇತ್ತೀಚೆಗಷ್ಟೇ ಶೃತಿ ಶೆಟ್ಟಿಯನ್ನು ಕಂಪನಿಯಿಂದ ತಿರಿಸ್ಕರಿಸಲಾಗಿತ್ತು ಎಂದು ಗೊತ್ತಾಯಿತು. ಶೆಟ್ಟು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದಳು. ಅಲ್ಲದೆ ಟಿಸಿಎಸ್ನಲ್ಲಿ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದಳು. ಆದರೆ ಕಂಪೆನಿಯವರು ಆಕೆಯನ್ನು ಕೆಲಸಕ್ಕೆ ತೆಗೆದುಕೊಂಡಿರಲಿಲ್ಲ.
2023 ರಲ್ಲಿ ಎರಡೆರಡು ಕರೆ:
ಮೇ ತಿಂಗಳಲ್ಲಿ ಹೈದರಾಬಾದ್ನ ಟಿಸಿಎಸ್ ಕ್ಯಾಂಪಸ್ಗೆ ಮಾಜಿ ಉದ್ಯೋಗಿಯೊಬ್ಬರಿಂದ ಹುಸಿ ಬಾಂಬ್ ಕರೆ ಬಂದಿತ್ತು. ಹುಸಿ ಕರೆಯನ್ನು ಬೆಂಗಳೂರಿನಿಂದ ಮಾಡಲಾಗಿತ್ತು. ಬೆದರಿಕೆ ಕರೆ ಬಂದಾಗ ಕಂಪನಿಯು ಕೆಲಸ ಮಾಡುತ್ತಿದ್ದ 1,500 ಉದ್ಯೋಗಿಗಳನ್ನು ಕ್ಯಾಂಪಸ್ನಿಂದ ಹೊರ ಹೋಗುವಂತೆ ಸೂಚಿಸಿತ್ತು.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications