ವೈದ್ಯರ ನಿರ್ಲಕ್ಷ್ಯ ಆರೋಪ: ಇಂಜೆಕ್ಷನ್ ಅಡ್ಡಪರಿಣಾಮದಿಂದ ಯುವಕ ಸಾವು
ಬೆಂಗಳೂರು, ಆಗಸ್ಟ್ 19: 'ವೈದ್ಯೋ ನಾರಾಯಣೋ ಹರಿಃ' ಅಂದರೆ ಜೀವ ಉಳಿಸುವ ವೈದ್ಯರು ದೇವರ ಸಮಾನರು ಎನ್ನುವ ಮಾತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿಗಳು ಸಾವನ್ನಪ್ಪುತ್ತಿರುವ ಆರೋಪಗಳು ಕೂಡ ಹೆಚ್ಚಾಗಿದೆ. ಇದೀಗ ಇಂತಹ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ಯುವ ಉದ್ಯಮಿಯಾಗಿ ಭವಿಷ್ಯದಲ್ಲಿ ಬೆಟ್ಟದಷ್ಟು ಕನಸು ಹೊತ್ತಿದ್ದ ಯುವಕ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.
ಜ್ವರಕ್ಕೆಂದು ಪಡೆದ ಇಂಜೆಕ್ಷನ್ನ ಅಡ್ಡಪರಿಣಾಮದಿಂದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಂಗಡಿ ಮೂಲದ ಅಮರ್ ಶೆಟ್ಟಿ (31) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಮೃತ ಅಮರ್ ಶೆಟ್ಟಿ ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅಮರ್ ಶೆಟ್ಟಿ, ಆಗಸ್ಟ್ 13ರಂದು ಕೆ.ಪಿ ಅಗ್ರಹಾರದಲ್ಲಿರುವ ಭಾಗ್ಯ ಕ್ಲಿನಿಕ್ಗೆ ಹೋಗಿದ್ದರು. ಅಲ್ಲಿನ ವೈದ್ಯರು ಜ್ವರಕ್ಕಾಗಿ ಇಂಜೆಕ್ಷನ್ ನೀಡಿದ್ದಾರೆ ಎನ್ನಲಾಗಿದೆ.
ದಿನ ಕಳೆದಂತೆ ಇಂಜೆಕ್ಷನ್ ನೀಡಿದ್ದ ಜಾಗದಲ್ಲಿ ವೂತ ಕಾಣಿಸಿಕೊಂಡಿದೆ ಜೊತೆಗೆ ನೋವು ಕಾಣಿಸಿಕೊಂಡಿದೆ. ಬಳಿಕ ಬೇರೆ ಆಸ್ಪತ್ರೆಗಳಿಗೆ ತೆರಳಿದರೂ ಚಿಕಿತ್ಸೆ ಫಲಕಾರಿಯಾಗದೇ ಬಹು ಅಂಗಗಳ ವೈಫಲ್ಯದಿಂದ ಅಮರ್ ಶೆಟ್ಟಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ವೈದ್ಯರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ.
ಅಮರ್ ಶೆಟ್ಟಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ದಿವಂಗತ ಚಂದ್ರ ಶೆಟ್ಟಿ ಹಾಗೂ ಜ್ಯೋತಿ ಶೆಟ್ಟಿಯವರ ಎರಡನೇ ಪುತ್ರನಾಗಿದ್ದಾರೆ. ಕಳೆದ ಸುಮಾರು ಆರು ವರ್ಷಗಳ ಕಾಲ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಅಮರ್, ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದ್ದರು. ಸದ್ಯ ಅಮರ್ ಶೆಟ್ಟಿ ಮೃತದೇಹವು ಬೆಂಗಳೂರಿನಿಂದ ಹುಟ್ಟೂರಿಗೆ ರವಾನಿಸಲಾಗುತ್ತಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
ಮಾರ್ಚ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು?












Click it and Unblock the Notifications