Bengaluru Airport: ವಿಮಾನ ನಿಲ್ದಾಣ ಸ್ಪೋಟಿಸುವುದಾಗಿ ಯುವತಿಯಿಂದ ಬೆದರಿಕೆ
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಗೆ ತಪಾಸಣೆಗೆ ಸಹಕರಿಸದ ಯುವತಿ ವಿಮಾನ ನಿಲ್ದಾಣ ಸ್ಪೋಟಿಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಏರ್ಪೋರ್ಟ್ನಲ್ಲಿ ಆಗಿದ್ದೇನು?, ಮುಂದೆ ಓದಿ.
ಬೆಂಗಳೂರು, ಫೆಬ್ರವರಿ 06: ವಿಮಾನ ಹತ್ತಲು ಅವಸರದಲ್ಲಿದ್ದ ಯುವತಿಯೊಬ್ಬರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಸಿದ್ದಾರೆ. ಈ ಘಟನೆ ದೇವನಹಳ್ಳಿಯ ಬೆಂಗಳೂರು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫೆಬ್ರವರಿ 3ರಂದು ಶುಕ್ರವಾರ ನಡೆದಿದೆ.
ಬೆಂಗಳೂರು ಏರ್ಪೋರ್ಟ್ನಿಂದ ವಿಮಾನದಲ್ಲಿ ಯುವತಿಯೊಬ್ಬರು ಕೊಲ್ಕತ್ತಾಗೆ ಹೊರಟಿದ್ದರು. ಈ ವೇಳೆ ವಿಮಾನ ನಿಲ್ದಾಣದ ಬಾಗಿಲಲ್ಲಿ ತಪಾಸಣೆಗೆ ಆ ಯುವತಿ ಒಳಗಾಗಬೇಕಿತ್ತು. ಆದರೆ ಅವಸರದಲ್ಲಿದ್ದರು ಎನ್ನಲಾಗುತ್ತಿರುವ ಯುವತಿ ತಪಾಸಣೆಗೆ ಮುಂದಾದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್ಎಫ್) ಸಿಬ್ಬಂದಿ ಗೆ ಸಹಕರಿಸಿಲ್ಲ. ಮನ ಬಂದಂತೆ ಸಿಬ್ಬಂದಿ ಮೇಲೆ ರೇಗಾಡಿದ್ದಾರೆ.
ಹೀಗೆ ಸಾರ್ವಜನಿಕ ಸ್ಥಳದಲ್ಲಿ ರಂಪಾಟ ಮಾಡಿದ ಯುವತಿ ಹೆಸರು ಮಾನಸಿ ಸತೇಬೈನು (31) ಎಂದು ತಿಳಿದು ಬಂದಿದೆ. ನಿಲ್ದಾಣದ ನಿರ್ಗಮನ ದ್ವಾರ-6ಕ್ಕೆ ಬಂದ ಮಾನಸಿ ಸತೇಬೈನು ಏಕಾಎಕಿ ಒಳ ಪ್ರವೇಶಿಸಲು ಯತ್ನಿಸಿದ್ದಾರೆ. ಇದಕ್ಕೆ ಭದ್ರತಾ ಸಿಬ್ಬಂದಿ ಒಪ್ಪಿಲ್ಲ. ಇದೇ ಸ್ಥಳದಲ್ಲಿ ಬೇರೆ ಪ್ರಯಾಣಿಕರು ಒಳ ಹೋಗಲು ತಪಾಸಣೆಗಾಗಿ ಸಾಲುಗಟ್ಟಿ ನಿಂತಿದ್ದರು. ಅದನ್ನು ಲೆಕ್ಕಿಸದೇ ಒಳ ನುಗ್ಗಲು ಯುವತಿ ಪ್ರಯತ್ನಿಸಿದ್ದರು.

ವಿಮಾನ ಇನ್ನೇನು ಹೊರಡುವ ಸಮಯವಾಗಿದೆ ಎಂದು ಹೇಳಿ ಒಳ ಬಿಡಲು ಯುವತಿ ಒತ್ತಾಯಿಸಿದ್ದಾರೆ. ಭದ್ರತಾ ಸಿಬ್ಬಂದಿ ಮೇಲೆ ಒತ್ತಡ ಹೇರಿದ್ದಾರೆ. ಇದಕ್ಕೆ ಒಪ್ಪದೇ ತಪಾಸಣೆ ನಡೆಸಲು ಮುಂದಾದ ಭದ್ರತಾ ಸಿಬ್ಬಂದಿ ಜತೆ ಯುವತಿ ವಾಗ್ವಾದಕ್ಕೆ ಇಳಿದಿದ್ದಾರೆ. ಮಾತಿಗೆ ಮಾತು ಬೆಳೆದ ನಂತರ ಒಳ ಬಿಡಿ ಇಲ್ಲವೇ ಬಾಂಬ್ನಿಂದ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಸತೇಬೈನು ಬೆದರಿಕೆ ಒಡ್ಡಿದ್ದಾರೆ.
ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ
ಯುವತಿ ಸತೇಬೈನು ಮಾತು ಕೇಳುತ್ತಿದ್ದಂತೆ ಅದೇ ದ್ವಾರದ ಭಾಗಿಲಲ್ಲಿ ಸಾಲುಗಟ್ಟಿ ನಿಂತಿದ್ದ ಸಹ ಪ್ರಯಾಣಿಕರು ಆತಂಕಗೊಂಡಿದ್ದಾರೆ. ಸಹ ಪ್ರಯಾಣಿಕರ ಬಳಿ ತೆರಳಿ ಈ ದ್ವಾರದಲ್ಲಿ ಬಾಂಬ್ ಇದೇ ಎಲ್ಲರೂ ಓಡಿ ಹೋಗಿ ಎಂದು ಸುಳ್ಳು ಹೇಳಿ ಕೂಗಾಡಿದ್ದಾರೆ. ಸಾಲದೆಂಬಂತೆ ಸಿಐಎಸ್ಎಫ್ ಸಿಬ್ಬಂದಿ ಸಂದೀಪ್ ಸಿಂಗ್ ಎಂಬುವವರ ಶರ್ಟ್ ಕೊಳಪಟ್ಟಿ ಹಿಡಿದು ಹಲ್ಲೆಗೆ ಮುಂದಾಗಿದ್ದಾರೆ. ಸಿಬ್ಬಂದಿ ಮುಖಕ್ಕೆ ಬುದ್ದಿ, ಒದ್ದಿದ್ದಾರೆ ಎನ್ನಲಾಗಿದೆ. ಈ ಘಟನೆ ತಾರಕಕ್ಕೆರುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗುತ್ತು.

ಕರ್ತವ್ಯ ನಿರ್ವಹಣೆ ಅಡ್ಡಿ ಪಡಿಸಲಾಗಿದೆ ಎಂಬ ಆಧಾರದಲ್ಲಿ ರಂಪಾಟ ಮಾಡಿದ್ದ ಯುವತಿಯನ್ನು ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ದೇವನಹಳ್ಳಿ ವ್ಯಾಪ್ತಿಯ ಪೊಲೀಸ್ ಠಾಣೆಗೆ ಕರೆದೊಯ್ದು ಯುವತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ












Click it and Unblock the Notifications