Bengaluru Airport: ವಿಮಾನ ನಿಲ್ದಾಣ ಸ್ಪೋಟಿಸುವುದಾಗಿ ಯುವತಿಯಿಂದ ಬೆದರಿಕೆ
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಗೆ ತಪಾಸಣೆಗೆ ಸಹಕರಿಸದ ಯುವತಿ ವಿಮಾನ ನಿಲ್ದಾಣ ಸ್ಪೋಟಿಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಏರ್ಪೋರ್ಟ್ನಲ್ಲಿ ಆಗಿದ್ದೇನು?, ಮುಂದೆ ಓದಿ.
ಬೆಂಗಳೂರು, ಫೆಬ್ರವರಿ 06: ವಿಮಾನ ಹತ್ತಲು ಅವಸರದಲ್ಲಿದ್ದ ಯುವತಿಯೊಬ್ಬರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಸಿದ್ದಾರೆ. ಈ ಘಟನೆ ದೇವನಹಳ್ಳಿಯ ಬೆಂಗಳೂರು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫೆಬ್ರವರಿ 3ರಂದು ಶುಕ್ರವಾರ ನಡೆದಿದೆ.
ಬೆಂಗಳೂರು ಏರ್ಪೋರ್ಟ್ನಿಂದ ವಿಮಾನದಲ್ಲಿ ಯುವತಿಯೊಬ್ಬರು ಕೊಲ್ಕತ್ತಾಗೆ ಹೊರಟಿದ್ದರು. ಈ ವೇಳೆ ವಿಮಾನ ನಿಲ್ದಾಣದ ಬಾಗಿಲಲ್ಲಿ ತಪಾಸಣೆಗೆ ಆ ಯುವತಿ ಒಳಗಾಗಬೇಕಿತ್ತು. ಆದರೆ ಅವಸರದಲ್ಲಿದ್ದರು ಎನ್ನಲಾಗುತ್ತಿರುವ ಯುವತಿ ತಪಾಸಣೆಗೆ ಮುಂದಾದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್ಎಫ್) ಸಿಬ್ಬಂದಿ ಗೆ ಸಹಕರಿಸಿಲ್ಲ. ಮನ ಬಂದಂತೆ ಸಿಬ್ಬಂದಿ ಮೇಲೆ ರೇಗಾಡಿದ್ದಾರೆ.
ಹೀಗೆ ಸಾರ್ವಜನಿಕ ಸ್ಥಳದಲ್ಲಿ ರಂಪಾಟ ಮಾಡಿದ ಯುವತಿ ಹೆಸರು ಮಾನಸಿ ಸತೇಬೈನು (31) ಎಂದು ತಿಳಿದು ಬಂದಿದೆ. ನಿಲ್ದಾಣದ ನಿರ್ಗಮನ ದ್ವಾರ-6ಕ್ಕೆ ಬಂದ ಮಾನಸಿ ಸತೇಬೈನು ಏಕಾಎಕಿ ಒಳ ಪ್ರವೇಶಿಸಲು ಯತ್ನಿಸಿದ್ದಾರೆ. ಇದಕ್ಕೆ ಭದ್ರತಾ ಸಿಬ್ಬಂದಿ ಒಪ್ಪಿಲ್ಲ. ಇದೇ ಸ್ಥಳದಲ್ಲಿ ಬೇರೆ ಪ್ರಯಾಣಿಕರು ಒಳ ಹೋಗಲು ತಪಾಸಣೆಗಾಗಿ ಸಾಲುಗಟ್ಟಿ ನಿಂತಿದ್ದರು. ಅದನ್ನು ಲೆಕ್ಕಿಸದೇ ಒಳ ನುಗ್ಗಲು ಯುವತಿ ಪ್ರಯತ್ನಿಸಿದ್ದರು.

ವಿಮಾನ ಇನ್ನೇನು ಹೊರಡುವ ಸಮಯವಾಗಿದೆ ಎಂದು ಹೇಳಿ ಒಳ ಬಿಡಲು ಯುವತಿ ಒತ್ತಾಯಿಸಿದ್ದಾರೆ. ಭದ್ರತಾ ಸಿಬ್ಬಂದಿ ಮೇಲೆ ಒತ್ತಡ ಹೇರಿದ್ದಾರೆ. ಇದಕ್ಕೆ ಒಪ್ಪದೇ ತಪಾಸಣೆ ನಡೆಸಲು ಮುಂದಾದ ಭದ್ರತಾ ಸಿಬ್ಬಂದಿ ಜತೆ ಯುವತಿ ವಾಗ್ವಾದಕ್ಕೆ ಇಳಿದಿದ್ದಾರೆ. ಮಾತಿಗೆ ಮಾತು ಬೆಳೆದ ನಂತರ ಒಳ ಬಿಡಿ ಇಲ್ಲವೇ ಬಾಂಬ್ನಿಂದ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಸತೇಬೈನು ಬೆದರಿಕೆ ಒಡ್ಡಿದ್ದಾರೆ.
ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ
ಯುವತಿ ಸತೇಬೈನು ಮಾತು ಕೇಳುತ್ತಿದ್ದಂತೆ ಅದೇ ದ್ವಾರದ ಭಾಗಿಲಲ್ಲಿ ಸಾಲುಗಟ್ಟಿ ನಿಂತಿದ್ದ ಸಹ ಪ್ರಯಾಣಿಕರು ಆತಂಕಗೊಂಡಿದ್ದಾರೆ. ಸಹ ಪ್ರಯಾಣಿಕರ ಬಳಿ ತೆರಳಿ ಈ ದ್ವಾರದಲ್ಲಿ ಬಾಂಬ್ ಇದೇ ಎಲ್ಲರೂ ಓಡಿ ಹೋಗಿ ಎಂದು ಸುಳ್ಳು ಹೇಳಿ ಕೂಗಾಡಿದ್ದಾರೆ. ಸಾಲದೆಂಬಂತೆ ಸಿಐಎಸ್ಎಫ್ ಸಿಬ್ಬಂದಿ ಸಂದೀಪ್ ಸಿಂಗ್ ಎಂಬುವವರ ಶರ್ಟ್ ಕೊಳಪಟ್ಟಿ ಹಿಡಿದು ಹಲ್ಲೆಗೆ ಮುಂದಾಗಿದ್ದಾರೆ. ಸಿಬ್ಬಂದಿ ಮುಖಕ್ಕೆ ಬುದ್ದಿ, ಒದ್ದಿದ್ದಾರೆ ಎನ್ನಲಾಗಿದೆ. ಈ ಘಟನೆ ತಾರಕಕ್ಕೆರುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗುತ್ತು.

ಕರ್ತವ್ಯ ನಿರ್ವಹಣೆ ಅಡ್ಡಿ ಪಡಿಸಲಾಗಿದೆ ಎಂಬ ಆಧಾರದಲ್ಲಿ ರಂಪಾಟ ಮಾಡಿದ್ದ ಯುವತಿಯನ್ನು ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ದೇವನಹಳ್ಳಿ ವ್ಯಾಪ್ತಿಯ ಪೊಲೀಸ್ ಠಾಣೆಗೆ ಕರೆದೊಯ್ದು ಯುವತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications