ಬೆಂಗಳೂರು: 6 ವರ್ಷದ ನಂತರ ತಾಯಿಗೆ ಮೂಕ ಮಗನನ್ನು ದಕ್ಕಿಸಿಕೊಟ್ಟ ಆಧಾರ್ ಕಾರ್ಡ್
ಬೆಂಗಳೂರು, ಮಾರ್ಚ್ 12: ಯಲಹಂಕದ ಸಂತೆಯಲ್ಲಿ ಕಳೆದುಹೋಗಿದ್ದ ಮೂಕ ಮಗ ಆರು ವರ್ಷಗಳ ಪತ್ತೆಯಾಗಿದ್ದು, ಮಗನನ್ನು ನೋಡಿದ ತಾಯಿ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಬೆಂಗಳೂರಿನ ಯಲಹಂಕ ನಿವಾಸಿ ಪಾರ್ವತಮ್ಮ ಅವರಿಗೆ ಆರು ವರ್ಷಗಳ ಬಳಿಕ ಸಿಕ್ಕಿದ್ದಾನೆ. ಮಗನನನ್ನು ನೋಡಿದಾಗ ತಾಯಿಗಾದ ಸಂತೋಷವನ್ನು ವರ್ಣಿಸಲು ಪದಗಳೇ ಸಿಗದಂತಾಗಿತ್ತು.
ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿಯ ತರಕಾರಿ ವ್ಯಾಪಾರಿ ಪಾರ್ವತಮ್ಮ ಮಗನ ಜೊತೆ ವಾಸವಿದ್ದರು. ಪತಿ ಇಲ್ಲದ ಪಾರ್ವತಮ್ಮನಿಗೆ ಇಬ್ಬರು ಹೆಣ್ಣುಮಕ್ಕಳು, ಒಬ್ಬ ಮೂಕ ಮಗ ಇದ್ದಾರೆ. 6 ವರ್ಷಗಳ ಹಿಂದೆ ಭರತ್ ಯಲಹಂಕ ರೈತರ ಸಂತೆಯಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ತಾಯಿ ಯಲಹಂಕ ಪೊಲೀಸರಿಗೆ ದೂರು ನೀಡಿದ್ದರು. ಮಗನಿಗಾಗಿ ದೇಶದ ಎಲ್ಲಾ ದೇವಸ್ಥಾನಗಳಿಗೆ ಸುತ್ತಿ ಹರಕೆ ಹೊತ್ತು, ಮಗ ಭರತ್ಗಾಗಿ ಎಲ್ಲೆಡೆ ಹುಡುಕಾಡಿ ತಾಯಿ ಸೋತಿದ್ದರು.
ಯಲಹಂಕದಿಂದ ತಪ್ಪಿಸಿಕೊಂಡು ಮಹಾರಾಷ್ಟ್ರದ ನಾಗಪುರ ರೈಲ್ವೆ ನಿಲ್ದಾಣ ಸೇರಿದ್ದ ಭರತ್ನನ್ನು ರಕ್ಷಿಸಿ ಅಲ್ಲಿನ ಪುನರ್ವಸತಿ ಕೇಂದ್ರಕ್ಕೆ ಅಧಿಕಾರಿಗಳು ಸೇರಿಸಿದ್ದರು. 6 ವರ್ಷಗಳಿಂದ ಆಶ್ರಯ ಪಡೆದಿದ್ದ ಭರತ್ಗೆ ಆಧಾರ್ ಕಾರ್ಡ್ ಮಾಡಿಸಲು 2022ರ ಜನವರಿಯಲ್ಲಿ ಸ್ಥಳೀಯ ಆಧಾರ್ ಸೇವಾ ಕೇಂದ್ರಕ್ಕೆ ಭರತ್ನನ್ನು ಮಹೇಶ್ ಎಂಬ ಅಧಿಕಾರಿ ಕರೆದೊಯ್ದಿದ್ದರು. ಭರತ್ನ ಹೊಸ ಆಧಾರ್ ಕಾರ್ಡ್ ತಿರಸ್ಕೃತವಾದ ಬಗ್ಗೆ ಆಧಾರ್ ಸೇವಾಕೇಂದ್ರ ಅಧಿಕಾರಿಗಳು ಮಾಹಿತಿ ನೀಡಿದರು.

ಈಗಾಗಲೇ ಬೆಂಗಳೂರಿನಲ್ಲಿ ಬಿ. ಭರತ್ ಕುಮಾರ್ ಹೆಸರಿನಲ್ಲಿ ಆತನ ಕಾರ್ಡ್ ಚಾಲ್ತಿಯಲ್ಲಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಮಾಹಿತಿ ತಿಳಿದ ಕೂಡಲೇ ಭರತ್ ಪೋಷಕರ ವಿಳಾಸ ಪತ್ತೆಗೆ ನೆರವಾಗುವಂತೆ ಅಧಿಕಾರಿ ಮಹೇಶ್ ವಿನಂತಿಸಿದ್ದರು.
ಪುನರ್ವಸತಿ ಕೇಂದ್ರದ ಅಧಿಕಾರಿ ಮಹೇಶ್ ಮನವಿಗೆ ಸ್ಪಂದಿಸಿದ ಆಧಾರ್ ಸೇವಾ ಕೇಂದ್ರ, ಬಿ. ಭರತ್ ಕುಮಾರ್ ಹೆಸರಿನಲ್ಲಿದ್ದ ಬೆರಳಚ್ಚು ಹೋಲಿಕೆ ಮಾಡಿದಾಗ ಎರಡೂ ಮ್ಯಾಚ್ ಆಗಿತ್ತು. ಆಧಾರ್ ಮೂಲಕ ಭರತ್ನ ತಾಯಿ ಪಾರ್ವತಮ್ಮನ ಮೊಬೈಲ್ ನಂಬರ್ ಸಿಕ್ಕಿತ್ತು.

ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದ ಪುನರ್ವಸತಿ ಕೇಂದ್ರ, ಕೊನೆಗೂ ನಾಗ್ಪುರದ ಅಧಿಕಾರಿಗಳು ಯಲಹಂಕ ಪೊಲೀಸರನ್ನು ಸಂಪರ್ಕಸಿದರು. ಭರತ್ ತಾಯಿನ ಪತ್ತೆ ಹಚ್ಚಿದ್ದ ಯಲಹಂಕ ಠಾಣೆ ಇನ್ಸ್ಪೆಕ್ಟರ್ ಸತ್ಯನಾರಾಯಣ್, ಪಾರ್ವತಮ್ಮರನ್ನು ಪೊಲೀಸರ ಜೊತೆ ನಾಗ್ಪುರಕ್ಕೆ ಕಳುಹಿಸಿದ್ದರು.

ಮಾರ್ಚ್ 7ರಂದು ಕುಟುಂಬದ ಜೊತೆ ನಾಗ್ಪುರಕ್ಕೆ ತೆರಳಿ ಮಗನನ್ನು ಕಂಡು ತಾಯಿ ಪಾರ್ವತಮ್ಮ ಭಾವುಕರಾಗಿ ತಬ್ಬಿ ಮುದ್ದಾಡಿದರು. ವರ್ಷಗಳ ಬಳಿಕ ಕೊನೆಗೂ ತಾಯಿಯ ಮಡಿಲು ಸೇರಿದ ಮಗ ಭರತ್ನನ್ನು ತಾಯಿ ಪಾರ್ವತಮ್ಮ ಮನೆಗೆ ಕರೆ ತಂದಿದ್ದಾರೆ. ನಾಗಪುರ ಪುನರ್ವಸತಿ ಕೇಂದ್ರದ ಅಧಿಕಾರಿಗಳು ಮತ್ತು ಆಧಾರ್ ಸೇವಾ ಕೇಂದ್ರದ ಅಧಿಕಾರಿಗಳ ಕಾರ್ಯಕ್ಕೆ ದೊಡ್ಡ ನಮನ ಸಲ್ಲಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications