ಬಿಜೆಪಿ ಕಾರ್ಯಕರ್ತರಿಂದ ನಿಂದನೆ, ಬೆದರಿಕೆ: ಪೊಲೀಸರಿಗೆ ಎಎಪಿ ದೂರು
ಬೆಂಗಳೂರು, ಜನವರಿ 09: ಆಮ್ ಆದ್ಮಿ ಪಾರ್ಟಿ (ಎಎಪಿ) ಮುಖಂಡ ಹಾಗೂ ಮಾಜಿ ನ್ಯಾಯಾಧೀಶ ಎಂ.ವೆಂಕಟರಮಣಪ್ಪರವರಿಗೆ ಜೀವ ಬೆದರಿಕೆ ಹಾಕಿದ್ದ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪಕ್ಷದ ಮುಖಂಡರು ಪೊಲೀಸರಿಗೆ ದೂರು ನೀಡಿದೆ.
ಎಎಪಿ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ನಮ್ಮ ಪಕ್ಷದ ಮುಖಂಡ ಎಂ.ವೆಂಕಟರಮಣಪ್ಪ ಅವರಿಗೆ ಬಿಜೆಪಿ ಕಾರ್ಯಕರ್ತನೊಬ್ಬ ಚಾಕು ತೋರಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಜೀವ ಬೆದರಿಕೆ ಹಾಕಿದ್ದಾರೆ. ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಜೀವನ್ ಭೀಮಾ ನಗರದಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದರು.
ಸಿ.ವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದ ಮಲ್ಲೇಶ್ ಪಾಳ್ಯದಲ್ಲಿ ಆಮ್ ಆದ್ಮಿ ಪಾರ್ಟಿಯ ನೂತನ ಕಚೇರಿ ಉದ್ಘಾಟನೆ ಮಾಡಲಾಯಿತು. ಉದ್ಘಾಟನಾ ಕಾರ್ಯಕ್ರಮ ಮುಗಿಸಿಕೊಂಡು ಎಂ.ವೆಂಕಟರಮಣಪ್ಪರವರು ಹೋಟೆಲ್ಗೆ ತೆರಳಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ನಾಲ್ಕು ಗೂಂಡಾಗಳೊಂದಿಗೆ ಬಂದು ಅವರಿಗೆ ಚಾಕು ತೋರಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಪಕ್ಷದ ಕಚೇರಿ ಹಾಗೂ ಅವರ ಹೋಟೆಲನ್ನು ಖಾಲಿ ಮಾಡಬೇಕು ಎಂದು ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದರು.

ಸಿ.ವಿ ರಾಮನ್ ನಗರದ ಬಿಜೆಪಿ ಶಾಸಕ ಎಸ್.ರಘುರವರಿಗೆ ಆಮ್ ಆದ್ಮಿ ಪಾರ್ಟಿಯ ಭಯ ಶುರುವಾಗಿದೆ. ಕ್ಷೇತ್ರದೆಲ್ಲೆಡೆ ಆಮ್ ಆದ್ಮಿ ಪಾರ್ಟಿಗೆ ಉತ್ತಮ ಜನ ಬೆಂಬಲ ವ್ಯಕ್ತವಾಗುತ್ತಿರುವುದು ಶಾಸಕರ ನಿದ್ದೆ ಗಡೆಸಿದೆ. ಆದ್ದರಿಂದ ಬೆಂಬಲಿಗರನ್ನು ಛೂ ಬಿಟ್ಟು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಇಂತಹ ದುಷ್ಕೃತ್ಯಗಳಿಗೆ ಎಎಪಿ ನಾಯಕರು ಹೆದರುವುದಿಲ್ಲ. ಬಿಜೆಪಿಯ ಭ್ರಷ್ಟ ಆಡಳಿತವನ್ನು ಕೊನೆಗಾಣಿಸಿ, ಪಾರದರ್ಶಕ ಹಾಗೂ ಜನಪರ ಆಡಳಿತವನ್ನು ಅಧಿಕಾರಕ್ಕೆ ತರುವ ನಮ್ಮ ಪ್ರಯತ್ನ ಮುಂದುವರಿಯುತ್ತದೆ. ನಾವು ಇದರಲ್ಲಿ ಯಶಸ್ಸು ಕಾಣಲಿದ್ದೇವೆ ಎಂದು ಅವರು ಎಚ್ಚರಿಕೆ ನೀಡಿದರು.

ನಂತರ ಮಾತನಾಡಿದ ಮಾಜಿ ನ್ಯಾಯಾಧೀಶ ಎಂ.ವೆಂಕಟರಮಣಪ್ಪ ಅವರು, ನಾವು ಕಾನೂನು ಪಾಲನೆಯಲ್ಲಿ ನಂಬಿಕೆ ಹೊಂದಿದ್ದೇವೆ. ಬಿಜೆಪಿ ಕೂಡ ಇದೇ ಮಾರ್ಗದಲ್ಲಿ ಸಾಗಬೇಕು ಎಂದು ಬಯಸುತ್ತೇವೆ. ಅದರ ಬದಲು, ರೌಡಿಗಳನ್ನು ಬಿಟ್ಟು ಧಮಕಿ ಹಾಕಿಸುವುದು ಸರಿಯಲ್ಲ. ಬಿಜೆಪಿ ಗೂಂಡಾಗಿರಿಗೆ ಅಂತ್ಯ ಹಾಡಲು ಸಿ.ವಿ ರಾಮನ್ ನಗರದ ಜನರು ಮುಂದಾಗಬೇಕು. ಶಾಸಕರ ಬೆಂಬಲಿಗರಿಂದ ತೊಂದರೆ ಅನುಭವಿಸುವವರು ನಮ್ಮ ಕಚೇರಿಗೆ ಮಾಹಿತಿ ನೀಡಬಹುದು. ಕ್ಷೇತ್ರದ ಜನರನ್ನು ಗೂಂಡಾಗಿರಿಯಿಂದ ಕಾಪಾಡಲು ಆಮ್ ಆದ್ಮಿ ಪಾರ್ಟಿ ಸದಾ ಸಿದ್ಧವಾಗಿರುತ್ತದೆ ಎಂದು ಕರೆ ನೀಡಿದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications