ಲೋಕಾಯುಕ್ತ ಸಂಸ್ಥೆ ಘನತೆ ಉಳಿಸಲು ಎಎಪಿ ಕರೆ
ಬೆಂಗಳೂರು, ಜೂ.15: ಲೋಕಾಯುಕ್ತ ಸಂಸ್ಥೆ ಮೇಲಿನ ಘನತೆ ಹಾಗೂ ನಂಬಿಕೆಯನ್ನು ಪುನರ್ ಸ್ಥಾಪಿಸಲು ಬೇಕಾದ ಅಗತ್ಯ ಕ್ರಮವನ್ನು ತೆಗೆದುಕೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ಆಮ್ ಆದ್ಮಿ ಪಾರ್ಟಿ-ಕರ್ನಾಟಕ ಆಗ್ರಹಿಸಿದೆ.
ಕರ್ನಾಟಕ ಲೋಕಾಯುಕ್ತ ಶಾಸನವು ಇಡೀ ದೇಶದಲ್ಲಿಯೇ ಮೊದಲ ಸ್ವತಂತ್ರ ಭ್ರಷ್ಟಾಚಾರ ನಿಗ್ರಹ ಸಂಸ್ಥೆಯಾಗಿತ್ತು. ಅದಲ್ಲದೇ ಕೇಂದ್ರದ ಲೋಕಪಾಲ್ ಹಾಗೂ ಇತರ ರಾಜ್ಯಗಳಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತಕ್ಕೆ ಬೇಡಿಕೆ ಬರಲು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಅದ್ಭುತ ಕಾರ್ಯವೈಖರಿಯೂ ಕಾರಣವಾಗಿತ್ತು ಎಂದು ಆಮ್ ಆದ್ಮಿ ಪಕ್ಷದ ವಕ್ತಾರರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. [ಕರ್ನಾಟಕದಿಂದ ವರ್ಗಾವಣೆ ಬಯಸಿಲ್ಲ: ಸೋನಿಯಾ ನಾರಂಗ್]
ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಲೋಕಾಯುಕ್ತರಾಗಿದ್ದಾಗ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಜನರ ಮನಸ್ಸಿನಲ್ಲಿ ಅಪಾರವಾದ ನಂಬಿಕೆ ಹಾಗೂ ಘನತೆಯನ್ನು ಗಳಿಸಿಕೊಂಡಿತ್ತು.

ಆದರೆ ಇತ್ತೀಚಿನ ಬೆಳವಣೆಗೆಗಳು ಹಾಗೂ ಲೋಕಾಯುಕ್ತ ಸಂಸ್ಥೆಯ ಒಳಗಿನಿಂದಲೇ ಕೇಳಿಬರುತ್ತಿರುವ ಆರೋಪಗಳು, ಲೋಕಾಯುಕ್ತ ಅಧಿಕಾರದ ದುರುಪಯೋಗ, ಜನರಲ್ಲಿ ಲೋಕಾಯುಕ್ತ ಸಂಸ್ಥೆ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡಬಹುದಾಗಿದೆ. [ಐಪಿಎಸ್ ಅಧಿಕಾರಿಗಳು ಗಿಫ್ಟ್ ಕಂಡ್ರೆ ಬೆಚ್ಚುವರಯ್ಯ!]
ಆಮ್ ಆದ್ಮಿ ಪಾರ್ಟಿ-ಕರ್ನಾಟಕ, ಕರ್ನಾಟಕ ಲೋಕಾಯುಕ್ತಕ್ಕೆ ತಮ್ಮ ಕಾರ್ಯವೈಖರಿಯಿಂದ ಜನರ ನಂಬಿಕೆಯನ್ನು ಪುನಃ ಗಳಿಸುವತ್ತ ಗಮನ ಹರಿಸಬೇಕೆಂದೂ, ಹಾಗೂ ರಾಜ್ಯ ಸರ್ಕಾರಕ್ಕೆ ಲೋಕಾಯುಕ್ತದ ಹೊಣೆಗಾರಿಕೆಯನ್ನು ಬಲ ಪಡಿಸುವ ಕಾನೂನು ಬದಲಾವಣೆ ತರಬೇಕೇ ಹೊರತು ಅದರ ಅಧಿಕಾರವನ್ನು ಕುಗ್ಗಿಸುವ ಬದಲಾವಣೆಗಳನ್ನಲ್ಲ ಎಂದು ವಿನಂತಿಸಿಕೊಂಡಿದೆ.
ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ, ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರರಾವ್, ಲೋಕಾಯುಕ್ತ ಎಡಿಜಿಪಿ ಪ್ರೇಮ್ಶೇಖರ್ ಮೀನಾ ಹಾಗೂ ರಿಜಿಸ್ಟರ್ಗೆ ರಹಸ್ಯ ಪತ್ರ ಬರೆದು, ಕೆಲ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸುವಂತೆ ಕೋರಿದ್ದನ್ನು ಇಲ್ಲಿ ಸ್ಮರಿಸಬಹುದು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications