ಖಾಸಗಿ ಶಾಲೆ ಬೋಧನಾ ಶುಲ್ಕ ಕಡಿತ ಸುರೇಶ್ ಕುಮಾರ್ ವಿರುದ್ಧ ಆಮ್ ಆದ್ಮಿ ಪಕ್ಷ ಆಕ್ರೋಶ
ಬೆಂಗಳೂರು,ಜನವರಿ 30: ಸರ್ಕಾರದ ಕೆಲಸ ಕೇವಲ ಆದೇಶ ನೀಡುವುದಲ್ಲ, ಸಹಾಯಕ್ಕೆ ನಿಲ್ಲುವುದು. ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರೇ ಶುಲ್ಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೇಳಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಒತ್ತಡಕ್ಕೆ ಮಣಿದು ಈಗ ಶೇ 30 ರಷ್ಟು ಬೋಧನಾ ಶುಲ್ಕ ಕಡಿಮೆ ಮಾಡಿರುವುದು ಸ್ವಾಗತಾರ್ಹ.
ಆದರೆ ಈ ಪೋಷಕರ ಹಾಗೂ ಖಾಸಗಿ ಶಾಲೆಗಳ ಜಟಾಪಟಿಗೆ ಸರ್ಕಾರಿ ಆದೇಶ ನೀಡಿದ್ದೀರೆ ಹೊರತು ಸಮಸ್ಯೆ ಬಗೆಹರಿಸಿಲ್ಲ ಎಂದು ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ನುಡಿದರು.
ಶನಿವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಒಂದು ಕಡೆ ಸಣ್ಣ, ಪುಟ್ಟ ಖಾಸಗಿ ಶಾಲೆಗಳು ಮುಚ್ಚಿಹೋಗುತ್ತಿವೆ, ಇದರಿಂದ ಪೋಷಕರು ಆತಂಕದಲ್ಲಿ ಇದ್ದಾರೆ. ಸರ್ಕಾರದಿಂದ ಖಾಸಗಿ ಶಾಲೆಗಳಿಗೆ ಇಂತಿಷ್ಟು ಸಹಾಯಧನ ಘೋಷಿಸಿ, ಆನಂತರ ಶುಲ್ಕ ಕಡಿತದ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದರೆ ಪೋಷಕರ ಹಾಗೂ ಖಾಸಗಿ ಶಾಲೆಗಳ ಜಗಳವನ್ನು ನಿಲ್ಲಿಸಬಹುದಿತ್ತು ಆದರೆ ಈ ಆದೇಶದಿಂದ ಪರಿಸ್ಥಿತಿ ಮತ್ತಷ್ಟು ಜಟಿಲ ಮಾಡಿದ್ದೀರಿ ಎಂದರು.

ಸರ್ಕಾರಿ ಶಾಲೆಗಳು ಸಂಪೂರ್ಣ ವಿಶ್ವಾಸ ಕಳೆದುಕೊಂಡಿರುವ ಈ ಹೊತ್ತಿನಲ್ಲಿ ಲಕ್ಷಾಂತರ ಮಕ್ಕಳು ಖಾಸಗಿ ಶಾಲೆಗಳನ್ನೇ ನೆಚ್ಚಿಕೊಂಡಿದ್ದಾರೆ. ಈಗ ಈ ಆದೇಶದ ವಿರುದ್ದ ಖಾಸಗಿ ಶಾಲೆಗಳ ಒಕ್ಕೂಟ ನ್ಯಾಯಾಲಯಕ್ಕೆ ಹೋಗುವುದಾಗಿ ಹೇಳಿದೆ. ಇದರಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸುತ್ತದೆ ಹೊರತು ಏನೂ ಆಗುವುದಿಲ್ಲ. ಹೀಗೆ ಪೋಷಕರನ್ನು ಮುಗ್ದ ಮಕ್ಕಳನ್ನು ಗೋಳು ಹೋಯ್ದು ಕೊಳ್ಳುವ ನೀವು ಜವಾಬ್ದಾರಿಯುತ ಸ್ಥಾನದಲ್ಲಿ ಇರಲು ಅನರ್ಹರು ಎಂದರು.
ಸಂಪಂಗಿರಾಮ ನಗರ ವಾರ್ಡ್ ಅಧ್ಯಕ್ಷ ಪ್ರಕಾಶ್ ನೆಡುಂಗಡಿ ಮಾತನಾಡಿ, ಶಿಕ್ಷಣ ಸಚಿವರೇ ಶುಲ್ಕ ಕಡಿತ ಮಾಡಿದ ಮೇಲೆ ಶಾಲೆಗಳು ಅಲ್ಲಿನ ಸಿಬ್ಬಂದಿಗಳಿಗೆ ಸಂಬಳ ನೀಡುತ್ತವೆಯೇ ಎಂಬುದು ನಮ್ಮ ಪ್ರಶ್ನೆಯಾಗಿದೆ. ಶಾಲೆಗಳಿಗೆ ಸಹಾಯಧನ ನೀಡಿದ್ದರೇ, ಖಾಸಗಿ ಶಾಲೆಗಳಿಗೆ ಶೇ 50 ರಷ್ಟು ಶುಲ್ಕ ಕಡಿಮೆ ಮಾಡಿ ಎಂದು ಹೇಳಬಹುದಿತ್ತು, ಆದರೆ ಈಗ ಇದಕ್ಕೆ ಅವಕಾಶವೇ ಇಲ್ಲ ಎಂದರು.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
IPL VIP Ticket: ಐಪಿಎಲ್ ಟಿಕೆಟ್ ನನಗಂತೂ ಬೇಡ: ಆರ್ಸಿಬಿ ಪಂದ್ಯದ ಟಿಕೆಟ್ ನಿರಾಕರಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications