ಖಾಸಗಿ ಶಾಲೆ ಬೋಧನಾ ಶುಲ್ಕ ಕಡಿತ ಸುರೇಶ್ ಕುಮಾರ್ ವಿರುದ್ಧ ಆಮ್ ಆದ್ಮಿ ಪಕ್ಷ ಆಕ್ರೋಶ
ಬೆಂಗಳೂರು,ಜನವರಿ 30: ಸರ್ಕಾರದ ಕೆಲಸ ಕೇವಲ ಆದೇಶ ನೀಡುವುದಲ್ಲ, ಸಹಾಯಕ್ಕೆ ನಿಲ್ಲುವುದು. ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರೇ ಶುಲ್ಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೇಳಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಒತ್ತಡಕ್ಕೆ ಮಣಿದು ಈಗ ಶೇ 30 ರಷ್ಟು ಬೋಧನಾ ಶುಲ್ಕ ಕಡಿಮೆ ಮಾಡಿರುವುದು ಸ್ವಾಗತಾರ್ಹ.
ಆದರೆ ಈ ಪೋಷಕರ ಹಾಗೂ ಖಾಸಗಿ ಶಾಲೆಗಳ ಜಟಾಪಟಿಗೆ ಸರ್ಕಾರಿ ಆದೇಶ ನೀಡಿದ್ದೀರೆ ಹೊರತು ಸಮಸ್ಯೆ ಬಗೆಹರಿಸಿಲ್ಲ ಎಂದು ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ನುಡಿದರು.
ಶನಿವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಒಂದು ಕಡೆ ಸಣ್ಣ, ಪುಟ್ಟ ಖಾಸಗಿ ಶಾಲೆಗಳು ಮುಚ್ಚಿಹೋಗುತ್ತಿವೆ, ಇದರಿಂದ ಪೋಷಕರು ಆತಂಕದಲ್ಲಿ ಇದ್ದಾರೆ. ಸರ್ಕಾರದಿಂದ ಖಾಸಗಿ ಶಾಲೆಗಳಿಗೆ ಇಂತಿಷ್ಟು ಸಹಾಯಧನ ಘೋಷಿಸಿ, ಆನಂತರ ಶುಲ್ಕ ಕಡಿತದ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದರೆ ಪೋಷಕರ ಹಾಗೂ ಖಾಸಗಿ ಶಾಲೆಗಳ ಜಗಳವನ್ನು ನಿಲ್ಲಿಸಬಹುದಿತ್ತು ಆದರೆ ಈ ಆದೇಶದಿಂದ ಪರಿಸ್ಥಿತಿ ಮತ್ತಷ್ಟು ಜಟಿಲ ಮಾಡಿದ್ದೀರಿ ಎಂದರು.

ಸರ್ಕಾರಿ ಶಾಲೆಗಳು ಸಂಪೂರ್ಣ ವಿಶ್ವಾಸ ಕಳೆದುಕೊಂಡಿರುವ ಈ ಹೊತ್ತಿನಲ್ಲಿ ಲಕ್ಷಾಂತರ ಮಕ್ಕಳು ಖಾಸಗಿ ಶಾಲೆಗಳನ್ನೇ ನೆಚ್ಚಿಕೊಂಡಿದ್ದಾರೆ. ಈಗ ಈ ಆದೇಶದ ವಿರುದ್ದ ಖಾಸಗಿ ಶಾಲೆಗಳ ಒಕ್ಕೂಟ ನ್ಯಾಯಾಲಯಕ್ಕೆ ಹೋಗುವುದಾಗಿ ಹೇಳಿದೆ. ಇದರಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸುತ್ತದೆ ಹೊರತು ಏನೂ ಆಗುವುದಿಲ್ಲ. ಹೀಗೆ ಪೋಷಕರನ್ನು ಮುಗ್ದ ಮಕ್ಕಳನ್ನು ಗೋಳು ಹೋಯ್ದು ಕೊಳ್ಳುವ ನೀವು ಜವಾಬ್ದಾರಿಯುತ ಸ್ಥಾನದಲ್ಲಿ ಇರಲು ಅನರ್ಹರು ಎಂದರು.
ಸಂಪಂಗಿರಾಮ ನಗರ ವಾರ್ಡ್ ಅಧ್ಯಕ್ಷ ಪ್ರಕಾಶ್ ನೆಡುಂಗಡಿ ಮಾತನಾಡಿ, ಶಿಕ್ಷಣ ಸಚಿವರೇ ಶುಲ್ಕ ಕಡಿತ ಮಾಡಿದ ಮೇಲೆ ಶಾಲೆಗಳು ಅಲ್ಲಿನ ಸಿಬ್ಬಂದಿಗಳಿಗೆ ಸಂಬಳ ನೀಡುತ್ತವೆಯೇ ಎಂಬುದು ನಮ್ಮ ಪ್ರಶ್ನೆಯಾಗಿದೆ. ಶಾಲೆಗಳಿಗೆ ಸಹಾಯಧನ ನೀಡಿದ್ದರೇ, ಖಾಸಗಿ ಶಾಲೆಗಳಿಗೆ ಶೇ 50 ರಷ್ಟು ಶುಲ್ಕ ಕಡಿಮೆ ಮಾಡಿ ಎಂದು ಹೇಳಬಹುದಿತ್ತು, ಆದರೆ ಈಗ ಇದಕ್ಕೆ ಅವಕಾಶವೇ ಇಲ್ಲ ಎಂದರು.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications