ಪೃಥ್ವಿ ರೆಡ್ಡಿಗೆ ಕರ್ನಾಟಕದ ಎಎಪಿ ಸಂಘಟನೆಯ ಹೊಣೆ
ಬೆಂಗಳೂರು, ನ.03: ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷವನ್ನು ಕೆಳಹಂತದಿಂದ ಬಲಿಷ್ಠಗೊಳಿಸುತ್ತಾ, ಬೂತ್ ಮಟ್ಟದಲ್ಲಿ ಸಂಘಟಿಸುವ ಜವಾಬ್ದಾರಿಯನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಪೃಥ್ವಿರೆಡ್ಡಿ ಅವರಿಗೆ ವಹಿಸಲಾಗಿದೆ ಎಂದು ಎಎಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತ ತಿಳಿಸಿದ್ದಾರೆ.
ನಗರದ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತ ಅವರು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಅಭೂತಪೂರ್ವ ಜಯ ದಾಖಲಿಸಿದ ಬಳಿಕ ದೇಶದೆಲ್ಲೆಡೆ ಹೊಸ ಸಂಚಲನ ಮೂಡಿದೆ. ಭ್ರಷ್ಟಾಚಾರವನ್ನು ಬುಡದಿಂದಲೂ ಕಿತ್ತೆಸೆಯಬಹುದೆಂಬ ಆತ್ಮಸೈರ್ಯ ಜನರಲ್ಲಿ ಮೂಡುತ್ತಿದೆ ಎಂದರು.
ಕರ್ನಾಟಕದ ಜನತೆ ಈಗಿನ ರಾಜಕೀಯ ಪಕ್ಷಗಳ ಕಾರ್ಯವೈಖರಿಯಿಂದ ಬೇಸತ್ತು, ಪರ್ಯಾಯ ಪಕ್ಷಕ್ಕೆ ಕಾಯುತ್ತಿದ್ದಾರೆ ಎಂದು ತಿಳಿಸಿದರು. ಹೀಗಾಗಿ ರಾಜ್ಯದಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಮುಂದಿನ ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಪಕ್ಷವು ಸ್ಪರ್ಧಿಸಲಿದೆ ಎಂದು ತಿಳಿಸಿದರು.

ಆಡಳಿತಾತ್ಮಕವಾಗಿ ಕರ್ನಾಟಕವನ್ನು 2-4 ನಾಲ್ಕು ಜಿಲ್ಲೆಗಳ ವಿವಿಧ ಪ್ರದೇಶಗಳಾಗಿ ವಿಂಗಡಿಸಿದ್ದು, ಪ್ರತಿಯೊಬ್ಬ ಉಪ ಸಂಚಾಲಕರಿಗೂ ಒಂದೊಂದು ಪ್ರದೇಶದ ನಿರ್ವಹಣಾ ಜವಾಬ್ದಾರಿ ನೀಡಲಾಗಿದೆ. ಹೆಚ್ಚುವರಿಯಾಗಿ, ರವಿಕೃಷ್ಣಾ ರೆಡ್ಡಿ ಹಾಗೂ ಸಿದ್ಧಾರ್ಥ ಶರ್ಮರಿಗೆ ರಾಜಕೀಯ ವ್ಯವಹಾರಗಳ ಜವಾಬ್ದಾರಿ ನೀಡಲಾಗಿದ್ದು, ಶಿವ ಕುಮಾರ್ ಚೆಂಗಲರಾಯರಿಗೆ ಮಾಧ್ಯಮ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ.
ನಾವು ಕರ್ನಾಟಕದ ಜನತೆಗೆ, ದೆಹಲಿ ಸರ್ಕಾರದ ಕಾರ್ಯವೈಖರಿಯನ್ನು ಕಂಡು ಜನತೆಯಲ್ಲಿ ಮೂಡಿರುವ ವಿಶ್ವಾಸ ಹಾಗೂ ನಿರೀಕ್ಷೆಯನ್ನು ಯಶಸ್ವಿಯಾಗಿ ಕಾಯ್ದುಕೊಂಡು, ರಾಜ್ಯದಲ್ಲಿ ಕಾರ್ಯಸಾಧುವಾದ ಪರ್ಯಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮುತ್ತೇವೆಂದು ಭರವಸೆ ನೀಡುತ್ತೇವೆ.
ರಾಜ್ಯ ತಂಡದ ಸದಸ್ಯರು:
ರಾಜ್ಯ ಖಜಾಂಚಿ : ಹರಿಹರನ್ ಜಯಚಂದ್ರನ್
ರಾಜ್ಯ ಕಾರ್ಯದರ್ಶಿ : ಬಾಲಸುಬ್ಯಮಣ್ಯಂ ಆರ್
ರಾಜ್ಯ ಜಂಟಿ ಕಾರ್ಯದರ್ಶಿ : ಸಂಚಿತ್ ಸಾವ್ನಿ
ರಾಜ್ಯ ಉಪ-ಸಂಚಾಕಲರು
* ರವಿಕೃಷ್ಣಾ ರೆಡ್ಡಿ
* ಸಿದ್ಧಾರ್ಥ ಶರ್ಮ
* ಶಾಂತಲಾ ದಾಮ್ಲೆ
* ವಿಜಯ್ ಶರ್ಮ
* ಶಿವಕುಮಾರ್ ಚೆಂಗಲರಾಯ
* ಕುಂದನ್ ಸಿಂಗ್
* ವಿಕಾಸ್ ಶುಕ್ಲ
* ಬಿ ಕೆ ಮಾನಸ್
* ಮೊಹಮ್ಮದ್ ಸಲಾಹುದ್ದೀನ್
* ಮೋಹನ್ ದಾಸರಿ
(ಒನ್ ಇಂಡಿಯಾ ಸುದ್ದಿ)
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications