ಪೊಲೀಸರ ಮೇಲೆ ಒತ್ತಡ ಹೇರಿ ಈಶ್ವರಪ್ಪಗೆ ಕ್ಲೀನ್ಚಿಟ್: ಆಪ್ ಆರೋಪ
ಬೆಂಗಳೂರು, ಜುಲೈ. 23: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ನೀಡಿರುವ ಪೊಲೀಸರ ನಡೆಯನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿಯಿಂದ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಎಪಿಯ ಬೆಂಗಳೂರು ನಗರ ರಾಜಕೀಯ ಚಟುವಟಿಕೆಗಳ ಅಧ್ಯಕ್ಷ ಚನ್ನಪ್ಪ ಗೌಡ ನೆಲ್ಲೂರು, ಕಳಂಕಿತ ಈಶ್ವರಪ್ಪನವರನ್ನು ಪುನಃ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರ ಹುನ್ನಾರ ಮಾಡಿದ್ದು, ಇದಕ್ಕಾಗಿಯೇ ಪೊಲೀಸರ ಮೇಲೆ ಒತ್ತಡ ಹೇರಿ ಕ್ಲೀನ್ ಚಿಟ್ ಕೊಡಿಸಿದೆ ಎಂದರು.
ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನ ಸಂತೋಷ್ರವರು ಈಶ್ವರಪ್ಪ ವಿರುದ್ಧ ವಾಟ್ಸಪ್ನಲ್ಲಿ ಡೆತ್ನೋಟ್ ಕಳುಹಿಸಿರುವುದನ್ನು ಪೊಲೀಸರೇ ದೃಢಪಡಿಸಿದ್ದಾರೆ. ಆದರೂ ಕೂಡ ಈಶ್ವರಪ್ಪನವರ ವಿಚಾರಣೆಯನ್ನೂ ನಡೆಸದೇ ಕ್ಲೀನ್ ಚಿಟ್ ನೀಡಿರುವುದು ಖಂಡನೀಯ. ಅಕ್ರಮ ಎಸಗುವವರ ಪರವಾಗಿದ್ದೇವೆ ಎಂಬ ಕೆಟ್ಟ ಸಂದೇಶವನ್ನು ರಾಜ್ಯ ಬಿಜೆಪಿ ಸರ್ಕಾರ ಈ ಮೂಲಕ ರವಾನಿಸಿದೆ ಎಂದು ಆರೋಪಿಸಿದರು.

ಘಟನೆ ನಡೆದಾಗಲೇ ಈಶ್ವರಪ್ಪನವರ ಬೆನ್ನಿಗೆ ನಿಂತಿದ್ದ ಬಿಜೆಪಿ ಸರ್ಕಾರವು, ತನಿಖೆಗೂ ಮುನ್ನವೇ ಈಶ್ವರಪ್ಪನವರನ್ನು ನಿರಪರಾಧಿ ಎಂದು ಘೋಷಿಸಿತ್ತು. ನಂತರ ಆಮ್ ಆದ್ಮಿ ಪಾರ್ಟಿಯು ಸಿಎಂ ಮನೆಗೆ ಮುತ್ತಿಗೆ ಹಾಕಲು ಮುಂದಾದಾಗ ಈಶ್ವರಪ್ಪನವರ ರಾಜೀನಾಮೆ ಪಡೆದಿತ್ತು. ಆದರೆ ಕೇವಲ ಕಾಟಾಚಾರಕ್ಕೆ ತನಿಖೆ ನಡೆಸಿ ಸಂತೋಷ್ ಪಾಟೀಲ್ರವರ ಕುಟುಂಬಕ್ಕೆ ಅನ್ಯಾಯವೆಸಗಿದೆ. ರಾಜಕೀಯ ಒತ್ತಡಕ್ಕೆ ಮಣಿದ ಉಡುಪಿ ಪೊಲೀಸರು ಈಶ್ವರಪ್ಪನವರ ವಿಚಾರಣೆ ನಡೆಸದೇ ಕೇವಲ ಮೂರು ತಿಂಗಳಲ್ಲಿ ವರದಿ ಸಿದ್ಧಪಡಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯು ಈ ದೋಷಪೂರಿತ ವರದಿಯನ್ನು ಹಿಂಪಡೆಯಬೇಕು ಎಂದು ಚನ್ನಪ್ಪಗೌಡ ನೆಲ್ಲೂರು ಆಗ್ರಹಿಸಿದರು.
ಡೆತ್ನೋಟ್ ಆಧಾರವಾಗಿಟ್ಟುಕೊಂಡು ಈಶ್ವರಪ್ಪನವರನ್ನು ಬಂಧಿಸಬೇಕು. ಸರ್ಕಾರ ಕೈಕೆಳಗೆ ಕಾರ್ಯನಿರ್ವಹಿಸುವ ಸಿಐಡಿ ಬದಲು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಈಶ್ವರಪ್ಪನವರು ಸಂತೋಷ್ ಪಾಟೀಲ್ರವರಿಗೆ ನೀಡಿದ ಕಿರುಕುಳ ಹಾಗೂ ವಂಚನೆಯು ರಾಜ್ಯದ ಜನತೆಗೆ ತಿಳಿಯಬೇಕು ಎಂದರು.

ಈಶ್ವರಪ್ಪನವರ ನೇತೃತ್ವದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗಿದ್ದು, ಈ ಬಗ್ಗೆ ಆಮ್ ಆದ್ಮಿ ಪಾರ್ಟಿ ಹೋರಾಟ ಮಾಡಿದ್ದರೂ ಯಾವುದೇ ಸೂಕ್ತ ತನಿಖೆ ನಡೆದಿಲ್ಲ. ಕೆ.ಜೆ.ಜಾರ್ಜ್ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆದಿದ್ದರೂ ಟೀಕಿಸುತ್ತಿದ್ದ ಬಿಜೆಪಿಯು ಈಗ ಈಶ್ವರಪ್ಪನವರ ವಿರುದ್ಧ ಪೊಲೀಸ್ ತನಿಖೆಯನ್ನೂ ಸರಿಯಾಗಿ ನಡೆಸದಿರುವುದು ದುರಂತ. ಆರ್ಡಿಪಿಆರ್ ಹಗರಣಗಳು ಹಾಗೂ ಸಂತೋಷ್ ಪ್ರಕರಣದ ಕುರಿತು ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಚನ್ನಪ್ಪಗೌಡ ನೆಲ್ಲೂರು ಒತ್ತಾಯಿಸಿದರು.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications