Get Updates
Get notified of breaking news, exclusive insights, and must-see stories!

Rain: ಬೆಂಗಳೂರಲ್ಲಿ ಆಮ್‌ ಆದ್ಮಿ ಪಾರ್ಟಿ ವಿಚಿತ್ರ ಪ್ರತಿಭಟನೆ: ಏನ್ರಿ ಇದು ಅಂದ್ರು ಜನ

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ಸಾಧಾರಣ ಮಳೆಗೂ ಜನ ಜೀವನ ಅಸ್ತವ್ಯಸ್ತವಾಗುತ್ತಿದೆ. ಮಳೆಯಿಂದ ಬೆಂಗಳೂರಿನಲ್ಲಿ ಮತ್ತೆ ರಸ್ತೆಗುಂಡಿಗಳು ಸೃಷ್ಟಿಯಾಗಿವೆ. ಅಲ್ಲದೇ ರಸ್ತೆಗಳಲ್ಲೇ ನೀರು ನಿಲ್ಲುತ್ತಿದ್ದು, ಜನ ಪರದಾಡುವ ಪರಿಸ್ಥಿತಿ ಇದೆ. ಇದೀಗ ಆಮ್‌ ಆದ್ಮಿ ಪಾರ್ಟಿಯು ವಿಚಿತ್ರವಾದ ಪ್ರತಿಭಟನೆಯನ್ನು ಮಾಡಿದೆ. ಆ ವಿಡಿಯೋವನ್ನು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲೂ ಹಂಚಿಕೊಂಡಿದೆ. ಇದನ್ನು ನೋಡಿದ ಜನ ದಂಗಾಗಿದ್ದಾರೆ. ಏನ್ರಿ ಇದು ಅಂತಿದ್ದಾರೆ.

ಬೆಂಗಳೂರಿನಲ್ಲಿ ಸಣ್ಣ ಮಳೆಯೂ ದೊಡ್ಡ ಅನಾಹುತವನ್ನು ಸೃಷ್ಟಿಸುವುದು ಹೊಸದೇನೂ ಅಲ್ಲ. ಕಳೆದ 15 ದಿನಗಳಿಂದೆಷ್ಟೇ ಬಿಬಿಎಂಪಿಯು ಬರೋಬ್ಬರಿ 14 ಸಾವಿರ ರಸ್ತೆಗುಂಡಿಗಳನ್ನು ಮುಚ್ಚಿರುವುದಾಗಿ ಹೇಳಿತ್ತು. ಆದರೆ, ಸಣ್ಣ ಮಳೆಗೆ ಬೆಂಗಳೂರಿನಲ್ಲಿ ಮತ್ತೆ ರಸ್ತೆಗುಂಡಿಗಳು ನಿರ್ಮಾಣವಾಗಿವೆ. ಕಳೆದೊಂದು ವಾರದಿಂದ ಸುರಿದ ಮಳೆಗೆ ಮಹದೇವಪುರದ ಪ್ರಮುಖ ರಸ್ತೆಗಳು ಕೆಸರು ಗದ್ದೆಯಂತೆ ಬದಲಾಗಿವೆ. ಈ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಾರ್ಟಿಯು ಅತ್ಯಂತ ಭಿನ್ನವಾಗಿ ಪ್ರತಿಭಟನೆ ಮಾಡಿದ್ದು, ಜನರ ಗಮನವನ್ನು ಸೆಳೆದಿದೆ. ಮಹದೇವಪುರದಲ್ಲಿ ರಸ್ತೆ ಗುಂಡಿಯಲ್ಲಿ ಮಲಗಿ ಆಮ್‌ ಆದ್ಮಿ ಪಾರ್ಟಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಹದೇವಪುರದ ಹಲವು ರಸ್ತೆಗಳು ಮಳೆಯಿಂದ ಕೆಸರುಗದ್ದೆಯಾಗಿ ಬದಲಾಗಿವೆ.

Aam Aadmi Party strange protest in Bengaluru

ಮಹದೇವರಪುರದ ಪ್ರಮುಖ ರಸ್ತೆಯಲ್ಲಿ ಆಮ್‌ ಆದ್ಮಿ ಪಾರ್ಟಿಯ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ರಸ್ತೆ ಗುಂಡಿ ಹಾಗೂ ಕೆಸರು ಗದ್ದೆಯಲ್ಲಿ ಮಲಗಿ ನೋಡಿ ಈ ರಸ್ತೆಯ ಅವ್ಯವಸ್ತೆ. ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ತೆರಿಗೆ ಪಾವತಿಯಾಗುವ ಕ್ಷೇತ್ರಗಳಲ್ಲಿ ಮಹದೇವಪುರ ಕ್ಷೇತ್ರವೂ ಒಂದು. ಆದರೆ, ಈ ರಸ್ತೆಯ ಅವ್ಯವಸ್ತೆ ನೋಡಿ ಎಂದಿದ್ದಾರೆ. ಮಹದೇವಪುರದಲ್ಲಿ ರಸ್ತೆಗುಂಡಿಗಳು ಹೆಚ್ಚಾಗಿವೆ. ಮಳೆಯಿಂದ ಅನಾಹುತ ಸಂಭವಿಸಿದೆ. ಆದರೆ, ಮಹಾದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಪಕ್ಷದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಟೀಕಿಸಲಾಗಿದೆ.

ಸದಸ್ಯತ್ವ ಅಭಿಯಾನಕ್ಕೆ ವಿರೋಧ: ಮಹದೇವಪುರದಲ್ಲಿ ಮಳೆಯಿಂದ ಅನಾಹುತ ಸಂಭವಿಸಿದ್ದರೂ, ಶಾಸಕಿ ಮಂಜುಳಾ ಲಿಂಬಾವಳಿ ಸ್ಪಂದಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ

ಅವರು ಹೂಡಿಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಆರ್. ಡಬ್ಲ್ಯೂ. ಎ. ಕಾರ್ಯಕರ್ತರ ಸದಸ್ಯತ್ವ ಅಭಿಯಾನ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂಬಂಧ ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಅರವಿಂದ ಲಿಂಬಾವಳಿ ಅವರು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್‌, ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರೊಂದಿಗೆ ಮತಕ್ಷೇತ್ರದ ಹೂಡಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಆರ್. ಡಬ್ಲ್ಯೂ. ಎ. ಕಾರ್ಯಕರ್ತರ ಸದಸ್ಯತ್ವ ಅಭಿಯಾನದ ಕುರಿತು ನಡೆದ ಸಭೆಯಲ್ಲಿ ಭಾಗವಹಿಸಲಾಯಿತು ಎಂದಿದ್ದಾರೆ.

ಈ ಟ್ವೀಟ್‌ ಅನ್ನು ರೀ ಟ್ವೀಟ್‌ ಮಾಡಿರುವ ಆಮ್‌ ಆದ್ಮಿ ಪಕ್ಷದ ನಾಯಕ ಅಶೋಕ್ ಮೃತ್ಯುಂಜಯ ಅವರು, ಮಹದೇವಪುರದಲ್ಲಿ ಮಳೆ ಅವಾಂತರ ಸೃಷ್ಟಿಯಾಗಿದೆ. ಇದರಿಂದ ಜನ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗುತ್ತಿಲ್ಲ. ಶಾಸಕಿ ಮಂಜುಳಾ ಲಿಂಬಾವಳಿ ಅವರು,ಬಿಜೆಪಿ ಸದಸ್ಯತ್ವ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸರಳ ಪ್ರಶ್ನೆ - ಇವರು ನಮ್ಮ ಕ್ಷೇತ್ರದ ಶಾಸಕಿಯಾಗಿ ನಮಗೆ ಬೇಕೇ ಎಂದು ಪ್ರಶ್ನೆ ಮಾಡಿದ್ದಾರೆ.

ಕೋಟ್ಯಾಂತರ ರೂಪಾಯಿ ತೆರಿಗೆ ಕಟ್ಟಿದರೂ

ಮಹದೇವಪುರದಿಂದ ಬಿಬಿಎಂಪಿ (ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ) ಹಾಗೂ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ತೆರಿಗೆ ಸಂಗ್ರಹವಾಗುತ್ತಿದೆ. ಆದರೆ, ಕೋಟ್ಯಾಂತರ ರೂಪಾಯಿ ತೆರಿಗೆ ಕಟ್ಟಿದ ಮೇಲೂ ನಾವು ಈ ರೀತಿಯ ಕೆಟ್ಟ ರಸ್ತೆಗಳಲ್ಲಿ ಓಡಾಡುವ ಪರಿಸ್ಥಿತಿ ಇದೆ ಎಂದು ಆಮ್‌ ಆದ್ಮಿ ಪಾರ್ಟಿಯ ಕಾರ್ಯಕರ್ತ ಅಶೋಕ್ ಮೃತ್ಯುಂಜಯ ಹೇಳಿದ್ದಾರೆ. ಮಂಜುಳಾ ಅರವಿಂದ ಲಿಂಬಾವಳಿ ಅವರೇ ನೀವು ಮಹದೇವಪುರ ಕ್ಷೇತ್ರದ ಶಾಸಕರು. ಆದರೆ, ಫೋಟೋಗಳಲ್ಲಿ ಮಾತ್ರ ನೀವು ಕಾಣಿಸಿಕೊಳ್ಳುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+