Get Updates
Get notified of breaking news, exclusive insights, and must-see stories!

Bengaluru Opposition Meet: ಸುಗ್ರೀವಾಜ್ಞೆ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ, ವಿಪಕ್ಷಗಳ ಸಭೆಗೆ ಎಎಪಿ ಹಾಜರು!

ನವದೆಹಲಿ, ಜುಲೈ. 16: ಮುಂದಿನ ವರ್ಷ ನಡೆಯಲಿರುವ ರಾಷ್ಟ್ರೀಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಒಗ್ಗಟ್ಟಿನ ಕಾರ್ಯತಂತ್ರವನ್ನು ನಿರ್ಧರಿಸಲು ನಾಳೆ ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಲಿರುವ ಪ್ರಮುಖ ಪ್ರತಿಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಾರ್ಟಿ ಭಾಗವಹಿಸಲಿದೆ. ಕಾಂಗ್ರೆಸ್ ಆಪ್‌ನ ಸುಗ್ರಿವಾಜ್ಞೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಬೆನ್ನಲ್ಲೇ ಈ ಹೇಳಿಕೆ ಹೊರಬಂದಿದೆ.

ದೆಹಲಿಯ ಅಧಿಕಾರಶಾಹಿಯ ಮೇಲೆ ಹಿಡಿತ ಸಾಧಿಸಿದ ವಿವಾದಾತ್ಮಕ ಕೇಂದ್ರ ಆದೇಶದ ವಿರುದ್ಧ ಎಎಪಿಯ ಅಭಿಯಾನವನ್ನು ಕಾಂಗ್ರೆಸ್ ಬೆಂಬಲಿಸಿದೆ. ಇದರ ಜೊತೆಗೆ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ ಪ್ರಮುಖ ರಾಜಕೀಯ ಸಮಿತಿಯ ಸಭೆ ನಡೆಸಿತ್ತು. ಎರಡು ಘಟನೆಗಳ ಕೆಲವು ಗಂಟೆಗಳ ನಂತರ ತನ್ನ ಬೆಂಗಳೂರಿನಲ್ಲಿ ನಡೆಯಲಿರುವ ಎರಡನೇ ವಿಪಕ್ಷಗಳ ಸಭೆಗೆ ಹಾಜರಾಗುವುದಾಗಿ ಭಾನುವಾರ ದೃಢಪಡಿಸಿದೆ.

Aam Aadmi Party will attend a key opposition meeting tomorrow

"ಎಎಪಿಯ ರಾಜಕೀಯ ಕ್ರಿಯಾ ಸಮಿತಿ ಸಭೆ ಇಂದು ನಡೆಯಿತು. ಪ್ರತಿಯೊಂದು ಅಂಶವನ್ನು ವಿವರವಾಗಿ ಚರ್ಚಿಸಲಾಗಿದೆ ಮತ್ತು ಸಭೆ ಮುಗಿದ ನಂತರ, ಸುಗ್ರೀವಾಜ್ಞೆಯು ಸ್ಪಷ್ಟವಾಗಿ ರಾಷ್ಟ್ರವಿರೋಧಿಯಾಗಿದೆ ಎಂದು ನಾನು ಇದನ್ನು ಸ್ಪಷ್ಟವಾಗಿ ಹೇಳಬಲ್ಲೆ ಎಂದು ಎಎಪಿ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

"ತೃಣಮೂಲ ಕಾಂಗ್ರೆಸ್‌, ಆರ್‌ಜೆಡಿ, ಜೆಡಿಯು, ಎನ್‌ಸಿಪಿ, ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ ಶಿವಸೇನೆ, ಎಲ್ಲರೂ ಈ ದೇಶವಿರೋಧಿ ಸುಗ್ರೀವಾಜ್ಞೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಬಿಜೆಪಿಯನ್ನು ಸೋಲಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ" ಎಂದು ರಾಘವ್ ಚಡ್ಡಾ ಹೇಳಿದ್ದಾರೆ. ಇದು ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವ ಎಎಪಿಯ ನಿರ್ಧಾರವು ಸುಗ್ರೀವಾಜ್ಞೆಯ ವಿರುದ್ಧ ಎಂದು ಸೂಚಿಸಿದ್ದಾರೆ.

ಜೂನ್ 23 ರಂದು ಬಿಹಾರದ ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷಗಳ ಸಮಾವೇಶದ ನಂತರ ಎಎಪಿ ಕಾಂಗ್ರೆಸ್ ಅನ್ನು ಕಟುವಾಗಿ ಟೀಕಿಸಿತ್ತು. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಮನವಿ ನಂತರ ಕಾಂಗ್ರೆಸ್ ಹೊರತುಪಡಿಸಿ ಎಲ್ಲಾ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ತಡೆಯಲು ಅವರ ಪಕ್ಷಕ್ಕೆ ಸಹಾಯ ಮಾಡಲು ವಾಗ್ದಾನ ಮಾಡಿದ್ದವು.

Aam Aadmi Party will attend a key opposition meeting tomorrow

ವಿವಾದಾತ್ಮಕ ಸುಗ್ರೀವಾಜ್ಞೆಗೆ ವಿರುದ್ಧವಾಗಿ ಆಪ್‌ಗೆ ಕಾಂಗ್ರೆಸ್ ಭಾನುವಾರ ಬೆಂಬಲ ವ್ಯಕ್ತಪಡಿಸಿದ್ದು, ಈಗ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಆಮ್ ಆದ್ಮಿ ಪಕ್ಷ ಘೋಷಿಸಿದೆ. ರಾಘವ್ ಚಾಡಾ ಅವರು ಕಾಂಗ್ರೆಸ್ ಬೆಂಬಲವನ್ನು "ಸಕಾರಾತ್ಮಕ ಬೆಳವಣಿಗೆ" ಎಂದು ಸ್ವಾಗತಿಸಿದ್ದಾರೆ. "ಕಾಂಗ್ರೆಸ್ ದೆಹಲಿ ಸುಗ್ರೀವಾಜ್ಞೆಗೆ ತನ್ನ ವಿರೋಧವನ್ನು ಘೋಷಿಸಿದೆ, ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು, ಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುವ ಕುರಿತು ಚರ್ಚಿಸಲು ಆಮ್ ಆದ್ಮಿ ಪಕ್ಷದ ಉನ್ನತ ನಾಯಕರು ಸಭೆ ನಡೆಸಿದ್ದರು. ಸಭೆಯ ನಂತರ ನಿರ್ಧಾರ ಘೋಷಿಸಿದ್ದಾರೆ. ಈ ಸಭೆಯಲ್ಲಿಯೇ ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದ ಕಾರ್ಯತಂತ್ರದ ಬಗ್ಗೆಯೂ ಪಕ್ಷವು ಚರ್ಚಿಸಿದೆ.

ಭಾನುವಾರ ನಡೆಯಲಿರುವ ಮಹತ್ವದ ಸಭೆಯಲ್ಲಿ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿಯ ಸದಸ್ಯರು ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಭಾಗವಹಿಸಿದ್ದರು. ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷ ಸಭೆಯ ನಂತರ, ಕಾಂಗ್ರೆಸ್‌ನ ಹಿಂಜರಿಕೆ ಮತ್ತು ಒಂದು ತಂಡದ ಪಾಲುದಾರರಾಗಿ ಕಾರ್ಯನಿರ್ವಹಿಸಲು ಕಾಂಗ್ರೆಸ್ ನಿರಾಕರಿಸುವುದರಿಂದ ಆಮ್ ಆದ್ಮಿ ಪಕ್ಷಕ್ಕೆ ಯಾವುದೇ ಮೈತ್ರಿಕೂಟದ ಭಾಗವಾಗಲು ಕಷ್ಟವಾಗುತ್ತದೆ" ಎಂದು ಆಪ್ ಹೇಳಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+