ವೈಟ್ ಟಾಪಿಂಗ್ ರಸ್ತೆ ಕಾಮಗಾರಿ: ಗುಣಮಟ್ಟ, ಭ್ರಷ್ಟಾಚಾರ ತನಿಖೆ ಮಾಡಲು ಲೋಕಾಯುಕ್ತರಿಗೆ ಎಎಪಿ ಮನವಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಕುಸಿದು ಸೃಷ್ಟಿಯಾಗಿದ್ದ ದೊಡ್ಡ ಗುಂಡಿಗೆ ಮಹಾಪೂಜೆ ಮಾಡುವ ಮೂಲಕ ಕಳಪೆ ಕಾಮಗಾರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಆಮ್ ಆದ್ಮಿ ಪಕ್ಷದ ನಾಯಕರು, ಕಳಪೆ ಕಾಮಗಾರಿ ಮತ್ತು ಭ್ರಷ್ಟಾಚಾರದ ಬಗ್ಗೆ ಸಮರ್ಪಕ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ಮನವಿ ಮಾಡಿದ್ದಾರೆ.
ಆಮ್ ಆದ್ಮಿ ಪಕ್ಷದ ಬೆಂಗಳೂರು ಜಿಲ್ಲಾಧ್ಯಕ್ಷ ಡಾ. ಸತೀಶ್ ಕುಮಾರ್ ನೇತೃತ್ವದಲ್ಲಿ ಕರ್ನಾಟಕ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಮುಖ್ಯ ಲೋಕಾಯುಕ್ತರಿಗೆ ದೂರು ನೀಡಲಾಯಿತು. ಬಳಿಕ ಮಾತನಾಡಿದ ಡಾ. ಸತೀಶ್ ಕುಮಾರ್, ವೈಟ್ ಟಾಪಿಂಗ್ ರಸ್ತೆಗೆ ಖರ್ಚಾಗುವ ಹಣಕ್ಕಿಂತ ಹತ್ತು ಪಟ್ಟು ಹೆಚ್ಚು ನೀಡಲಾಗಿದೆ ಎಂದು ಹೇಳಲಾಗಿದೆ. ಸುಮಾರು 1200 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಬೆಂಗಳೂರಿನಲ್ಲಿ ವೈಟ್ ಟಾಪಿಂಗ್ ರಸ್ತೆಗಾಗಿ ಬಿಡುಗಡೆ ಮಾಡಲಾಗಿದೆ, ಆದರೆ ಅಂತಹ ರಸ್ತೆಗಳು ಬಿರುಕು ಬಿಟ್ಟಿದ್ದು ಕಳಪೆ ಕಾಮಗಾರಿ ನಡೆದಿದೆ ಎಂದು ಆರೋಪಿಸಿದರು.

ಈಗಾಗಲೇ ಬೆಂಗಳೂರಿನಲ್ಲಿ 30 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳಿದೆ ಎಂದು ಬಿಬಿಎಂಪಿ ಹೇಳಿತ್ತು, ಅದರಲ್ಲಿ ಇನ್ನು 2000 ಗುಂಡಿಗಳನ್ನು ಮುಚ್ಚುವುದು ಬಾಕಿ ಇದೆ ಎಂದು ಹೇಳಿದೆ. ಸರ್ಕಾರ ಮತ್ತು ಬಿಬಿಎಂಪಿ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದರೂ, ಗುಣಮಟ್ಟದ ಕೆಲಸ ಆಗುತ್ತಿಲ್ಲ ಎಂದರು.
ಎಲ್ಲಾ ವಿಚಾರಗಳನ್ನು ಇಂದು ಲೋಕಾಯುಕ್ತರ ಗಮನಕ್ಕೆ ತರಲಾಗಿದೆ. ಬಿಬಿಎಂಪಿ ಕಮಿಷನರ್, ಮುಖ್ಯ ಅಭಿಯಂತರರು ಹಾಗೂ ಗುಂಡಿ ಬಿದ್ದ ರಸ್ತೆಯ ವಲಯ ಅಭಿಯಂತರರನ್ನು ಒಳಗೊಂಡಂತೆ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ. ಅವ್ಯವಹಾರ ನಡೆದಾಗ ಅದನ್ನು ಗಮನಕ್ಕೆ ತಂದಿದ್ದಕ್ಕೆ ಲೋಕಾಯುಕ್ತರು ಕೂಡ ನಮ್ಮನ್ನು ಶ್ಲಾಘಿಸಿದ್ದಾರೆ. ಭ್ರಷ್ಟಾಚಾರ ಮಾಡುವ ಅಧಿಕಾರಿಗಳು ಲೋಕಾಯುಕ್ತರ ತನಿಖೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಗುಣಮಟ್ಟ ಪರೀಕ್ಷೆ ನಡೆಸಲು ಮನವಿ
ಕಳೆದ 5-10 ವರ್ಷಗಳಲ್ಲಿ ಬೆಂಗಳೂರಿನಲ್ಲಿ ವೈಟ್ ಟಾಪಿಂಗ್, ಸ್ಮಾರ್ಟ್ ಸಿಟಿಯಡಿ ಮಾಡಿರುವ ರಸ್ತೆಗಳ ಆಡಿಟ್ ಆಗಬೇಕು. ಗುಂಡಿ ಬಿದ್ದ ರಸ್ತೆ ನಿರ್ಮಿಸಿದ ಗುತ್ತಿಗೆದಾರರನ್ನು ತನಿಖೆಗೆ ಒಳಪಡಿಸಬೇಕು. ಭ್ರಷ್ಟಾಚಾರದ ಕುರಿತು ಕೂಲಂಕಷವಾಗಿ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಅಪಾಯಗಳು ಆಗದಂತೆ ನಿಗಾ ವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಷರತ್ತು ವಿಧಿಸಬೇಕು. ಬೇರೆ ವೈಟ್ ಟಾಪಿಂಗ್ ಕಾಮಗಾರಿಗೆ ಅನುಮತಿ ನೀಡುವ ಮೊದಲು ಈಗಾಗಲೇ ಪೂರ್ಣಗೊಂಡಿರುವ ವೈಟ್ ಟಾಪಿಂಗ್ ರಸ್ತೆಗಳ ಗುಣಮಟ್ಟ ಪರೀಕ್ಷೆ ಮಾಡಿಸಬೇಕು ಎಂದು ಮನವಿ ಮಾಡಲಾಗಿದೆ.
ಬೆಂಗಳೂರಿನ ರಸ್ತೆಗಳಲ್ಲಿ ಓಡಾಡುವಾಗ ಜೀವವನ್ನು ಕೈಯಲ್ಲಿ ಹಿಡಿದುಕೊಂಡೇ ಓಡಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದ್ದಕ್ಕಿದ್ದಂತೆ ಮೆಟ್ರೋ ಪಿಲ್ಲರ್ ಕುಸಿದಿದ್ದರಿಂದ, ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ್ದರಿಂದ ಈಗಾಗಲೇ ಸಾಕಷ್ಟು ಸಾವುನೋವುಗಳು ಸಂಭವಿಸಿವೆ. ಬ್ರಾಂಡ್ ಬೆಂಗಳೂರು ಎನ್ನುವುದಕ್ಕಿಂತ ನಮಗೆ 'ಸುರಕ್ಷಿತ ಬೆಂಗಳೂರು' ಬೇಕಿದೆ ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications