ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಗರದ 50 ವಾರ್ಡ್‌ಗಳಲ್ಲಿ ಆಪ್ ಕೇರ್ ಕಾರ್ಯಕ್ರಮಕ್ಕೆ ಚಾಲನೆ

|
Google Oneindia Kannada News

ಬೆಂಗಳೂರು, ಆ.9: ಕೊರೊನಾ ಸೋಂಕು ನಿಯಂತ್ರಣದಲ್ಲಿ ಸಂಪೂರ್ಣವಾಗಿ ವಿಫಲವಾಗಿರುವ ಸರ್ಕಾರ ತನ್ನೆಲ್ಲ ಜವಾಬ್ದಾರಿ ಮರೆರು ಕುಳಿತಿದೆ. ಸೋಂಕು ಹೆಚ್ಚಿರುವ ಕಡೆ ಮನೆ ಮನೆಗೆ ಹೋಗಿ ಪರೀಕ್ಷೆ ನಡೆಸಬೇಕು ಎನ್ನುವ ಸಾಮಾನ್ಯ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ಆದ ಕಾರಣ ಈ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಸಾಮಾಜಿಕ ಕಳಕಳಿಯೊಂದಿಗೆ ಆಮ್ ಆದ್ಮಿ ಪಕ್ಷವು ಬೆಂಗಳೂರಿನಾದ್ಯಂತ "ಆಪ್ ಕೇರ್" ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ಬೆಂಗಳೂರು ನಗರದ 50 ವಾರ್ಡ್‌ಗಳಲ್ಲಿ ಮೊದಲ ಹಂತವಾಗಿ ಪಕ್ಷದ ಕಾರ್ಯಕರ್ತರು, ಮುಖಂಡರು ಆಪ್ ಕೇರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸೋಂಕು ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಎಎಪಿಸೋಂಕು ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಎಎಪಿ

ಪಕ್ಷದ ಕಾರ್ಯಕರ್ತರು PPE ಕಿಟ್ ಗಳನ್ನು ಧರಿಸಿ ಸೋಂಕಿನ ಲಕ್ಷಣಗಳು ಇರುವ ನಾಗರಿಕರ ಮನೆಗಳಿಗೆ ಬೇಟಿ ನೀಡಿ ಅವರ ದೇಹದ ತಾಪಮಾನ, ಆಮ್ಲಜನಕದ ಮಟ್ಟ ಪರೀಕ್ಷಿಸಲಾಯಿತು ಹಾಗೂ ಮನೆಗಳನ್ನು ಸ್ಯಾನಿಟೈಸೇಶನ್ ಮಾಡಲಾಯಿತು. ಸೋಂಕಿನ ಬಗ್ಗೆ ಮಾಹಿತಿ ನೀಡಿ ಸುರಕ್ಷತಾ ಮಾರ್ಗಗಳ ಬಗ್ಗೆ ಅರಿವು ಮೂಡಿಸಿ, ಬಿಬಿಎಂಪಿ ಆರೋಗ್ಯ ಅಧಿಕಾರಿಗಳ, ಆಸ್ಪತ್ರೆಗಳ ಸಂಪರ್ಕ ವಿವರಗಳನ್ನು ನೀಡುವ ಕೆಲಸ ಮಾಡಲಾಯಿತು.

AAP cares launched at 50 wards in Bengaluru by Aam Aadmi Party

ಪುಲಕೇಶಿ ನಗರ , ಮುನೇಶ್ವರ ಲೇಔಟ್, ಸಗಾಯ್ ಪುರ, ಬಸವೇಶ್ವರ ನಗರ, ಜೀವನ್ ಭೀಮಾ ನಗರ, ನೀಲಸಂದ್ರ, ವನ್ನಾರ್ ಪೇಟೆ, ಶಾಂತಿ ನಗರ, ಅರಕೆರೆ, ಬೇಗೂರು, ಕಾಳೇನ ಅಗ್ರಹಾರ, ಸುಬ್ರಮಣ್ಯ ನಗರ, ಚಾಮರಾಜಪೇಟೆಯಲ್ಲಿ ಆಪ್ ಕೇರ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

AAP cares launched at 50 wards in Bengaluru by Aam Aadmi Party

ಕೊವಿಡ್ 19 ಹಗರಣ: ಆರೋಗ್ಯ ಸಚಿವರ ರಾಜೀನಾಮೆಗೆ ಎಎಪಿ ಆಗ್ರಹ ಕೊವಿಡ್ 19 ಹಗರಣ: ಆರೋಗ್ಯ ಸಚಿವರ ರಾಜೀನಾಮೆಗೆ ಎಎಪಿ ಆಗ್ರಹ

ಸಾರದವಜನಿಕರಿಂದ ಈ ಕಾರ್ಯಕ್ರಮಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಯಿತು ಮತ್ತು ದೆಹಲಿ ಮಾದರಿಯಂತೆ ನಮ್ಮ ರಾಜ್ಯದಲ್ಲೂ ಸೋಂಕು ನಿಯಂತ್ರಣ ಮಾಡುವಂತೆ ಸರ್ಕಾರಕ್ಕೆ ಕಿವಿಮಾತು ಹೇಳುವಂತೆ ಸಾರ್ವಜನಿಕರು ಸಲಹೆ ನೀಡಿದರು.

English summary
AAP Karnataka launches AAP Cares initiative to assist General Public across Karnataka. Now this initiative launched in 50 wards in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X