Rajajinagar: ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ವಿರುದ್ಧ ಇಡಿ ತನಿಖೆಗೆ ಎಎಪಿ ಆಗ್ರಹ
ಬೆಂಗಳೂರು, ಮೇ 04: ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಹಣ ವರ್ಗಾವಣೆ ಅವ್ಯಾಹತವಾಗಿ ನಡೆಯುತ್ತಿದೆ. ಆದ್ದರಿಂದ ಇಲ್ಲಿನ ಅಭ್ಯರ್ಥಿ ವಿರುದ್ಧ ಜಾರಿ ನಿರ್ದೇಶನಾಲಯ (ED) ಶೀಘ್ರವೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.
ಬೆಂಗಳೂರಿನಲ್ಲಿ ಆಮ್ ಆದ್ಮಿ ಪಾರ್ಟಿಯ ನಗರಾಧ್ಯಕ್ಷ ಡಾ. ಸತೀಶ್ ನೇತೃತ್ವದ ನಿಯೋಗವು ಬುಧವಾರ ಚುನಾವಣಾ ಆಯೋಗಕ್ಕೆ ಈ ಕುರಿತು ದೂರು ನೀಡಿದರು. ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜಾಜಿನಗರದಲ್ಲಿ ಚುನಾವಣಾ ಅಕ್ರಮ ಅವ್ಯಾಹತವಾಗಿ ನಡೆಯುತ್ತಿದೆ. ಭಾರೀ ಪ್ರಮಾಣದ ಅಕ್ರಮ ಹಣವು ವರ್ಗಾವಣೆಯಾಗುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ವಿರುದ್ಧ ಆರೋಪಿಸಿದರು.

ರಾಜರಾಜಿನಗರದಲ್ಲಿ ಚುನಾವಣಾ ನೀತಿ ಸಂಹಿತೆ ಕಾಯಿದೆ 1961, ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಮತ್ತು ಜನಪ್ರತಿನಿಧಿಗಳ ಕಾಯಿದೆ 1951 ಮುಂತಾದ ಕಾನೂನುಗಳ ಉಲ್ಲಂಘನೆಯಾಗಿದೆ. ಹಣ ವರ್ಗಾವಣೆ ಸಂಬಂಧ ರಾಜಾಜಿನಗರದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ, ಮಾಜಿ ಉಪಮೇಯರ್ ರಂಗಣ್ಣ ರಘುವೀರ್, ಪದ್ಮರಾಜ್, ವಿಜಯಕುಮಾರ್, ಕೃಷ್ಣಮೂರ್ತಿ, ಯಶಸ್, ರವಿ, ಗಿಳಿ ವೆಂಕಟೇಶ್, ಮುನಿರಾಜ್, ಪಳನಿಕಾಂತ್, ರಾಜಣ್ಣ ವಿರುದ್ಧ ದೂರು ನೀಡಲಾಗಿದೆ ಎಂದು ಅವರು ವಿವರಿಸಿದರು.
ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ, ಜಂಟಿ ಮುಖ್ಯ ಚುನಾವಣಾಧಿಕಾರಿ ಮತ್ತು ರಾಜಾಜಿನಗರದ ಸ್ಥಳಿಯ ಚುನಾವಣಾಧಿಕಾರ (ಆರ್ಓ) ಅವರು ನಮ್ಮ ದೂರು ಸ್ವೀಕರಿಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿದೆ. ಚುನಾವಣಾ ಪ್ರಕ್ರಿಯೆಯಿಂದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣರವರನ್ನು ಅನರ್ಹ ಮಾಡಬೇಕೆಂದು ಆಗ್ರಹಿಸಿದ್ದೇವೆ ಎಂದು ಡಾ. ಸತೀಶ್ ಮನವಿ ಮಾಡಿದರು.

ಚುನಾವಣೆಯು ಅಸಲಿ ಮತ್ತು ನಕಲಿಗಳ ಮಧ್ಯದ ಹೋರಾಟ
ಆಮ್ ಆದ್ಮಿ ಪಾರ್ಟಿಯು ದೆಹಲಿ ಹಾಗೂ ಪಂಜಾಬ್ನಲ್ಲಿ ಜಾರಿಗೆ ತಂದಿರುವ ಯೋಜನೆಗಳನ್ನು ಬೇರೆ ಪಕ್ಷಗಳು ನಕಲು ಮಾಡಿ ಕರ್ನಾಟಕದಲ್ಲಿ ಆಶ್ವಾಸನೆಗಳನ್ನು ನೀಡುತ್ತಿವೆ. ಈ ಚುನಾವಣೆಯು ಅಸಲಿ ಮತ್ತು ನಕಲಿಗಳ ನಡುವಿನ ಹೋರಾಟವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳು ಮಾಧ್ಯಮಗಳ ಜೊತೆ ಸಂವಾದ ನಡೆಸುವುದು ಒಳ್ಳೆಯ ಬೆಳವಣಿಗೆ. ಆಮ್ ಆದ್ಮಿ ಪಾರ್ಟಿಯು ಇಡೀ ದೇಶದ ರಾಜಕೀಯದಲ್ಲಿ ಬದಲಾವಣೆ ತಂದಿದೆ. ಕರ್ನಾಟಕದ ಚುನಾವಣೆಯಲ್ಲೂ ಭಾರೀ ಬದಲಾವಣೆಯನ್ನು ನೋಡುತ್ತಿದ್ದೇವೆ.
ಜನ ಜನಪರ ಆಡಳಿತ ಬಯಸುತ್ತಿದ್ದಾರೆ
ಈ ಹಿಂದಿನ ಚುನಾವಣೆಗಳಲ್ಲಿ ಮತದಾರರು ಕೊನೆ ಹಂತದ ಭಾವನಾತ್ಮಕ ವಿಚಾರಗಳಿಂದ ಕೇವಲ ಜಾತಿ ಹಾಗೂ ಧರ್ಮ ನೋಡಿ ಮತದಾನ ಮಾಡುತ್ತಿದ್ದರು. ಆದರೆ ಈ ಚುನಾವಣೆಯಲ್ಲಿ 'ಮತದಾನದಿಂದ ನಮಗೇನು ಲಾಭವಾಗುತ್ತದೆ?' ಎಂದು ಯೋಚಿಸಲು ಆರಂಭಿಸಿದ್ದಾರೆ. ಈ ಮೂಲಕ ಜನಪರ ಆಡಳಿತವನ್ನು ಜನರು ಬಯಸಲು ಶುರು ಮಾಡಿದ್ದಾರೆ ಎಂದು ಹೇಳಿದರು.
ಬೆಂಗಳೂರಿನ ಶಾಲೆಗಳ ದುಬಾರಿ ಶುಲ್ಕವನ್ನು ಪಾವತಿಸಿ ಇಲ್ಲಿ ಶಿಕ್ಷಣ ಕೊಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಅವರಿಗೆ ಶಿವಮೊಗ್ಗದಲ್ಲಿ ಶಿಕ್ಷಣ ಕೊಡಿಸಿ, ನಾನೊಬ್ಬನೇ ಬೆಂಗಳೂರಿನಲ್ಲಿ ಇದ್ದೇನೆ. ಎರಡು ವಾರಕ್ಕೊಮ್ಮೆ ಶಿವಮೊಗ್ಗಕ್ಕೆ ಹೋಗಿ ಮಾತನಾಡಿಸುತ್ತೇನೆ ಎಂದು ಬೆಂಗಳೂರಿನಲ್ಲಿರುವ ಶಿವಮೊಗ್ಗ ಮೂಲದ ಹಿರಿಯ ಪತ್ರಕರ್ತರು ತಿಳಿಸಿದ್ದರು. ಇಂತಹ ಪರಿಸ್ಥಿತಿ ತೊಲಗಬೇಕಾದರೆ ಸರ್ಕಾರಿ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ಆಮ್ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬರಬೇಕು ಎಂದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications