Bengaluru: 18,000 ಎಕ್ರೆ ಜಮೀನಿನಲ್ಲಿ ಉಪನಗರ ಯೋಜನೆ: ವ್ಯಾಪಕ ಆಕ್ರೋಶ
ಬೆಂಗಳೂರು, ನವೆಂಬರ್ 05: ಕರ್ನಾಟಕ ರಾಜ್ಯ ಸರ್ಕಾರವು ರೈತರ ಜಮೀನಿನಲ್ಲಿ ಉಪನಗರ ನಿರ್ಮಿಸಲು ಮುಂದಾಗಿದೆ. ಆದರೆ ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದು ರೈತ ವಿರೋಧಿ ನಿರ್ಧಾರ, ಕೂಡಲೇ ಈ ಯೋಜನೆಯನ್ನು ಕೈಬಿಡಬೇಕು ಎಂಬ ಒತ್ತಡಗಳು, ಆಗ್ರಹಗಳು ಹೆಚ್ಚಾಗಿವೆ. ರೈತರ ಕೃಷಿ ಜಮೀನಿನಲ್ಲಿ ಉಪನಗರ ನಿರ್ಮಾಣಕ್ಕೆ ಕೈಹಾಕಿ ಉಪ ಚುನಾವಣೆ ಹೊತ್ತಲ್ಲಿ ಸರ್ಕಾರ ಕೈಸುಟ್ಟುಕೊಂಡಿತೆ ಎನ್ನಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ, ಸೂಲಿಬೆಲೆ ಹೋಬಳಿಗಳ 36 ಗ್ರಾಮಗಳ 18,000 ಎಕರೆ ಕೃಷಿ ಭೂಮಿಯಲ್ಲಿ ಉಪನಗರ ನಿರ್ಮಿಸಲು ನಿರ್ಧಾರ ಮಾಡಿರುವುದು ರೈತ ವಿರೋಧಿ ನಿರ್ಧಾರ. ಕೂಡಲೇ ಈ ಯೋಜನೆಯನ್ನು ಕೈಬಿಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.

ಭೂಸ್ವಾಧೀನ ವಿರೋಧ ಹೋರಾಟ ಸಮಿತಿ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ ಉಪನಗರ ಯೋಜನೆ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಸಾವಿರಾರು ರೈತರುಗಳ ಕೃಷಿ ಜಮೀನುಗಳನ್ನು ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಸರ್ಕಾರ ಈ ಕ್ರಮ ವಿರೋಧಿಸಿ ಮಂಗಳವಾರ ನಂದಗುಡಿಯ ಗಾಂಧಿ ಸರ್ಕಲ್ನಲ್ಲಿ ರೈತರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರೈತರ ಹಿತ ಕಡೆಗಣಿಸಿ 'ಜೆಸಿಬಿ' ಸರ್ಕಾರಗಳು
ರಾಜ್ಯದಲ್ಲಿ ಆಡಳಿತ ನಡೆಸಿರುವ ಜೆಸಿಬಿ ಸರ್ಕಾರಗಳು ರೈತರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸಿವೆ. ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷಗಳನ್ನು ಹೊರತುಪಡಿಸಿ ಉತ್ತಮ ಸರ್ಕಾರವನ್ನು ಆಯ್ಕೆ ಮಾಡುವಾಗ ಸರ್ಕಾರ ನೂರು ಭಾರಿ ಯೋಚಿಸಿ ಉತ್ತಮ ಪಕ್ಷ ಆರಿಸಬೇಕು ಎಂದರು.
ರಾಜ್ಯದ ರೈತರನ್ನು ಈ ರಾಜಕಾರಣಿಗಳು ಕಷ್ಟಕ್ಕೆ ತಳ್ಳುತ್ತಿದ್ದಾರೆ. ಅವರ ಏಳಿಗೆ ಬಗ್ಗೆ ಇವರಿಗೆ ಕಾಳಜಿಯೇ ಇಲ್ಲದಾಗಿದೆ. ರಾಜ್ಯದಲ್ಲಿ ರೈತಪರ ಸರ್ಕಾರ ಬರಬೇಕು, ರೈತ ಸಂಘಟನೆಗಳ ಪಕ್ಷಗಳು ಅಧಿಕಾರಕ್ಕೆ ಬಂದರೆ ಮಾತ್ರ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ರಿಯಲ್ ಎಸ್ಟೇಟ್ ದಂಧೆಗೆ ಅವಕಾಶ ಬೇಡ
ಬಲವಂತವಾಗಿ ಕೃಷಿ ಭೂಮಿಯನ್ನು ವಶಪಡಿಸಿಕೊಂಡು ರಿಯಲ್ ಎಸ್ಟೇಟ್ ದಂಧೆಗೆ ಸರ್ಕಾರ ಅವಕಾಶ ಕೊಡಬಾರದು. ಕೃಷಿ ಭೂಮಿಯನ್ನು ಕಳೆದುಕೊಂಡರೆ ಅದನ್ನೇ ನೆಚ್ಚಿಕೊಂಡು ಬುದಕು ಸಾಗಿಸುತ್ತಿರುವ ಸಾವಿರಾರು ಕೃಷಿ ಕುಟುಂಬಗಳು, ಕಾರ್ಮಿಕರು ಬೀದಿಗೆ ಬೀಳುತ್ತಾರೆ. ಅವರ ಬದುಕು ದುಸ್ತರವಾಗಲಿದೆ. ನಿರುದ್ಯೋಗ ಸಮಸ್ಯೆ ಕಾಡಲಿದೆ ಎಂದು ಅವರು ಸರ್ಕಾರಕ್ಕೆ ಮನದಟ್ಟು ಮಾಡಿದರು.
ಡಿಕೆಶಿಯವರೇ ರೈತರ ನೆಮ್ಮದಿ ಹಾಳು ಮಾಡಬೇಡಿ
ದೇಶಕ್ಕೆ ಅನ್ನ ಕೊಡುವುದು ರೈತರಗೆ ಮೊದಲಿನಿಂದ ಸಿಗಬೇಕಾದ ಪ್ರಾಮುಖ್ಯತೆ ದೊರೆಯುತ್ತಿಲ್ಲ. ನೀವು ಬೆಳೆಯುವ ರೇಷ್ಮೆಯಿಂದ ಬಟ್ಟೆ ಧರಿಸುತ್ತಿದ್ದಾರೆ, ನಾವು ರೈತರಿಗೆ ಋಣವಾಗಿರಬೇಕು. ಆದರೆ ಕಾಂಗ್ರೆಸ್, ಬಿಜೆಪಿ ಸರ್ಕಾರಗಳು ರೈತರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸಿವೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ನಿಮ್ಮ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ರೈತರ ನೆಮ್ಮದಿ ಹಾಳು ಮಾಡಬೇಡಿ ಎಂದು ಅವರು ಎಚ್ಚರಿಕೆ ಕೊಟ್ಟರು.
ಇನ್ನೂ ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಹುದ್ದೆಗೇರುವ ಮುನ್ನ ಎಷ್ಟು ಆಸ್ತಿ ಹೊಂದಿದ್ದರು. ಈಗ ಎಷ್ಟು ಆಸ್ತಿ, ಜಮೀನು ಜಮೀನು ಹೊಂದಿದ್ದಾರೆ? ಎಲ್ಲವೂ ಇವರಿಗೆ ಬೇಕು ಎಂದರೆ ಬಡವರು ಎಲ್ಲಿಗೆ ಹೋಗಬೇಕು ಎಂದು ಅವರು ರಾಜಕಾರಣಿಗಳ ನಿರ್ಲಕ್ಷಕ್ಕೆ ಕಿಡಿ ಕಾರಿದರು.
ಯೋಜನೆ ಮುಂದುವರೆಸಿದರೆ ಬೃಹತ್ ಹೋರಾಟ, ಎಚ್ಚರಿಕೆ
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಮಾತನಾಡಿ, ಕಾಂಗ್ರೆಸ್ ಆಗಲಿ ಬಿಜೆಪಿಯಾಗಲಿ ರೈತರ ಹಿತ ಕಾಯಲು ಎಂದೂ ಪ್ರಯತ್ನ ಮಾಡಿಲ್ಲ. ಇವರ ರಿಯಲ್ ಎಸ್ಟೇಟ್ ಲಾಭಿಗೆ ರಾಜ್ಯದ ರೈತರನ್ನು ಬಲಿ ಕೊಡಲು ಹೊರಟಿದ್ದಾರೆ. ಇದಕ್ಕೆ ಆಮ್ ಆದ್ಮಿ ಪಾರ್ಟಿ ಅವಕಾಶ ಕೊಡುವುದಿಲ್ಲ, ರೈತರು ನಡೆಸುತ್ತಿರುವ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.
ರೈತರ ಬೇಡಿಕೆಯನ್ನು ಪರಿಗಣಿಸಿ ಕೂಡಲೇ ಸರ್ಕಾರ ಈ ಉಪನಗರ ಯೋಜನೆಯನ್ನು ಕೈಬಿಡಬೇಕು. ಒಂದು ವೇಳೆ ಸರ್ಕಾರ ಏನಾದರೂ ರೈತರ ಜಮೀನು ಕಸಿಯಲು ಮುಂದಾದರೆ ಆಮ್ ಆದ್ಮಿ ಪಾರ್ಟಿ ವತಿಯಿಂದ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications