ನಕಲಿ ಮತಚೀಟಿ ಹಾವಳಿ ತಡೆಗೆ ಎಎಪಿ ಹೆಲ್ಪ್ ಲೈನ್
ಬೆಂಗಳೂರು, ಮಾರ್ಚ್ 14: ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರದ ದೇವಸಂದ್ರ ವಾರ್ಡಿನಲ್ಲಿ ನಡೆದಿದೆ ಎನ್ನಲಾದ ನಕಲಿ ಮತಚೀಟಿ ಹಾವಳಿಯನ್ನು ಮಟ್ಟ ಹಾಕಿ, ಆರೋಪಿಗಳನ್ನು ಬಂಧಿಸುವಂತೆ ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.
ಅಲ್ಲಿನ ಸ್ಥಳೀಯ ಕಾರ್ಪೋರೇಟರ್ ಒಡೆತನದ ಸತ್ಯಸಾಯಿ ಆಸ್ಪತ್ರೆಯ ವಿಳಾಸ ನೀಡಿ 39 ಜನರು ನಕಲಿ ಮತದಾನ ಚೀಟಿ ಪಡೆದಿರುವುದು ಬೆಳಕಿಗೆ ಬಂದಿದೆ. ಕೆ.ಆರ್ ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್ ರವರು ಇಂತಹ ಸಾವಿರಾರು ನಕಲಿ ವಿಳಾಸಗಳನ್ನು ನೀಡಿ ಮತಪಟ್ಟಿಗೆ ಮತದಾರರನ್ನು ಸೇರಿಸಿರುವ ಬಗ್ಗೆ ಸಾಕಷ್ಟು ಅನುಮಾನಗಳಿವೆ.
ಏಕಾಏಕಿ 1.25 ಲಕ್ಷ ಮತದಾರರು ಈ ಸಾಲಿನಲ್ಲಿ ಸೇರಿಕೊಂಡಿರುವುದು ಇದಕ್ಕೆ ಪೂರಕವಾಗಿದೆ. ಸಾಲದ್ದಕ್ಕೆ ಭೈರತಿ ಬಸವರಾಜ್ ಬಂಟ, ದೇವಸಂದ್ರ ವಾರ್ಡಿನ ಪಾಲಿಕೆ ಸದಸ್ಯ ಶ್ರೀಕಾಂತ್ ಈಗಾಗಲೇ ಇಂತಹ ಅಕ್ರಮ ನಡೆಸಿ ಸಿಕ್ಕಿಬಿದ್ದಿದ್ದಾರೆ.
ಶಾಸಕರು ಹಾಗೂ ಅವರ ಬೆಂಬಲಿಗರ ಈ ಕುಕೃತ್ಯಗಳಿಂದಾಗಿ ಕ್ಷೇತ್ರಾದ್ಯಂತ ನಕಲಿ ಮತದಾರರು ಸೃಷ್ಟಿಯಾಗಿ, ಕಳ್ಳ ಮತದಾನವಾಗುವ ಸಾಧ್ಯತೆಗಳು ಜಾಸ್ತಿ ಇವೆ.

ಬೆಂಗಳೂರಿನಾದ್ಯಂತ ಸಮಸ್ಯೆ ಇದೆ: ಇದು ಕೇವಲ ಕೆ.ಆರ್ ಪುರಂಗೆ ಮಾತ್ರ ಸೀಮಿತವಾಗದೇ ಬೆಂಗಳೂರಿನಾದ್ಯಂತ ಈ ರೀತಿ ಅಕ್ರಮ ನಡೆದಿರುವ ಸಾಧ್ಯತೆ ಇದ್ದು, ಈ ಕೂಡಲೇ ಚುನಾವಣಾ ಅಯೋಗವು ಎಲ್ಲಾ 198 ವಾರ್ಡುಗಳಲ್ಲೂ ಮತದಾರರ ಪಟ್ಟಿಯನ್ನು ಪುನರ್ ಪರಿಶೀಲನೆಗೆ ಒಳಪಡಿಸಿ, ಮತ್ತೊಮ್ಮೆ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂದು ಆಮ್ ಆದ್ಮಿ ಪಕ್ಷವು ಒತ್ತಾಯಿಸುತ್ತದೆ.
ಸರ್ಕಾರವು ಮಹಾನಗರಪಾಲಿಕೆ ಸದಸ್ಯ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲೇಬೇಕಾಗಿದೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಶಾಸಕ ಬಸವರಾಜ್ ಮತ್ತು ಅವರ ಪಟಾಲಂಗಳ ವಿರುದ್ಧ ಸೂಕ್ತ ತನಿಖೆಯನ್ನು ನಡೆಸಬೇಕು ಮತ್ತು ಈಗಿನ ಮತದಾರರ ಪಟ್ಟಿಯಲ್ಲಿ ಅವ್ಯವಹಾರಗಳನ್ನು ನಡೆಸಿರುವ ಕಾರಣ ಸಂಪೂರ್ಣ ತನಿಖೆ ನಡೆಸಿ, ಮತ್ತೊಮ್ಮೆ ಬಿಡುಗಡೆ ಮಾಡಬೇಕೆಂದು ಆಗ್ರಹಿಸುತ್ತದೆ.

ಒಂದು ಪಕ್ಷ ಇವಿಎಂ ತಿರುಚುವ ಯತ್ನದಲ್ಲಿದ್ದರೆ, ಇನ್ನೊಂದು ಪಕ್ಷ ನಕಲಿ ಮತದಾರರನ್ನು ಸೃಷ್ಟಿ ಮಾಡುವ ಕೆಲಸ ಮಾಡುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಕೆಲಸ.
ಆಮ್ ಆದ್ಮಿ ಪಕ್ಷ ಬೆಂಗಳೂರಿನ ಎಲ್ಲಾ 198 ವಾರ್ಡುಗಳಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಿ, ನಕಲಿ ಮತದಾರನ್ನು ಪತ್ತೆ ಹಚ್ಚುವ ಕೆಲಸ ಮಾಡಲಿದೆ ಮತ್ತು ಸಾರ್ವಜನಿಕರು ಕೂಡ ಈ ಕಾರ್ಯದಲ್ಲಿ ಕೈ ಜೋಡಿಸಬಹುದಾಗಿದ್ದು ಆಮ್ ಆದ್ಮಿ ಪಕ್ಷ ಶೀಘ್ರವೇ ಈ ಸಂಬಂಧ ಹೆಲ್ಪ್ಲೈನ್ ಕೂಡ ತೆರೆಯಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications