ಬೆಂಗಳೂರಲ್ಲಿ ನೀರಿನ ಮಾಫಿಯಾ, 1 ಟ್ಯಾಂಕರ್ ನೀರಿಗೆ 3000 ರೂ: ಅಕ್ರಮ ಟ್ಯಾಂಕರ್ ಜಪ್ತಿಗೆ ಎಎಪಿ ಆಗ್ರಹ
ಬೆಂಗಳೂರು: ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಟ್ಯಾಂಕರ್ ಮಾಫಿಯಾ ದೊಡ್ಡ ಸಮಸ್ಯೆಯಾಗಿದೆ. ಸಾವಿರಾರು ಖಾಸಗಿ ಬೋರ್ವೆಲ್ಗಳು ಮತ್ತು ಟ್ಯಾಂಕರ್ಗಳ ಮೂಲಕ ನೀರನ್ನು ಹೆಚ್ಚುವರಿ ದರಕ್ಕೆ ಮಾರಾಟ ಮಾಡುವ ಬೃಹತ್ ಜಾಲವು ಈಗಿನ ಬೇಸಿಗೆ ಸಂದರ್ಭದಲ್ಲಿ ಮತ್ತೆ ಗರಿಗೆದರಿದೆ. ಕೆಲವೊಮ್ಮೆ ಒಂದು ಟ್ಯಾಂಕರ್ ನೀರಿಗೆ ₹3000 ಅಥವಾ ಅದಕ್ಕಿಂತ ಹೆಚ್ಚು ವಸೂಲಿ ಮಾಡುವ ಘಟನೆಗಳೂ ಅನೇಕ ವರ್ಷಗಳಿಂದ ವರದಿಯಾಗುತ್ತಿವೆ ಎಂದು ಆಮ್ ಆದ್ಮಿ ಪಕ್ಷ ದೂರಿದೆ.
ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಅವರು, ಈ ಸಮಸ್ಯೆಯನ್ನು ತಡೆಯಲು ಸರ್ಕಾರ ಕೂಡಲೇ ಅಕ್ರಮ ಖಾಸಗಿ ಟ್ಯಾಂಕರ್ ಗಳನ್ನು ವಶಪಡಿಸಿಕೊಂಡು ಅವುಗಳ ಮೂಲಕ ಉಚಿತವಾಗಿ ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಆಗ್ರಹಿಸಿದರು.

ಬೆಂಗಳೂರಿನಲ್ಲಿನ ಎಲ್ಲಾ ಟ್ಯಾಂಕರ್ಗಳಿಗೆ ಕಡ್ಡಾಯ ನೋಂದಣಿ ಮತ್ತು ಜಿಪಿಎಸ್ ಟ್ರ್ಯಾಕಿಂಗ್, ಲೈಸೆನ್ಸ್ ಕಡ್ಡಾಯ ಮಾಡಬೇಕು. ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಮೂಲಕ ನೀರು ಎಲ್ಲಿ ತೆಗೆದುಕೊಳ್ಳುತ್ತಾರೆ? ಮತ್ತು ಎಲ್ಲಿ ನೀಡುತ್ತಾರೆ ಎಂದು ನಿಗಾ ವಹಿಸಬೇಕು. ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುವ ಟ್ಯಾಂಕರ್ಗಳಿಗೆ ಭಾರೀ ದಂಡ ಮತ್ತು ವಾಹನ ಜಪ್ತಿ ಮಾಡಬೇಕು ಎಂದು ಅವರು ಸರ್ಕಾರದ ಬಳಿ ಮನವಿ ಮಾಡಿದರು.
ಖಾಸಗಿ ಬೋರ್ವೆಲ್ಗಳ ಸರ್ವೇಗೆ ಒತ್ತಾಯ
ನಗರದಲ್ಲಿ ಇರುವ ಎಲ್ಲಾ ಖಾಸಗಿ ಬೋರ್ವೆಲ್ಗಳ ಸರ್ವೇ ಮಾಡಬೇಕು. ಅನುಮತಿ ಇಲ್ಲದೆ ಬೋರ್ವೆಲ್ಗಳಿಂದ ನೀರು ತೆಗೆದು ಮಾರಾಟ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಬೋರ್ವೆಲ್ಗೆ ಡಿಜಿಟಲ್ ಮೀಟರ್ ಹಾಕಿ ಎಷ್ಟು ನೀರು ತೆಗೆದುಕೊಳ್ಳುತ್ತಾರೆ ಎಂದು ದಾಖಲಿಸಬೇಕು.
'ಸಂಚಾರಿ ಕಾವೇರಿ ಯೋಜನೆ' ವಿಸ್ತರಿಸಿ
ಬೆಂಗಳೂರು ಜಲ ಮಂಡಳಿ ಆರಂಭಿಸಿರುವ 'ಸಂಚಾರಿ ಕಾವೇರಿ ಯೋಜನೆ' ಮೂಲಕ ಸರ್ಕಾರದ ಟ್ಯಾಂಕರ್ಗಳಿಂದ ಕಡಿಮೆ ದರದಲ್ಲಿ ನೀರು ನೀಡಲಾಗುತ್ತಿದೆ. ಈ ವ್ಯವಸ್ಥೆಯನ್ನು ನಗರದೆಲ್ಲೆಡೆ ವಿಸ್ತರಿಸಿದರೆ ಖಾಸಗಿ ಟ್ಯಾಂಕರ್ ಮಾಫಿಯಾದ ಪ್ರಭಾವ ಕಡಿಮೆಯಾಗುತ್ತದೆ " ಎಂದು ಸತೀಶ್ ಕುಮಾರ್ ಅಗ್ರಹಿಸಿದರು.
ಜನರು ಅಕ್ರಮ ಟ್ಯಾಂಕರ್ಗಳ ಬಗ್ಗೆ ದೂರು ನೀಡುವ ಸಹಾಯವಾಣಿ ನಂಬರ್ ಗಳು ಹಾಗೂ ಮೊಬೈಲ್ ಆಪ್ ಗಳನ್ನು ಕೂಡಲೆ ಸ್ಥಾಪಿಸಬೇಕು. ಸ್ಥಳೀಯ ನಿವಾಸಿ ಸಂಘಗಳು (RWA) ನೀರಿನ ಬಳಕೆಯನ್ನು ನಿಯಂತ್ರಿಸಲು ಅಧಿಕಾರಗಳನ್ನು ನೀಡಬೇಕು ಎಂದು ಸತೀಶ್ ಕುಮಾರ್ ಆಗ್ರಹಿಸಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications