ಭ್ರಷ್ಟ ಸಚಿವ ಆರ್.ಅಶೋಕ್ ರಾಜಿನಾಮೆಗೆ ಆಗ್ರಹಿಸಿ ಎಎಪಿ ಜಾಥಾ

ಬೆಂಗಳೂರು, ಜನವರಿ 27: ಭ್ರಷ್ಟ, ಅಸಮರ್ಥ ಸಚಿವ ಆರ್. ಅಶೋಕ್ ಅವರು ರಾಜಿನಾಮೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಮತ್ತು ಉಪಾಧ್ಯಕ್ಷ ಸುರೇಶ್ ರಾಥೋಡ್ ಬುಧವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಆಗ್ರಹಿಸಿದರು. ಫೆ.1 ಕ್ಕೆ ಆಮ್ ಆದ್ಮಿ ಪಕ್ಷದಿಂದ "ಜನರ ಕಂದಾಯ ಮಂತ್ರಿಗಳಿಗೆ ಆದಾಯ" ಘೋಷಣೆಯೊಂದಿಗೆ ಬೃಹತ್ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದೆ ಎಂದರು.

ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದ ಬಿಜೆಪಿ ರಾಜ್ಯದ ಅಭ್ಯುದಯದ ಬಗ್ಗೆ ಯೋಚನೆ ಮಾಡುವುದನ್ನು ಬಿಟ್ಟು ಕೇವಲ ಹಗರಣದಲ್ಲೇ ಕಾಲ ಕಾಳೆಯುತ್ತಿದೆ, ಸಾವಿರಾರು ಕೋಟಿ ಜನ ಸಾಮಾನ್ಯರ ಹಣವನ್ನು ನುಂಗಿ ನೀರು ಕುಡಿಯುತ್ತಿದೆ. ಸಚಿವ ಸಂಪುಟದ ಸಹೋದ್ಯೋಗಿಗಳ ಹಗರಣಗಳ ಬಗ್ಗೆ ಕಿಂಚಿತ್ತೂ ಮಾತನಾಡದ ಯಡಿಯೂರಪ್ಪ ಅವರು ಈ ರಾಜ್ಯ ಕಂಡ ಅಸಮರ್ಥ, ಅತಿ ಭ್ರಷ್ಟ ಮುಖ್ಯಮಂತ್ರಿ ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ನುಡಿದರು.

ಬುಧವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, ಕಂದಾಯ ಸಚಿವರಾಗಿರುವ ಆರ್.‌ಅಶೋಕ್ ಅವರ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತೆ ಬಯಲಾಗಿದೆ, ಸಚಿವರೇ ನಿಮ್ಮ ಆಪ್ತ ಸಹಾಯಕ ಅಧಿಕಾರಿಯ ಬಳಿ ಲಂಚ ಕೇಳಿರುವ ಆರೋಪದ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.

AAP Karnataka demand resignation of revenue minister R Ashoka

ಮೊದಲ ಭಾರೀ ಬಿಜೆಪಿ ಸರ್ಕಾರ ರಚಿಸಿದಾಗ ಸಾರಿಗೆ ಸಚಿವರಾಗಿ ಅಧಿಕಾರ ಅನುಭವಿಸಿದ ಆರ್.ಅಶೋಕ್ ಅವರು ಲಾಭದಲ್ಲಿ ಇದ್ದ ಕೆಎಸ್‌ಆರ್‌ಟಿಸಿ ಸಂಸ್ಥೆಯನ್ನು ಲೂಟಿ ಮಾಡಿದ ಪರಿಣಾಮ ಇಂದು ಸಂಬಳ ಕೊಡದ ಸ್ಥಿತಿಗೆ ತಲುಪಿದೆ. ಭೂ ಕಳಬಳಿಕೆ ಹಿನ್ನೆಲೆ 13 ಸಾವಿರ ಪ್ರಕರಣಗಳು ಹೈಕೋರ್ಟಿನಲ್ಲಿ ಬಾಕಿ ಇರುವಾಗಲೇ ಸರ್ಕಾರದ ಮೇಲೆ ಒತ್ತಡ ತಂದು 79 ಎ, ಬಿ ಕಾಯ್ದೆ ತಿದ್ದುಪಡಿ ಮಾಡಿಸಿ ಭೂಗಳ್ಳರ ರಕ್ಷಣೆಗೆ ನಿಂತಿದ್ದಾರೆ ಎಂದು ಆರೋಪಿಸಿದರು.

ನೇರಾನೇರ ಹಣದ ಲೂಟಿಗೆ ಇಳಿದಿರುವ ಆರ್.ಅಶೋಕ್ ಅವರ ರಾಜಿನಾಮೆಗೆ ಒತ್ತಾಯಿಸಿ ಇದೇ ಸೋಮವಾರ (ಫೆ.1) ಮೈಸೂರು ಬ್ಯಾಂಕ್ ಸರ್ಕಲ್‌ನಿಂದ ಸಚಿವರ ಸರ್ಕಾರಿ ನಿವಾಸದ ತನಕ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಬೃಹತ್ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಬೆಂಳೂರು ನಗರ ಉಪಾಧ್ಯಕ್ಷ ಸುರೇಶ್ ರಾಥೋಡ್ ಅವರು ಮಾತನಾಡಿ, ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವುದರ ಮೂಲಕ 1997, 1999, 2004 ರಿಂದ 3 ಬಾರಿ ಹಾಗೂ ಪದ್ಮನಾಭನಗರವನ್ನು 3 ಬಾರಿ ಒಟ್ಟು 6 ಬಾರಿ ಪ್ರತಿನಿಧಿಸಿ ಶಾಸಕರಾಗಿದ್ದ ಆರ್.ಅಶೋಕ್ ಅವರು ಸರ್ಕಾರಿ ಜಾಗಗಳನ್ನು ರಕ್ಷಿಸುವ ಬದಲು ಹೊಸಕೆರೆಹಳ್ಳಿ, ಗೌಡಯ್ಯನ ಕೆರೆ, ಚಿಕ್ಕಲ್ಲಸಂದ್ರ ಕೆರೆ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಗಳ ರಾಜಕಾಲುವೆ, ಕೆರೆ ಜಾಗ ಒತ್ತುವರಿ ಮಾಡಿಕೊಂಡು ಅಕ್ರಮ ಬಡಾವಣೆಗಳನ್ನು ನಿರ್ಮಿಸುವವರಿಗೆ ಬೆನ್ನೆಲುಬಾಗಿ ನಿಂತು ಅಮಾಯಕ ಜನಗಳಿಗೆ ಮೋಸ ಮಾಡಿದ ಪಾಪ ಇವರ ಮೇಲಿದೆ ಎಂದರು.

ರಾಜ್ಯದಲ್ಲಿ ಸಾವಿರಾರು ಎಕರೆ ಕಂದಾಯ ಭೂಮಿ ಪ್ರಭಾವಿಗಳ ಪಾಲಾಗುತ್ತಿದ್ದರೂ ಕಿಂಚಿತ್ತೂ ಕ್ರಮವಹಿಸದೇ ತನ್ನ ಆಪ್ತರ ಮೂಲಕ ಕೊಳ್ಳೆ ಹೊಡೆಯುತ್ತಿರುವ ಆರ್.ಅಶೋಕ್ ಅವರು ನಾಲಾಯಕ್ ಸಚಿವರು ಎಂದು ಆಕ್ರೋಶ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+