ಬಿಬಿಎಂಪಿ ಚುನಾವಣೆ ನಡೆಸಿ ಬೆಂಗಳೂರು ಉಳಿಸಿ: ಎಎಪಿ ಪ್ರತಿಭಟನೆ
ಬೆಂಗಳೂರು, ಡಿಸೆಂಬರ್ 06: ಎರಡು ವರ್ಷಗಳಿಂದ ಬಿಬಿಎಂಪಿ ಚುನಾವಣೆಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕವಾಗಿದೆ. ಬಿಜೆಪಿ ಈ ನಡೆ ಖಂಡಿಸಿ ಬಿಬಿಎಂಪಿ ಚುನಾವಣೆ ನಡೆಸುವಂತೆ ಆಗ್ರಹಿಸಿ ಡಿಸಿ ಆಮ್ ಆದ್ಮಿ ಪಾರ್ಟಿ (ಎಎಪಿ) ಮುಖಂಡರು ಮಂಗಳವಾರ ಉಪವಾಸ ಸತ್ಯಾಗ್ರಹ ನಡೆಸಿದರು.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ 'ಬಿಬಿಎಂಪಿ ಚುನಾವಣೆ ನಡೆಸಿ, ಬೆಂಗಳೂರು ಉಳಿಸಿ" ಎಂದು ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಸತ್ಯಾಗ್ರಹ ವೇಳೆ ಎಎಪಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಸೋಲಿನ ಭಯದಿಂದಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿಜೆಪಿಯು ಬಿಬಿಎಂಪಿ ಚುನಾವಣೆಯನ್ನು ಮುಂದೂಡುತ್ತಿದೆ. ಬಿಜೆಪಿಯ ಈ ಕುತಂತ್ರ ರಾಜಕೀಯದಿಂದಾಗಿ ಬೆಂಗಳೂರಿನ ಜನತೆ ನೂರಾರು ತೊಂದರೆ ಅನುಭವಿಸುತ್ತಿದ್ದಾರೆ. ಸಣ್ಣಪುಟ್ಟ ಸಮಸ್ಯೆಗಳನ್ನು ಹೇಳಿಕೊಳ್ಳಲು ಕಾರ್ಪೊರೇಟರ್ಗಳೇ ಇಲ್ಲ. ಶಾಸಕರು ಹಾಗೂ ಸಂಸದರು ಇದ್ದರೂ ಕೈಗೆ ಸಿಗುವುದಿಲ್ಲ ಎಂದು ದೂರಿದರು.

ಬಿಜೆಪಿ ಸರ್ಕಾರ ಸ್ವಾರ್ಥಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯವನ್ನೇ ಬುಡಮೇಲು ಮಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು ಹಾಗೂ ಶಾಸಕರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ವಿರುದ್ಧ ಬೆಂಗಳೂರಿಗರ ನಿಲುವು ಸ್ಪಷ್ಟ
ಬಿಬಿಎಂಪಿ ಚುನಾವಣೆಗೆ ಒತ್ತಾಯಿಸಿ ಕಳೆದ ಮೂರು ದಿನಗಳು ಬೆಂಗಳೂರಿನಾದ್ಯಂತ ಎಎಪಿ ಕಾರ್ಯಕರ್ತರು ಸಹಿ ಸಂಗ್ರಹ ಅಭಿಯಾನ ನಡೆಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜನರು ನಿಲುವು ತಾಳಿರುವುದು ಈ ವೇಳೆ ನಮ್ಮ ಗಮನಕ್ಕೆ ಬಂದಿದೆ. ಬೆಂಗಳೂರಿನಾದ್ಯಂತ ಆಮ್ ಆದ್ಮಿ ಪಾರ್ಟಿಗೆ ಜನಬೆಂಬಲ ಹೆಚ್ಚಾಗುತ್ತಿದೆ. ಇದು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ ಎಂದರು.

ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ಪ್ರಾಮಾಣಿಕ ಆಡಳಿತವನ್ನು ತರಬೇಕೆಂಬ ಬೆಂಗಳೂರಿಗರ ನಿಲುವನ್ನು ಸಹಿಸಿಕೊಳ್ಳಲು ಸಾಧ್ಯವಾಗದೇ ಬಿಜೆಪಿಯು ಚುನಾವಣೆಯನ್ನು ಮುಂದೂಡುತ್ತಿದೆ. ಸರ್ಕಾರವು ಚುನಾವಣೆ ಮುಂದೂಡಲು ತೋರಿದ ಉತ್ಸಾಹವನ್ನು ಬೆಂಗಳೂರನ್ನು ಅಭಿವೃದ್ಧಿ ಪಡಿಸಲು ತೋರಿಸಿದ್ದರೆ, ಇದು ಇಂದು ಜಗತ್ತಿನ ನಂಬರ್ ಒನ್ ನಗರವಾಗುತ್ತಿತ್ತು ಎಂದು ತಿಳಿಸಿದರು.
ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರು ಬಿಬಿಎಂಪಿ ಚುನಾವಣೆ ನಡೆಯಬೇಕೆಂದು ಆಗ್ರಹಿಸುತ್ತಿಲ್ಲ. ಆಮ್ ಆದ್ಮಿ ಪಾರ್ಟಿ ಒಂದೇ ನಿರಂತರವಾಗಿ ಹೋರಾಟ ಮಾಡುತ್ತಾ, ಪ್ರಜಾಪ್ರಭುತ್ವ ಉಳಿಸಲು ಆಗ್ರಹಿಸುತ್ತಿದೆ. ನಾವು ಚುನಾವಣೆಗೆ ಸಂಪೂರ್ಣ ಸಿದ್ಧವಾಗಿದ್ದು, ಯಾವಾಗ ಚುನಾವಣೆ ನಡೆದರೂ ನಾವೇ ಗೆಲ್ಲುವ ದೃಢ ವಿಶ್ವಾಸವಿದೆ. ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಭರ್ಜರಿ ಬಹುಮತದಿಂದ ಜಯಗಳಿಸಲಿದೆ. ಬಿಬಿಎಂಪಿ ಚುನಾವಣೆಯಲ್ಲೂ ಅಂತಹದ್ದೇ ಫಲಿತಾಂಶ ಬರಲಿದೆ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಎಎಪಿ ಮುಖಂಡರಾದ ಜಗದೀಶ್ ವಿ ಸದಂ, ಅಶೋಕ್ ಮೃತ್ಯುಂಜಯ, ಗೋಪಿನಾಥ್, ಶ್ರೀನಿವಾಸ್ ರೆಡ್ಡಿ, ವೀಣಾ ಸೆರ್ರಾವ್, ಡಾ. ಕೇಶವ ಕುಮಾರ್ ಮತ್ತಿತರ ನಾಯಕರು ಭಾಗವಹಿಸಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications