Get Updates
Get notified of breaking news, exclusive insights, and must-see stories!

Assembly Election: ರಾಜಕಾರಣಿಗಳ ಆಮಿಷ ತಡೆಗೆ ಎಎಪಿ ಆಗ್ರಹ, ಚುನಾವಣಾ ಆಯೋಗಕ್ಕೆ ದೂರು

ಕರ್ನಾಟಕ ರಾಜ್ಯವು ವಿಧಾನಸಭೆ ಚುನಾವಣೆ 2023ರ ಹೊಸ್ತಿಲಿನಲ್ಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಸಣ್ಣಗೆ ಶುರುವಾಗುತ್ತಿದೆ. ಈ ಮಧ್ಯೆ ಮತದಾರರಿಗೆ ವಿವಿಧ ಪಕ್ಷಗಳು ಆಮಿಷ ಒಡ್ಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಆಮ್ ಆದ್ಮಿ ಪಾರ್ಟಿ ಆಗ್ರಹಿಸಿ ದೂರು ನೀಡಿದೆ

ಬೆಂಗಳೂರು, ಜನವರಿ 27: ಕರ್ನಾಟಕ ರಾಜ್ಯವು ವಿಧಾನಸಭೆ ಚುನಾವಣೆ 2023ರ ಹೊಸ್ತಿಲಿನಲ್ಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಸಣ್ಣಗೆ ಶುರುವಾಗುತ್ತಿದೆ. ಈ ಮಧ್ಯೆ ಮತದಾರರಿಗೆ ವಿವಿಧ ಪಕ್ಷಗಳು ಆಮಿಷ ಒಡ್ಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಆಮ್ ಆದ್ಮಿ ಪಾರ್ಟಿ ಆಗ್ರಹಿಸಿ ದೂರು ನೀಡಿದೆ.

ರಾಜ್ಯ ಚುನಾವಣೆ ಆಯೋಗಕ್ಕೆ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯಾಧ್ಯಕ್ಷ ಮೋಹನ್‌ ದಾಸರಿ ದೂರು ಸಲ್ಲಿಸಿ ಮಾತನಾಡಿದರು. ವಿವಿಧ ರಾಜಕೀಯ ಪಕ್ಷಗಳು ಮತದಾರರಿಗೆ ಕುಕ್ಕರ್‌, ಸೀರೆ, ಬಳೆ, ಬೆಳ್ಳಿಯ ಗಣೇಶ ವಿಗ್ರಹ ಮುಂತಾದ ಆಮಿಷಗಳನ್ನು ಒಡ್ಡುತ್ತಿವೆ. ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದರು.

ಮತದಾರರಿಗೆ ಭ್ರಷ್ಟ ರಾಜಕಾರಣಿಗಳು ಕುಕ್ಕರ್, ಸೀರೆ ಮುಂತಾದವುಗಳನ್ನು ಮತದಾರರಿಗೆ ಹಂಚುತ್ತಿರುವದನ್ನು ಪತ್ತೆ ಹುಚ್ಚುವುದೇ ಕಷ್ಟವಾಗಿದೆ. ಆದರೂ ನಾವು ಪತ್ತೆ ಹಚ್ಚಿ, ಮತದಾರರ ಮನವೊಲಿಸಿ ಆ ವಸ್ತುಗಳನ್ನು ತೆಗೆದುಕೊಂಡು ಬಂದಿದ್ದೇವೆ. ರಾಜಕಾರಣಿಗಳು ನೀಡಿದ್ದ ಬೆಳ್ಳಿ ಗಣೇಶ ವಿಗ್ರಹವನ್ನು ಮತದಾರರಿಂದ ತೆಗೆದುಕೊಂಡು ಬರುವುದಂತೂ ತುಂಬಾ ಕಷ್ಟವಾಯಿತು.

AAP Leaders Urges Election Commission To Curb Allurements To Voters By Politicians

ಚುನಾವಣೆ ಸಮೀಪಿಸುತ್ತಿದ್ದಂತೆ ಈ ರೀತಿ ಅವ್ಯಾಹತವಾಗಿ ಆಮಿಷಗಳನ್ನು ಒಡ್ಡಲಾಗುತ್ತಿದೆ. ಹೀಗಾದರೆ ಚುನಾವಣೆಯು ನ್ಯಾಯಯುತವಾಗಿ ನಡೆಯುತ್ತಿದೆ ಎಂದು ಹೇಗೆ ಭಾವಿಸಲು ಸಾಧ್ಯವಾಗುತ್ತದೆ ಎಂದು ಅವರು ಪ್ರಶ್ನಿಸಿದರು. ಚುನಾವಣಾ ಆಯೋಗವು ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಆಮಿಷ ಒಡ್ಡುವವರ ವಿರುದ್ಧ ಶೀಘ್ರವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮೂರೂ ಪಕ್ಷಗಳೂ ಮತದಾರರಿಗೆ ಉಡುಗೊರೆಗಳನ್ನು ನೀಡಿ ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯವನ್ನೇ ಬುಡಮೇಲು ಮಾಡುತ್ತಿವೆ. ರಾಜಕಾರಣಿಗಳ ಹಿನ್ನೆಲೆ, ಸಿದ್ಧಾಂತ, ಸಾಧನೆ ಹಾಗೂ ಆಶ್ವಾಸನೆಗಳನ್ನು ನೋಡಿ ಜನರು ಮತ ಚಲಾಯಿಸಬೇಕು. ಆದರೆ ಇವ್ಯಾವುದೂ ಸರಿಯಿಲ್ಲದ ಕಾರಣಕ್ಕೆ ಅನೇಕ ರಾಜಕಾರಣಿಗಳು ಬೆಲೆಬಾಳುವ ವಸ್ತುಗಳನ್ನು ಉಡುಗೊರೆಯಾಗಿ ನೀಡಿ ಮತ ಕೇಳುತ್ತಿದ್ದಾರೆ. ಅಧಿಕಾರ ಸಿಕ್ಕಾಗಲೆಲ್ಲ ಲೂಟಿ ಮಾಡಿದ ಜನರ ತೆರಿಗೆ ಹಣವನ್ನು ಈಗ ಈ ರೀತಿ ಆಮಿಷವೊಡ್ಡಲು ಬಳಸಿಕೊಳ್ಳುತ್ತಿವೆ. ಜನರು ಇಂತಹವುಗಳಿಗೆ ಮರುಳಾಗದೇ ಪ್ರಾಮಾಣಿಕರಿಗೆ ಮತ ನೀಡಬೇಕು ಎಂದು ಹೇಳಿದರು.

ನೀತಿ ಸಂಹಿತೆ ಜಾರಿಯಾದ ಬಳಿಕವಷ್ಟೇ ಚುನಾವಣಾ ಅಧಿಕಾರಿಗಳು ಆಮಿಷಗಳಿಗೆ ತಡೆಯೊಡ್ಡಲು ಮುಂದಾಗುತ್ತಾರೆ. ಇದರ ಲಾಭ ಪಡೆದ ರಾಜಕಾರಣಿಗಳು ನೀತಿ ಸಂಹಿತೆ ಜಾರಿಗೂ ಮುನ್ನವೇ ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಆದ್ದರಿಂದ ಚುನಾವಣಾ ಆಯೋಗವು ನೀತಿ ಸಂಹಿತೆ ಜಾರಿಯಾಗುವುದಕ್ಕೂ ಮುನ್ನ ಹಂಚುವ ಆಮಿಷಗಳಿಗೂ ಕಡಿವಾಣ ಹಾಕಬೇಕು. ಆಗ ಮಾತ್ರ ಚುನಾವಣೆಯು ನ್ಯಾಯಯುತವಾಗಿ ನಡೆಯುತ್ತದೆ. ಈ ರೀತಿ ದುಬಾರಿ ಆಮಿಷ ಒಡ್ಡಲು ರಾಜಕಾರಣಿಗಳಿಗೆ ಹಣ ಎಲ್ಲಿಂದ ಬರುತ್ತಿದೆ ಎಂಬುದರ ತನಿಖೆಯಾಗಿ ಸತ್ಯ ಹೊರಬರಬೇಕು ಎಂದು ಮನವಿ ಮಾಡಿದರು.

ಎಎಪಿ ಮುಖಂಡರಾದ ಸುರೇಶ್‌ ರಾಥೋಡ್‌, ಜಗದೀಶ್ ಸದಂ, ಉಷಾ ಮೋಹನ್‌, ಸುಮನ್‌ ಪ್ರಶಾಂತ್‌, ಶಾಶಾವಲ್ಲಿ, ಶ್ರೀನಿವಾಸ್‌ ರೆಡ್ಡಿ, ವಿಶ್ವನಾಥ್‌ ಮತ್ತಿತರ ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+