ವಿಧಾನಸೌಧದಲ್ಲಿ 10 ಲಕ್ಷ ನಗದು ಪತ್ತೆ ಪ್ರಕರಣ :ಸಿ.ಸಿ.ಪಾಟೀಲ್ ವಿರುದ್ಧ ತನಿಖೆ ಕೈಗೊಳ್ಳಲು ಎಎಪಿ ಒತ್ತಾಯ
ಬೆಂಗಳೂರು, ಜನವರಿ 06: ವಿಧಾನಸೌಧದಲ್ಲಿ ಅಧಿಕಾರಿಯೊಬ್ಬರ ಬಳಿ 10 ಲಕ್ಷ ರೂಪಾಯಿ ನಗದು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿ ಜೆ.ಜಗದೀಶ್ ಹಾಗೂ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ವಿರುದ್ಧ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.
ಬೆಂಗಳೂರಿನ ಆಮ್ ಆದ್ಮಿ ಪಾರ್ಟಿ (ಎಎಪಿ) ರಾಜ್ಯ ಕೇಂದ್ರ ಕಚೇರಿಯಲ್ಲಿ ಈ ಕುರಿತು ಮಾತನಾಡಿದ ಎಎಪಿ ವಕ್ತಾರ ಹಾಗೂ ಮಾಜಿ ಕೆಎಎಸ್ ಅಧಿಕಾರಿ ಕೆ.ಮಥಾಯಿ ಅವರು, ವಿಧಾನಸೌಧಕ್ಕೆ ತೆರಳುತ್ತಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್ ಜೆ.ಜಗದೀಶ್ ಬಳಿ ಹತ್ತು ಲಕ್ಷ ರೂಪಾಯಿ ಪತ್ತೆಯಾಗಿದೆ. ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹಾಗೂ ಅವರ ಆಪ್ತ ಕಾರ್ಯದರ್ಶಿಯ ಹೆಸರನ್ನು ಬಾಯ್ಬಿಟ್ಟಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ವಿಧಾನಸೌಧದಲ್ಲಿ ಇಷ್ಟು ಪ್ರಮಾಣದಲ್ಲಿ ಹಣ ಪತ್ತೆಯಾಗಿರುವುದು ಇದು ಗುತ್ತಿಗೆ ಕಾಮಗಾರಿಯ. 40 ಪರ್ಸೆಂಟ್ ಕಮಿಷನ್ ಹಣವೆಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ಅವರು ಸರ್ಕಾರಕ್ಕೆ ಆಗ್ರಹಿಸಿದರು.

ಬಿಜೆಪಿಯಿಂದ ಪವಿತ್ರ ಸ್ಥಳದ ಪಾವಿತ್ರ್ಯಕ್ಕೆ ಧಕ್ಕೆ
ಕೆಂಗಲ್ ಹನುಮಂತಯ್ಯನವರು ಕಟ್ಟಿಸಿದ ವಿಧಾನಸೌಧಕ್ಕೆ ರಾಜ್ಯದ ಆಡಳಿತದಲ್ಲಿ ಪವಿತ್ರವಾದ ಸ್ಥಾನವಿದೆ. ಆದರೆ ಭ್ರಷ್ಟ ಬಿಜೆಪಿ ಸರ್ಕಾರವು ವಿಧಾನಸೌಧವನ್ನು 40 ಪರ್ಸೆಂಟ್ ಕಮಿಷನ್ ದಂಧೆಗೆ ಬಳಸಿದೆ. ಈ ಮೂಲಕ ವಿಧಾನಸೌಧದ ಪಾವಿತ್ರ್ಯತೆಗೆ ಧಕ್ಕೆ ತಂದಿದೆ.
ಬಿಜೆಪಿ ಸಚಿವರು, ಶಾಸಕರು, ಅಧಿಕಾರಿಗಳು ವಿಧಾನಸೌಧವನ್ನು ಭ್ರಷ್ಟಾಚಾರದ ಡೀಲ್ ಕುದುರಿಸುವ ಹಾಗೂ ಅಕ್ರಮ ಹಣವನ್ನು ವಿನಿಮಯ ಮಾಡಿಕೊಳ್ಳುವ ಕೇಂದ್ರವನ್ನಾಗಿ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇವೆಲ್ಲದಕ್ಕೂ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಕೆ.ಮಥಾಯಿ ಗಂಭೀರ ಆರೋಪ ಮಾಡಿದರು.

ಬಂಧಿತ ಆರೋಪಿ ಜೆ.ಜಗದೀಶ್ಗೆ ಆ ಹಣವನ್ನು ಕೊಟ್ಟವರು ಯಾರು? ಆತ ಅದನ್ನು ವಿಧಾನಸೌಧಕ್ಕೆ ಏಕೆ ತೆಗೆದುಕೊಂಡು ಬಂದಿದ್ದ?, ಅಲ್ಲಿ ಯಾರಿಗೆ ಆ ಹಣವನ್ನು ಕೊಡಲು ಬಂದಿದ್ದ? ಅದು ಯಾವ ಗುತ್ತಿಗೆ ಕಾಮಗಾರಿಯ ಕಮಿಷನ್? ಎಂಬ ಅನೇಕ ಪ್ರಶ್ನೆಗಳು ಜನರನ್ನು ಕಾಡುತ್ತಿವೆ. ಪೊಲೀಸರು ಶೀಘ್ರವೇ ತನಿಖೆಯನ್ನು ಪೂರ್ಣಗೊಳಿಸಿ ಜನರ ಪ್ರಶ್ನೆಗಳಿಗೆ ಸ್ಪಷ್ಟವಾಗಿ ಉತ್ತರ ನೀಡಬೇಕು. ಸರ್ಕಾರದ ಒತ್ತಡಕ್ಕೆ ಮಣಿದು ಪ್ರಕರಣವನ್ನು ಮುಚ್ಚಿ ಹಾಕಬಾರದು ಎಂದು ಕೆ.ಮಥಾಯಿ ಹೇಳಿದರು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications