ಸಾರಿಗೆ ನೌಕರರ ಆತ್ಮಹತ್ಯೆ: ನ್ಯಾಯಕ್ಕಾಗಿ ಎಎಪಿ ಪ್ರತಿಭಟನೆ
ಬೆಂಗಳೂರು ಆಗಸ್ಟ್ 30: ಅಧಿಕಾರಿಗಳ ಕಿರುಕುಳದಿಂದ ಮನನೊಂದು ಬಿಎಂಟಿಸಿ ನೌಕರ ಹೊಳೆಬಸಪ್ಪ ಆತ್ಮಹತ್ಯೆಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ನೂರಾರು ಜನ ಕಾರ್ಯಕರ್ತರು ರಾಜರಾಜೇಶ್ವರಿನಗರದ ಚನ್ನಸಂದ್ರ ಡಿಪೋ ಬಳಿ ಪ್ರತಿಭಟನೆ ನಡೆಸಿದರು.
ಆಮ್ ಆದ್ಮಿ ಪಕ್ಷ (ಎಎಪಿ)ದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾರಿಗೆ ಸಚಿವ ಶ್ರೀರಾಮುಲು ಸ್ಥಳಕ್ಕೆ ಆಗಮಿಸಬೇಕೆಂದು ಮೃತರ ಶವವನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದರು. ಕೇವಲ 24 ಗಂಟೆಗಳಲ್ಲಿ ಜಿಗಣಿ, ಬನಶಂಕರಿ ಹಾಗೂ ಚನ್ನಸಂದ್ರ ಡಿಪೋಗಳ ಮೂವರು ಸಾರಿಗೆ ನೌಕರರು ಆತ್ಮಹತ್ಯೆಗೆ ಶರಣಾಗಿರುವುದು ದುರ್ದೈವದ ಸಂಗತಿ.
ಕಿರುಕುಳ ಇನ್ನಿತರ ಕಾರಣಗಳಿಂದ ಆತ್ಮಹತ್ಯೆಯಂತ ಅನಾಹುತಗಳ ಆಗುತ್ತಿದ್ದರೂ ಸಹ ರಾಜ್ಯ ಸರ್ಕಾರ ಕಣ್ಣು ಕಾಣದಂತೆ, ಕಿವಿ ಕೇಳಿಸದಂತೆ ಮೂಕ ಪ್ರೇಕ್ಷಕನಾಗಿದೆ. ಇಂತಹ ಸರ್ಕಾರ ರಾಜ್ಯದಲ್ಲಿರುವುದು ದುರದೃಷ್ಟಕರ ಎಂದು ಮೋಹನ್ ದಾಸರಿ ಕಿಡಿ ಕಾರಿದರು.

ನೌಕರರ ಆತ್ಮಹತ್ಯೆಗೆ ಕಾರಣರಾದ ಡಿಪೋ ಮ್ಯಾನೇಜರ್ ಬಂಧಿಸಿ ಅಮಾನತುಗೊಳಿಸಬೇಕು. ಮೃತರಿಗೆ 50 ಲಕ್ಷ ರೂ. ಪರಿಹಾರವನ್ನು ಸ್ಥಳದಲ್ಲೇ ಘೋಷಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸಾರಿಗೆ ಇಲಾಖೆ ನೌಕರರಿಗೆ ನಿರಂತರ ಕಿರುಕುಳ ಲಂಚಕೋರತನ ಇವುಗಳೆಲ್ಲವೂ ಶಾಶ್ವತವಾಗಿ ಪರಿಹಾರವಾಗಬೇಕು ಹಾಗೂ ಸಾರಿಗೆ ನೌಕರರ ವಿರುದ್ಧ ಸರ್ಕಾರದ ದ್ವೇಷ ನೀತಿ ಅನುಸರಿಸುತ್ತಿರುವು ಸರಿಯಲ್ಲ ಎಂದು ಎಎಪಿ ಮುಖಂಡರು, ಕಾರ್ಯಕರ್ತರು ಖಂಡಿಸಿದರು.
ಅಹೋರಾತ್ರಿ ಹೋರಾಟಕ್ಕೆ ನಿರ್ಧಾರ
ಸಾರಿಗೆ ಸಚಿವರಾ ಬಿ. ಶ್ರೀರಾಮುಲು ಹಾಗೂ ಬಿಎಂಟಿಸಿಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು. ಕಿರುಕುಳ, ಸಮಸ್ಯೆ ಕುರಿತ ಪರಿಹಾರ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಉತ್ತರಿಸಲು ಸ್ಥಳಕ್ಕೆ ಬರಬೇಕು. ಅಲ್ಲಿಯವರೆಗೆ ಕಾಯುತ್ತೇವೆ. ಇಂದು ಅಹೋರಾತ್ರಿ ಧರಣಿ ಮುಂದುವರೆಸುತ್ತೇವೆ ಎಂದು ಪ್ರತಿಭಟನಾ ನಿರತ ಎಎಪಿ ಕಾರ್ಯಕರ್ತರು ತಿಳಿಸಿದರು.

ಪ್ರತಿಭಟನೆಯಲ್ಲಿ ಎಎಪಿ ಮುಖಂಡರಾದ ಚನ್ನಪ್ಪಗೌಡ ನಲ್ಲೂರು, ಸುರೇಶ್ ರಾಥೋಡ್, ನಂಜಪ್ಪ ಕಾಳೇಗೌಡ, ಶ್ಯಾಮಸುಂದರ್ ಮನಂ ಶಶಿಧರ ಆರಾಧ್ಯ ಸೇರಿದಂತೆ ಹಲವಾರು ಜನ ಪಾಲ್ಗೊಂಡಿದ್ದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications