ಸಾರಿಗೆ ನೌಕರರ ಆತ್ಮಹತ್ಯೆ: ನ್ಯಾಯಕ್ಕಾಗಿ ಎಎಪಿ ಪ್ರತಿಭಟನೆ
ಬೆಂಗಳೂರು ಆಗಸ್ಟ್ 30: ಅಧಿಕಾರಿಗಳ ಕಿರುಕುಳದಿಂದ ಮನನೊಂದು ಬಿಎಂಟಿಸಿ ನೌಕರ ಹೊಳೆಬಸಪ್ಪ ಆತ್ಮಹತ್ಯೆಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ನೂರಾರು ಜನ ಕಾರ್ಯಕರ್ತರು ರಾಜರಾಜೇಶ್ವರಿನಗರದ ಚನ್ನಸಂದ್ರ ಡಿಪೋ ಬಳಿ ಪ್ರತಿಭಟನೆ ನಡೆಸಿದರು.
ಆಮ್ ಆದ್ಮಿ ಪಕ್ಷ (ಎಎಪಿ)ದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾರಿಗೆ ಸಚಿವ ಶ್ರೀರಾಮುಲು ಸ್ಥಳಕ್ಕೆ ಆಗಮಿಸಬೇಕೆಂದು ಮೃತರ ಶವವನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದರು. ಕೇವಲ 24 ಗಂಟೆಗಳಲ್ಲಿ ಜಿಗಣಿ, ಬನಶಂಕರಿ ಹಾಗೂ ಚನ್ನಸಂದ್ರ ಡಿಪೋಗಳ ಮೂವರು ಸಾರಿಗೆ ನೌಕರರು ಆತ್ಮಹತ್ಯೆಗೆ ಶರಣಾಗಿರುವುದು ದುರ್ದೈವದ ಸಂಗತಿ.
ಕಿರುಕುಳ ಇನ್ನಿತರ ಕಾರಣಗಳಿಂದ ಆತ್ಮಹತ್ಯೆಯಂತ ಅನಾಹುತಗಳ ಆಗುತ್ತಿದ್ದರೂ ಸಹ ರಾಜ್ಯ ಸರ್ಕಾರ ಕಣ್ಣು ಕಾಣದಂತೆ, ಕಿವಿ ಕೇಳಿಸದಂತೆ ಮೂಕ ಪ್ರೇಕ್ಷಕನಾಗಿದೆ. ಇಂತಹ ಸರ್ಕಾರ ರಾಜ್ಯದಲ್ಲಿರುವುದು ದುರದೃಷ್ಟಕರ ಎಂದು ಮೋಹನ್ ದಾಸರಿ ಕಿಡಿ ಕಾರಿದರು.

ನೌಕರರ ಆತ್ಮಹತ್ಯೆಗೆ ಕಾರಣರಾದ ಡಿಪೋ ಮ್ಯಾನೇಜರ್ ಬಂಧಿಸಿ ಅಮಾನತುಗೊಳಿಸಬೇಕು. ಮೃತರಿಗೆ 50 ಲಕ್ಷ ರೂ. ಪರಿಹಾರವನ್ನು ಸ್ಥಳದಲ್ಲೇ ಘೋಷಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸಾರಿಗೆ ಇಲಾಖೆ ನೌಕರರಿಗೆ ನಿರಂತರ ಕಿರುಕುಳ ಲಂಚಕೋರತನ ಇವುಗಳೆಲ್ಲವೂ ಶಾಶ್ವತವಾಗಿ ಪರಿಹಾರವಾಗಬೇಕು ಹಾಗೂ ಸಾರಿಗೆ ನೌಕರರ ವಿರುದ್ಧ ಸರ್ಕಾರದ ದ್ವೇಷ ನೀತಿ ಅನುಸರಿಸುತ್ತಿರುವು ಸರಿಯಲ್ಲ ಎಂದು ಎಎಪಿ ಮುಖಂಡರು, ಕಾರ್ಯಕರ್ತರು ಖಂಡಿಸಿದರು.
ಅಹೋರಾತ್ರಿ ಹೋರಾಟಕ್ಕೆ ನಿರ್ಧಾರ
ಸಾರಿಗೆ ಸಚಿವರಾ ಬಿ. ಶ್ರೀರಾಮುಲು ಹಾಗೂ ಬಿಎಂಟಿಸಿಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು. ಕಿರುಕುಳ, ಸಮಸ್ಯೆ ಕುರಿತ ಪರಿಹಾರ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಉತ್ತರಿಸಲು ಸ್ಥಳಕ್ಕೆ ಬರಬೇಕು. ಅಲ್ಲಿಯವರೆಗೆ ಕಾಯುತ್ತೇವೆ. ಇಂದು ಅಹೋರಾತ್ರಿ ಧರಣಿ ಮುಂದುವರೆಸುತ್ತೇವೆ ಎಂದು ಪ್ರತಿಭಟನಾ ನಿರತ ಎಎಪಿ ಕಾರ್ಯಕರ್ತರು ತಿಳಿಸಿದರು.

ಪ್ರತಿಭಟನೆಯಲ್ಲಿ ಎಎಪಿ ಮುಖಂಡರಾದ ಚನ್ನಪ್ಪಗೌಡ ನಲ್ಲೂರು, ಸುರೇಶ್ ರಾಥೋಡ್, ನಂಜಪ್ಪ ಕಾಳೇಗೌಡ, ಶ್ಯಾಮಸುಂದರ್ ಮನಂ ಶಶಿಧರ ಆರಾಧ್ಯ ಸೇರಿದಂತೆ ಹಲವಾರು ಜನ ಪಾಲ್ಗೊಂಡಿದ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications