ವಿಪತ್ತು ನಿರ್ವಹಣೆಗೆ ಆಪದ್ ಮಿತ್ರ: ಸಂತ್ರಸ್ತರ ನೆರವಿಗಾಗಿ ತಂಡ

ಬೆಂಗಳೂರು, ಏಪ್ರಿಲ್ 17: ಅತಿವೃಷ್ಟಿ, ಭೂಕುಸಿತ, ಪ್ರವಾಹದಂತಹ ವಿಪತ್ತು ನಿರ್ವಹಣೆಗೆ 'ಆಪದ್ ಮಿತ್ರ 'ಎನ್ನವು ತಂಡವೊಂದು ಸಜ್ಜಾಗುತ್ತಿದೆ.

ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ, ಶೀಘ್ರ ನೆರವು ರಕ್ಷಣೆ ಸಿಗಬೇಕು ಎಂಬ ಉದ್ದೇಶಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಂಡಳಿ ದೇಶದ 25 ರಾಜ್ಯಗಳಲ್ಲಿ ಹೆಚ್ಚು ಪ್ರವಾಹ ಪೀಡಿತ ಪ್ರದೇಶ ಯಾವ ಜಿಲ್ಲೆಯಲ್ಲಿದೆ ಎಂಬುದನ್ನು ಗುರುತಿಸಿ ಆಪದ್ ಮಿತ್ರ ಸ್ಥಳೀಯ ಸ್ವಯಂ ಸೇವಕರ ತಂಡವನ್ನು ರಚಿಸುವಂತೆ ಸೂಚಿಸಿದೆ. ಮೊದಲು ಬೆಳಗಾವಿಯಲ್ಲಿ ಕಾರ್ಯನಿರ್ವಹಿಸಲಿದೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಆಪದ್ ಮಿತ್ರ ಎಂದರೇನು? ಕಟ್ಟಡ ಕುಸಿತ, ಪ್ರವಾಹ, ಅತಿವೃಷ್ಟಿಯಂತಹ ಪ್ರಾಕೃತಿಕ ವಿಕೋಪಗಳಾದಾಗ ಅಗ್ನಿ ಶಾಮಕ ಸಿಬ್ಬಂದಿ, ವಿಪತ್ತು ನಿರ್ವಹಣಾ ತಂಡಕ್ಕಿಂತ ಮೊದಲು ನೆರವಿಗೆ ಧಾವಿಸಿದಾಗ ಅಪಾಯಕ್ಕೆ ಸಿಲುಕುವ ಸಾಧ್ಯತೆಯೂ ಹೆಚ್ಚಿರುತ್ತದೆ.

AAPADH MITRA, rescue team will reach Belgaum soon

ಸಂತ್ರಸ್ತರನ್ನು ಹೇಗೆ ಕಾಪಾಡಬೇಕು, ಒಂದು ವೇಳೆ ನೆರವಿಗೆ ಧಾವಿಸಿದಾಗ ತಾವೇ ಅಪಾಯದಲ್ಲಿ ಸಿಲುಕಿದರೆ ಹೇಗೆ ಪಾರಾಗಬೇಕು ಎಂಬುದುಸ್ಥಳೀಯರಿಗೆ ತಿಳಿದಿರುವುದಿಲ್ಲ, ಹಾಗಾಗಿ ಸ್ಥಳೀಯ ಆಸಕ್ತ ಸ್ವಯಂ ಸೇವಕರನ್ನು ಗುರುತಿಸಿ ಅವರಿಗೆ ವಿಪತ್ತು ನಿರ್ವಹಣೆ ತರಬೇತಿ ನೀಡಿದರೆ ಪ್ರವಾಹ , ನೆರೆ, ಅತಿವೃಷ್ಟಿ ಸಂದರ್ಭದಲ್ಲಿ ತಕ್ಷಣ ನೆರವಿಗೆ ಬರುತ್ತಾರೆ. ಇದರಿಂದ ಎಷ್ಟೋ ಪ್ರಾಣ ಹಾನಿ ತಡೆಯಬಹುದು ಎಂಬುದು ಉದ್ದೇಶವಾಗಿದೆ.

200 ಮಂದಿ ತಂಡ: ಬೆಳಗಾವಿ ಜಿಲ್ಲೆಯ ನಾನಾ ಭಾಗಗಳಿಂದ 100 ಮಂದಿ ಗೃಹ ರಕ್ಷ ದಳ ಸಿಬ್ಬಂದಿಯನ್ನು ಅಲ್ಲಿನ ಜಿಲ್ಲಾಧಿಕಾರಿಗಳು ತರಬೇತಿಗೆ ಕಳುಹಿಸಿದ್ದಾರೆ. ಬೆಂಗಳೂರಿನ ಗೃಹ ರಕ್ಷಕ, ಪೌರ ರಕ್ಷಣೆ ಹಾಗೂ ಅಗ್ನಿ ಶಾಮಕ ಅಕಾಡೆಮಿ ಸಹಯೋಗದಲ್ಲಿ ಮೊದಲ ಹಂತದಲ್ಲಿ 15 ದಿನ 100 ಮಂದಿಗೆ, 2 ನೇ ಹಂತದಲ್ಲಿ 100 ಮಂದಿಗೆ ತರಬೇತಿ ನೀಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+