ಜಯನಗರ ಮೆಟ್ರೋ ನಿಲ್ದಾಣಕ್ಕೆ ಎಚ್.ಎಸ್ ದೊರೆಸ್ವಾಮಿ ಹೆಸರನ್ನಿಡಲು ಆಗ್ರಹ
ಬೆಂಗಳೂರು, ಮೇ 29: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದಿ. ಎಚ್.ಎಸ್ ದೊರೆಸ್ವಾಮಿಯವರ ಪ್ರತಿಮೆ ಸ್ಥಾಪನೆ ಹಾಗೂ ಜಯನಗರ ಮೆಟ್ರೋ ನಿಲ್ದಾಣಕ್ಕೆ ಅವರ ಹೆಸರನ್ನಿಡಲು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆಗ್ರಹಿಸಿದ್ದಾರೆ.
ರಾಜ್ಯ ಎಚ್.ಎಸ್ ದೊರೆಸ್ವಾಮಿಯವರ ನಿಧನದಿಂದ ಶೋಕತಪ್ತವಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ದೇಶದ ಸೇವೆ ಮಾಡಿದ ಶ್ರೀಯುತರು ತಮ್ಮ ಜೀವಮಾನವಿಡೀ ಆಳುವ ಸರಕಾರಗಳನ್ನು ಎಚ್ಚರಿಸುತ್ತಾ, ನೊಂದವರ, ಬಡವರ ನೋವಿನ ದನಿಯಾಗುತ್ತಾ ಜೀವಿಸಿದ ಮಹಾನ್ ಚೇತನ. ಸರಕಾರ ಇವರ ಪ್ರತಿಮೆಯನ್ನು ಫ್ರೀಡಂ ಪಾರ್ಕ್ನಲ್ಲಿ ಸ್ಥಾಪಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸಿದೆ.
ಎಚ್.ಎಸ್ ದೊರೆಸ್ವಾಮಿಯವರು ಸ್ವಾತಂತ್ರ್ಯ ನಂತರವೂ ತಮ್ಮ ಹೋರಾಟವನ್ನು ನಿಲ್ಲಿಸದೆ ತಮ್ಮ ಕೊನೆಯ ಉಸಿರಿನ ತನಕ ಹೋರಾಟವನ್ನೇ ಬದುಕಾಗಿ ಮಾಡಿಕೊಂಡವರು. ರಾಜ್ಯದ ಆಡಳಿತ ಹಳಿತಪ್ಪಿದಾಗ ಅಧಿಕಾರದಲ್ಲಿ ಇದ್ದ ಎಲ್ಲಾ ಪಕ್ಷಗಳನ್ನೂ ಪ್ರಶ್ನಿಸಿದವರು. ಇವರ ಶತಮಾನದ ಬದುಕು ನಮಗೆಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ಪೃಥ್ವಿ ರೆಡ್ಡಿ ತಿಳಿಸಿದ್ದಾರೆ.

Recommended Video
ಇವರ ಜೀವನ ಮತ್ತು ಹೋರಾಟವನ್ನು ಜೀವಂತವಾಗಿಡಲು ಮತ್ತು ಮುಂದಿನ ಪೀಳಿಗೆಗೆ ಪ್ರೇರಣೆಯಾಗಿಸಲು ಸರಕಾರ ತಮ್ಮ ಹೋರಾಟದ ಬದುಕಿನ ಬಹುಕಾಲವನ್ನು ಕಳೆದ ಫ್ರೀಡಂ ಪಾರ್ಕ್ನಲ್ಲಿ ಅವರ ಪ್ರತಿಮೆ ಸ್ಥಾಪಿಸಬೇಕು. ಜಯನಗರ ಮೆಟ್ರೋ ನಿಲ್ದಾಣಕ್ಕೆ ಅವರ ಹೆಸರಿಡಬೇಕು. ಅಲ್ಲದೇ ರಾಜ್ಯದ ಸರ್ವೋನ್ನತ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು. ಈ ಮೂಲಕ ಶುಶಾಸನ, ಅಭಿವೃದ್ದಿಯ ಕನಸು ಹೊತ್ತು ಬದುಕಿದ, ಸ್ವಾತಂತ್ರ ಹೋರಾಟದ ಕೊಂಡಿಯಾಗಿದ್ದ ದೊರೆಸ್ವಾಮಿಯವರ ಹೆಸರನ್ನು ಅಜರಾಮರವಾಗಿಸಬೇಕು ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications