ಬಿಲ್ಡರ್ ಅಪಹರಿಸಿ ಹಣಗಳಿಸುವ ಸಂಚು ವಿಫಲ
ಬೆಂಗಳೂರು, ಜೂ. 24 : ಉದ್ಯಮಿಯೊಬ್ಬರನ್ನು ಅಪಹರಿಸಿದ ಏಳು ಜನರ ತಂಡ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊದಲು 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ದುಷ್ಕರ್ಮಿಗಳು ನಂತರ ಉದ್ಯಮಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳಿಂದ ಹಲ್ಲೆಗೊಳಗಾದವರನ್ನು ಕುಮಾರಸ್ವಾಮಿ ಲೇಔಟ್ನ ನಿವಾಸಿ ವಿನೋದ್ ರಾಮಸ್ವಾಮಿ ಎಂದು ಗುರುತಿಸಲಾಗಿದ್ದು, ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿಲ್ಡರ್ ಆಗಿರುವ ವಿನೋದ್ ಅವರನ್ನು ಸೋಮವಾರ ರಾತ್ರಿ ದುಷ್ಕರ್ಮಿಗಳು ಅಪಹರಣ ಮಾಡಿದ್ದರು.

ಘಟನೆ ವಿವರ : ಸೋಮವಾರ ರಾತ್ರಿ ವಿನೋದ್ ತಂಗಿಯನ್ನು ರೈಲು ನಿಲ್ದಾಣಕ್ಕೆ ತಮ್ಮ ಇನೋವಾ ಕಾರಿನಲ್ಲಿ ಬಿಟ್ಟು ಚಾಲಕನೊಂದಿಗೆ ವಾಪಸ್ ಬರುವಾಗ ಉತ್ತರಹಳ್ಳಿ ಬಳಿಯ ರೋಟಿಘರ್ ಹೊಟೇಲ್ ನಲ್ಲಿ ತಿಂಡಿ ಖರೀದಿಸಲು ಕಾರಿನಿಂದ ಇಳಿದಿದ್ದಾರೆ. [15 ಕಳ್ಳರ ಬಂಧನ - 76 ಲಕ್ಷ ಜಪ್ತಿ]
ಆಗ ಏಳು ಜನರ ತಂಡ ಕಾರಿಗೆ ಹತ್ತಿದ್ದು, ವಿನೋದ್ ಅವರನ್ನು ಅಪಹರಿಸಿದ್ದಾರೆ. ರಾತ್ರಿ ಪೂರ್ತಿ ನಗರದಲ್ಲಿ ಸಂಚರಿಸಿದ ಅಪಹರಣಕಾರರರು, ವಿನೋದ್ ಬಿಡುಗಡೆಗಾಗಿ 20 ಲಕ್ಷ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಮನೆಗೆ ಬಂದರೆ ಹಣ ಕೊಡುವುದಾಗಿ ವಿನೋದ್ ಮಂಗಳವಾರ ಮುಂಜಾನೆ 3.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್ ನ ಮನೆಯ ಬಳಿ ಬಂದಿದ್ದಾರೆ.
ವಿನೋದ್ ಮನೆಯ ಬಳಿ ಬರುತ್ತಿದ್ದಂತೆ ಅವರ ತಂದೆ ಮತ್ತು ಕುಟುಂಬ ವರ್ಗದವರು ಗಲಾಟೆ ಮಾಡಿ, ಸ್ಥಳೀಯರನ್ನು ಕರೆದಿದ್ದಾರೆ. ಇದರಿಂದ ಆತಂಕಗೊಂಡ ಅಪಹರಣಕಾರರು ವಿನೋದ್ ಬೆನ್ನು, ಹೊಟ್ಟೆ ಮುಂತಾದ ಸ್ಥಳಗಳಿಗೆ ಚಾಕುವಿನಿಂದ ಇರಿದು ವಿನೋದ್ ಕಾರು ಚಾಲಕನೊಂದಿಗೆ ಪರಾರಿಯಾಗಿದ್ದಾರೆ.
ಚಾಕು ಇರಿತದಿಂದ ಗಾಯಗೊಂಡಿದ್ದ ವಿನೋದ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಕುಟುಂಬದವರು, ಕುಮಾರಸ್ವಾಮಿ ಲೇಔಟ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ತಲಘಟ್ಟಪುರ ಬಳಿ ವಿನೋದ್ ಅವರ ಕಾರು ಮತ್ತು ಚಾಲಕ ರಾಜುವನ್ನು ಪತ್ತೆಹಚ್ಚಿದ್ದು, ಅವರ ವಿಚಾರಣೆ ನಡೆಸುತ್ತಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications