ಎಸ್ಎಸ್ಎಲ್ಸಿಯಲ್ಲಿ ಅವಳಿ ಸಹೋದರಿಯರ ಸಾಧನೆ
ಬೆಂಗಳೂರು, ಮೇ.13 : ಬೆಂಗಳೂರಿನ ವಿವಿಎಸ್ ಸರ್ದಾರ್ ಪಟೇಲ್ ಇಂಗ್ಲಿಷ್ ಪ್ರೌಢಶಾಲೆಯ ಅವಳಿ ಸಹೋದರಿಯರು ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ಮೂಲಕ ಪಾಲಕರಿಗೆ ಡಬಲ್ ಧಮಾಕಾ ನೀಡಿದ್ದಾರೆ.
ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಗಣೇಶ್ ಮತ್ತು ವೀಣಾ ಅವರ ಪುತ್ರಿಯರಾದ ಅಭಿಜ್ಞಾ ಮತ್ತು ಅನುಜ್ಞಾ ಎರಡು ಮತ್ತು ಮೂರನೇ ಸ್ಥಾನ ಪಡೆದಿದ್ದಾರೆ. ದಿನಕ್ಕೆ ಕೇವಲ 2-3ಗಂಟೆ ಓದುತ್ತಿದ್ದ ಇವರಿಗೆ ಅವಳಿಯಾಗಿದ್ದೆ ಓದಲು ಸಹಕಾರಿಯಾಗಿದೆ. ಒಟ್ಟಾಗಿ ಓದುತ್ತಿದ್ದ ಇವರು, ಭವಿಷ್ಯದಲ್ಲಿ ಇಂಜಿನಿಯರ್ ಆಗುವ ಕನಸು ಹೊಂದಿದ್ದಾರೆ. [ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ]

ಅನುಜ್ಞಾಗಿಂತ 14 ನಿಮಿಷ ಮೊದಲು ಜನಿಸಿರುವ ಅಭಿಜ್ಞಾ 621 ಅಂಕ ಗಳಿಸಿದ್ದರೆ, ತಂಗಿ ಅನುಜ್ಞಾ 620 ಅಂಕಗಳಿಸಿದ್ದಾಳೆ. ಇಬ್ಬರೂ ಒಟ್ಟಾಗಿ ಓದುತ್ತಿದ್ದೆವು. ಪಠ್ಯ ವಿಷಯ, ಅದರಲ್ಲಿನ ಗೊಂದಲಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು. ಅಂದಂದಿನ ಪಾಠಗಳನ್ನು ಅಂದೇ ಓದುತ್ತಿದ್ದೆವು. ಪೆಂಡಿಂಗ್ ಇರುವುದನ್ನು ವಾರದ ಕೊನೆಯಲ್ಲಿ ಮುಗಿಸಿಕೊಳ್ಳುತ್ತಿದ್ದೆವು ಎಂದು ಅವಳಿ ಸಹೋದರಿಯರು ತಮ್ಮ ಸಂತಸ ಹಂಚಿಕೊಂಡಿದ್ದಾರೆ. [ಮೈಸೂರಿನ ಹುಡುಗಿಗೆ ಆಪಲ್ ಕಂಪೆನಿ ಸೇರುವ ಆಸೆ!]
ತಂದೆ-ತಾಯಿ ಸಹ ನಮ್ಮ ಅಧ್ಯಯನದಲ್ಲಿನ ಗೊಂದಲಗಳನ್ನು ಕೇಳಿ ಪರಿಹರಿಸುತ್ತಿದ್ದರು. ಶಿಕ್ಷಕರ ಸಹಕಾರ, ತಂದೆ-ತಾಯಿ ಬೆಂಬಲದಿಂದ ನಾವು ಹೆಚ್ಚಿನ ಅಂಕಗಳನ್ನು ಗಳಿಸಲು ಸಾಧ್ಯವಾಯಿತು. ಪರೀಕ್ಷೆಯನ್ನು ಬರೆದ ನಂತರ 615ರ ಆಸುಪಾಸಿನ ಅಂಕಗಳನ್ನು ನಿರೀಕ್ಷಿಸಿದ್ದೆವು. ಅದಕ್ಕಿಂತ ಹೆಚ್ಚು ಅಂಕಗಳು ಬಂದಿರುವುದು ಸಂತಸತಂದಿದೆ ಎಂದರು.[SSLC ಫಲಿತಾಂಶದ ಹೈಲೈಟ್ಸ್]
ಅವಳಿ ಸಹೋದರಿಯರು ಪಿಯುಸಿಯಲ್ಲಿ ವಿಜ್ಞಾನವನ್ನು ಆಯ್ಕೆ ಮಾಡಿಕೊಂಡು ಇಂಜಿನಿಯರ್ ಆಗುವ ಕನಸನ್ನು ಹೊಂದಿದ್ದಾರೆ. ಈ ಅವಳಿ ಸಹೋದರಿಯರ ಮುಂದಿನ ಭವಿಷ್ಯಕ್ಕೆ ನಮ್ಮ ಕಡೆಯಿಂದ ಆಲ್ ದಿ ಬೆಸ್ಟ್.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications