ಅಭಿಷೇಕ್ ಅಂಬರೀಶ್ ಹಸೆಮಣೆ ಏರಲು ಮುಹೂರ್ತ ಫಿಕ್ಸ್; ವಿವಾಹಕ್ಕೆ ಬರುತ್ತಾರಾ ಪ್ರಧಾನಿ?
ಖ್ಯಾತ ಚಲನಚಿತ್ರ ನಟ ಕಂ ರಾಜಕಾರಣಿ ದಿ. ಅಂಬರೀಶ್ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ರ ವಿವಾಹ ದಿನಾಂಕ ನಿಗದಿ ಮಾಡಲಾಗಿದೆ. ಕಲ್ಯಾಣೋತ್ಸವಕ್ಕೆ ಈಗಾಗಲೇ ಅಂಬರೀಶ್ ಕುಟುಂಬದವರು ಎಲ್ಲ ತಯಾರಿ ನಡೆಸಿದ್ದಾರೆ.
ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ನಟ ಅಭಿಷೇಕ್ ಅಂಬರೀಶ್ ಮತ್ತು ಫ್ಯಷನ್ ಡಿಸೈನರ್ ಅವಿವಾ ಬಿದ್ದಪ್ಪ ಕೊನೆಗೂ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಮತ್ತೊಂದು ಸ್ಟಾರ್ ವಿವಾಹ ಸಮಾರಂಭಕ್ಕೆ ಸ್ಯಾಂಡಲ್ವುಡ್ ಕಾಯುತ್ತಿದೆ. ರಾಜಕೀಯ ಮತ್ತು ಚುನಾವಣಾ ಜಂಜಾಟದಲ್ಲಿದ್ದ ಸುಮಲತಾ ಅಂಬರೀಶ್ ಕೊಂಚ ಬಿಡುವು ಮಾಡಿಕೊಂಡು ಪುತ್ರನ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ.

ಇನ್ನು ಜೂನ್ 5ರಂದು ವಿವಾಹ ಕಾರ್ಯಕ್ರಮವಿರಲಿದೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಆವರಣದಲ್ಲಿ ಅಭಿಷೇಕ್ ಹಾಗೂ ಅವಿವಾ ವಿವಾಹ ಅದ್ಧೂರಿಯಾಗಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಅನಂತರ ಜೂನ್ 7ರಂದು ಮಂಡ್ಯದಲ್ಲಿ ಆರತಕ್ಷತೆ ಮತ್ತು ಬೀಗರ ಊಟ ಕಾರ್ಯಕ್ರಮ ಆಯೋಜನೆಯಾಗಿದ್ದು, ಈ ವೇಳೆ 10ರಿಂದ 15 ಸಾವಿರ ಅತಿಥಿಗಳು ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.

ಫ್ಯಾಷನ್ ಈವೆಂಟ್ವೊಂದರಲ್ಲಿ ಅಭಿಷೇಕ್ ಮತ್ತು ಅವಿವಾ ಪರಿಚಯವಾಗಿದ್ದರು. ಪರಿಚಯ ಸ್ನೇಹವಾಗಿ, ಸ್ನೇಹ ಪ್ರೀತಿಯಾಗಿ ಮೊಳಕೆಯೊಡೆಯಿತು. 3-4 ವರ್ಷಗಳ ಡೇಟಿಂಗ್ ನಂತರ ಕಳೆದ ವರ್ಷ ಈ ಜೋಡಿ ಎಂಗೇಜ್ಮೆಂಟ್ ಮಾಡಿಕೊಂಡಿತ್ತು. ಇದೀಗ ವಿವಾಹ ಮುದ್ರೆಯೊತ್ತಲು ರೆಡಿಯಾಗಿದ್ದಾರೆ.
ಅಭಿಷೇಕ್ ಅಂಬರೀಶ್ ಸದ್ಯ ಕನ್ನಡ ಚಲನಚಿತ್ರದಲ್ಲಿ ನಟನಾಗಿ ಗುರುತಿಸಿಕೊಂಡಿದ್ದರೆ, ಅವಿವಾ ಬಿದ್ದಪ್ಪ ಫ್ಯಾಷನ್ ಡಿಸೈನರ್ ಆಗಿದ್ದಾರೆ. ಅವಿವಾ ತಂದೆ ಪ್ರಸಾದ್ ಬಿದ್ದಪ್ಪ ಕೂಡ ಖ್ಯಾತ ಫ್ಯಾಷನ್ ಡಿಸೈನರ್ ಆಗಿ ಗುರುತಿಸಿಕೊಂಡಿದ್ದಾರೆ.

ಇನ್ನು ಅಭಿಷೇಕ್ ಮತ್ತು ಅವಿವಾ ವಿವಾಹ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಸಾಧ್ಯತೆ ಇದೆ. ಏಪ್ರಿಲ್ 5ರಂದು ಅಭಿಷೇಕ್ ಹಾಗೂ ತಾಯಿ ಸುಮಲತಾ ಅಂಬರೀಷ್ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿದ್ದರು. ಇದನ್ನು ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈಗಾಗಲೇ ಹಲವು ಗಣರನ್ನು ವಿವಾಹ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ಮಾಜಿ ಸಚಿವ, ನಟ ಅಂಬರೀಷ್ ಪುತ್ರ ಅಭಿಷೇಕ್ ವಿವಾಹ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಾಲಿ, ಮಾಜಿ ಸಚಿವರು, ಶಾಸಕರು, ಸಂಸದರು, ಕನ್ನಡ ಚಲನಚಿತ್ರ ರಂಗ ಸೇರಿದಂತೆ ದಕ್ಷಿಣ ಭಾರತದ ಹಲವು ನಟ-ನಟಿಯರು ಹಾಜರಾಗುವ ನಿರೀಕ್ಷೆ ಇದೆ.
ಅಭಿಷೇಕ್ ಮತ್ತು ಅವಿವಾ ಮದುವೆಗಾಗಿ ಆಭರಣ, ವಸ್ತ್ರಗಳ ಖರೀದಿಯೂ ಜೋರಾಗಿ ನಡೆದಿದೆ. ಸ್ವತಃ ಫ್ಯಾಷನ್ ಡಿಸೈನರ್ ಆಗಿರುವ ಅವಿವಾ ಬಿದ್ದಪ್ಪ ಅವರೇ ತಮ್ಮ ಹಾಗೂ ಅಭಿಷೇಕ್ರ ಉಡುಗೆಯನ್ನು ಡಿಸೈನ್ ಮಾಡುತ್ತಿದ್ದಾರೆ ಎನ್ನಲಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications