'ಅಮೃತಾನಂದಮಯಿ ಅವಮಾನಿಸುವ ಪುಸ್ತಕ ನಿಷೇಧಿಸಿ'
ಬೆಂಗಳೂರು, ಮಾ.10: ಲಕ್ಷಾಂತರ ಜನರ 'ಅಮ್ಮ' ಮಾತಾ ಅಮೃತಾನಂದಮಯಿಯವರು ಜಗತ್ತಿನಾದ್ಯಂತ ವಿವಿಧ ಭಾಷೆ, ಜಾತಿ, ಮತಗಳ ಅನುಯಾಯಿಗಳನ್ನು ಹೊಂದಿರುವ ಜಗದ್ವಂದ್ಯರು. ತಮ್ಮ ಅಮಿತ ವಾತ್ಸಲ್ಯ ಮತ್ತು ದೈವಿಕ ಸ್ಪರ್ಶದಿಂದ ಲಕ್ಷಾಂತರ ದುಃಖತಪ್ತ ಜೀವಗಳಿಗೆ ಸಾಂತ್ವನ ನೀಡುತ್ತಿರುವವರು. ಪೂಜ್ಯ ಮಾತಾ ಅಮೃತಾನಂದಮಯಿ ಅವರನ್ನು ಅವಮಾನಿಸುವ ಷಡ್ಯಂತ್ರವನ್ನು ಸಹಿಸುವಂತಿಲ್ಲ. ಅವರನ್ನು ಅವಮಾನಿಸುವ ಪುಸ್ತಕವನ್ನು ನಿಷೇಧಿಸಬೇಕು ಎಂದು ಆರೆಸ್ಸೆಸ್ ಸರಕಾರ್ಯವಾಹ ಸುರೇಶ್ (ಭಯ್ಯಾಜಿ) ಜೋಶಿ ಆಗ್ರಹಿಸಿದ್ದಾರೆ.
ಮನುಕುಲದ ದುಃಖ ದುಮ್ಮಾನಗಳನ್ನು ತಗ್ಗಿಸಲು ಶ್ರಮಿಸುತ್ತಿರುವ ಈ 'ಅಪ್ಪುಗೆಯ ಅಮ್ಮ'ನನ್ನು ವಿಶ್ವಸಂಸ್ಥೆ ಮತ್ತು ಅನೇಕ ದೇಶಗಳು ನೂರಾರು ಪ್ರಶಸ್ತಿಗಳೊಂದಿಗೆ ಗೌರವಿಸಿವೆ. ದೈವಿಕ ಪ್ರೇಮವೇ ಮೈವೆತ್ತಂತಿರುವ ಅಮ್ಮ ಪ್ರಪಂಚದ ಮೂಲೆ ಮೂಲೆಗಳಿಗೆ ಭೇಟಿ ಕೊಟ್ಟು ಗಂಟೆಗಟ್ಟಲೆ ಪ್ರವಚನ, ಭಕ್ತಜನರ ಪ್ರಶ್ನೆಗಳಿಗೆ ತಾಳ್ಮೆಯ ಉತ್ತರ, ಸಮಾಧಾನ ನೀಡುವುದರ ಜೊತೆಗೆ ಇಮೇಲ್ ಮತ್ತು ಪತ್ರಗಳಿಗೂ ದಣಿವಿಲ್ಲದೇ ಉತ್ತರಿಸುತ್ತಾರೆ. ಇವಿಷ್ಟೇ ಅಲ್ಲದೇ, ಲೆಕ್ಕವಿಲ್ಲದಷ್ಟು ಸೇವಾಕಾರ್ಯಗಳ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನಗಳೂ ಕೂಡ ಇವರ ದಿನಚರಿಯ ಅವಿಭಾಜ್ಯ ಭಾಗಗಳಾಗಿವೆ. ಇವರು ತಮ್ಮ ದಣಿವಿಲ್ಲದ ಸೇವಾಕಾರ್ಯದ ಮೂಲಕ ಪ್ರಪಂಚದಾದ್ಯಂತ ಸೇವೆಯ ಆಂದೋಲನಕ್ಕೆ ಪ್ರೇರಣೆಯಾಗಿದ್ದಾರೆ.

ಪಶ್ಚಿಮದ ಕೆಲವು ಧೂರ್ತ ಶಕ್ತಿಗಳು ಇಂತಹ ಶ್ರೇಷ್ಠ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿರುವುದು ನಿಜಕ್ಕೂ ಆಘಾತಕಾರಿಯಾಗಿದೆ. ಸನಾತನ ಧರ್ಮ ಮತ್ತು ಮನುಕುಲದ ವಿರೋಧಿಗಳು ಪ್ರಕಟಿಸಿರುವ 'ಹೋಲಿ ಹೆಲ್' ಎನ್ನುವ ಪುಸ್ತಕವು ಮಾತಾ ಅಮೃತಾನಂದಮಯಿಯವರ ಧಾರ್ಮಿಕ ಆಂದೋಲನವನ್ನು ಹಾಳುಗೆಡಹುವ ಒಂದು ಸಂಚು. ಬಹುಶಃ, ಈ ಆಂದೋಲನದ ಹೆಚ್ಚುತ್ತಿರುವ ಪ್ರಭಾವವನ್ನು ಸಹಿಸಲಾಗದ ಪಶ್ಚಿಮದ ಮತೀಯ ಮೂಲಭೂತವಾದಿಗಳ ಕುತಂತ್ರದ ಫಲವೇ ಈ ಪುಸ್ತಕ ಎಂದು ತೋರುತ್ತದೆ.[ಹೋಲಿ ಹೆಲ್, ಮೆಮಾಯಿರ್ ಆಫ್ ಫೈತ್]
ಪುಸ್ತಕ ಪ್ರಕಟಣೆಗೆ ಆಯ್ದುಕೊಂಡ ಸಂದರ್ಭ, ಅಮ್ಮ ಮತ್ತು ಅವರ ಕಾರ್ಯದ ಬಗ್ಗೆ ಅದರಲ್ಲಿ ಉಲ್ಲೇಖಿಸಿರುವ ಸಂಪೂರ್ಣ ಆಧಾರರಹಿತ ಆರೋಪಗಳು ಹಾಗೂ ಸತ್ಯಕ್ಕೆ ದೂರವಾದ ವಿಷಯಗಳು ಮತ್ತು ಕೆಲವು ಹಿಂದೂವಿರೋಧಿ ಮಾಧ್ಯಮಗಳು ಹಾಗೂ ಕೆಲವು ಬುದ್ಧಿಜೀವಿಗಳು ಪುಸ್ತಕದಲ್ಲಿನ ನಿಂದನಾತ್ಮಕ ವಿಷಯಗಳನ್ನು ತಕ್ಷಣವೇ ಪ್ರಚುರಪಡಿಸಲು ಶುರುವಿಟ್ಟುಕೊಂಡಿದ್ದನ್ನು ನೋಡಿದರೆ ಇದೊಂದು ದುರುದ್ದೇಶಪೂರಿತ ಅಂತರರಾಷ್ಟ್ರೀಯ ಷಡ್ಯಂತ್ರ ಎಂದು ಅನ್ನಿಸದಿರದು.
ಅಮ್ಮ ಅವರಂತಹ ಶ್ರೇಷ್ಠ ಸಂತರನ್ನು ಅವಮಾನಿಸುವ ಇಂತಹ ನಾಚಿಕೆಗೇಡಿನ ಪ್ರಯತ್ನಗಳನ್ನು ನಾವು ಪ್ರಬಲವಾಗಿ ಖಂಡಿಸುತ್ತೇವೆ. ಹಾಗೆಯೇ, ಸಂಪೂರ್ಣ ಹಿಂದೂ ಸಮಾಜ ಮತ್ತು ಜಗತ್ತಿನ ಎಲ್ಲ ಸಜ್ಜನರು ಈ ಷಡ್ಯಂತ್ರದ ಹಿಂದಿರುವ ಶಕ್ತಿಗಳನ್ನು ಮನುಕುಲದ ವೈರಿಗಳೆಂದು ಪರಿಗಣಿಸಿ ಬಹಿಷ್ಕರಿಸಬೇಕೆಂದು ಕರೆ ನೀಡುತ್ತೇವೆ.
ಅಮ್ಮ ಮತ್ತು ಅವರ ಉದಾತ್ತ ಕಾರ್ಯಗಳ ಬಗ್ಗೆ ನಮ್ಮ ಶ್ರದ್ಧಾಗೌರವಗಳನ್ನು ಒತ್ತಿಹೇಳುತ್ತಾ, ಅವರ ಮತ್ತು ಇತರ ಹಿಂದೂ ಸಾಧು-ಸಂತರ ಹಾಗೂ ಸಂಸ್ಥೆಗಳ ವಿರುದ್ಧದ ದುಷ್ಟ ಷಡ್ಯಂತ್ರದ ಸವಾಲುಗಳನ್ನು ಎದುರಿಸುವ ಎಲ್ಲ ಪ್ರಯತ್ನಗಳಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಪೂರ್ಣ ಬೆಂಬಲವನ್ನು ಪುನರುಚ್ಚರಿಸುತ್ತೇನೆ ಎಂದು ಸುರೇಶ್ ಭಯ್ಯಾಜಿ ಅವರು ಬೆಂಗಳೂರಿನಲ್ಲಿ ಸಂಪೂರ್ಣಗೊಂಡ ಮೂರು ದಿನಗಳ ರಾಷ್ಟ್ರೀಯ ಸ್ವಯಂ ಸೇವಕರ ಸಂಘ(ಆರೆಸ್ಸೆಸ್) ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications