ಸದನಕ್ಕೆ ಜನಪ್ರತಿನಿಧಿಗಳ ಗೈರು: ವಾಟಾಳ್ ಕತ್ತೆ ಮೆರವಣಿಗೆ
ಬೆಂಗಳೂರು, ಫೆಬ್ರವರಿ 11: ವಿಧಾನಸಭೆ ಮತ್ತು ವಿಧಾನಪರಿಷತ್ ಗೆ ಸಚಿವರು, ಶಾಸಕರು ಪ್ರತಿ ಅಧಿವೇಶನದಲ್ಲೂ ಗೈರಾಗುವುದನ್ನು ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕತ್ತೆ ಮೆರಣವಣಿಗೆ ನಡೆಸಿದರು.
ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಕತ್ತೆಗಳ ಮೆರವಣಿಗೆ ಮಾಡಿ ಮಾತನಾಡಿದ ಅವರು, ಸಚಿವರು, ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳಿಗೆ ಗೌರವ ಸ್ಥಾನವಿದೆ. ಜವಾಬ್ಧಾರಿ ಅರಿತು ಕೆಲಸ ನಿರ್ವಹಿಸದೇ ಶಾಸಕರು ಅಧಿವೇಶನಗಳಿಗೆ ಗೈರು ಹಾಜರಾಗುವುದು ಪ್ರಭಾಪ್ರಭುತ್ವಕ್ಕೆ ಮಾಡುವ ಅವಮಾನ ಎಂದು ಕಿಡಿಕಾರಿದರು.[ಮೈಸೂರಲ್ಲಿ ವಾಟಾಳ್ ಏಕಾಂಗಿ ಪ್ರತಿಭಟನೆ]

ಇನ್ನು ಸಂವಿಧಾನದಲ್ಲಿ ತಿದ್ದುಪಡಿ ತಂದು ಅಧಿವೇಸನದಲ್ಲಿ ಸಚಿವರು, ಶಾಸಕರು ಕಡ್ಡಾಯವಾಗಿ ಹಾಜರಾಗುವಂತೆ ಮಾಡಬೇಕು. ಸದನದ ಸಮಯವನ್ನು ಸದುಪಯೋಗ ಪಡಿಸಿಕೊಂಡು ಅರ್ಥಪೂರ್ಣ ಚರ್ಚೆ ನಡೆಸಿ ಉತ್ತಮ ನಿರ್ಣಯಗಳನ್ನು ಕೈಗೊಳ್ಳಬೇಕು ಎಂದರು.
ಅದರೆ ಅಧಿಕಾರ ಸಿಕ್ಕ ಜನಪ್ರತಿನಿಧಿಗಳು ಮೊದಲು ಸದನಗಳಲ್ಲಿ ಭಾಗವಹಿಸುವುದಿಲ್ಲ. ಇನ್ನೊಂದು ಭಾಗವಹಿಸಿದರೂ ಸದನದಲ್ಲಿ ದನಿ ಎತ್ತುವುದೇ ಇಲ್ಲ. ಹೀಗಿದ್ದಾಗ ತಮ್ಮ ಕ್ಷೇತ್ರದ ಜನರಿಗೆ ಶಾಸನಗಳನ್ನು ಹೇಗೆ ರೂಪಿಸಲು ಸಾಧ್ಯ ಎಂದು ಪ್ರಶ್ನೆ ಮಾಡಿದರು. ಅಲ್ಲದೆ ಗೈರು ಹಾಜರಾಗುವ ಜನಪ್ರತಿನಿಧಿಗಳ ಬಗ್ಗೆ ಜನರು ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications