ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೆರೋಲ್‌ಗಾಗಿ ಲಂಚ; ಬೆಂಗಳೂರು ಜೈಲು ಅಧೀಕ್ಷಕ ಬಂಧನ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 07 : ಪರಪ್ಪನ ಅಗ್ರಹಾರ ಜೈಲಿನಲ್ಲಿ ಹಣ ಕೊಟ್ಟರೆ ಸೌಲಭ್ಯಗಳು ಸಿಗುತ್ತವೆ ಎಂಬ ಆರೋಪವಿತ್ತು. ಕೈದಿಗೆ ಪೆರೋಲ್ ನೀಡಲು 10 ಸಾವಿರ ಲಂಚ ಕೇಳಿದ್ದ ಅಧಿಕಾರಿಯನ್ನು ಎಸಿಬಿ ಬಂಧಿಸಿದೆ.

ಕೇಂದ್ರ ಕಾರಾಗೃಹದ ಅಧೀಕ್ಷಕ ಜಯರಾಂ ಬಂಧಿತ ಅಧಿಕಾರಿ. ಅಪರಾಧಿಗೆ ಪೆರೋಲ್ ನೀಡಲು 10 ಸಾವಿರ ರೂ. ಲಂಚವನ್ನು ಕೇಳಿದ್ದರು. 5 ಸಾವಿರ ರೂ. ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಎಸಿಬಿ ದಾಳಿ; ಮಹಿಳಾ ಅಧಿಕಾರಿಗಳ ಬಳಿ 4.47 ಕೋಟಿ ಪತ್ತೆ ಎಸಿಬಿ ದಾಳಿ; ಮಹಿಳಾ ಅಧಿಕಾರಿಗಳ ಬಳಿ 4.47 ಕೋಟಿ ಪತ್ತೆ

ತುಮಕೂರು ಮೂಲದ ವ್ಯಕ್ತಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ. 14 ವರ್ಷಗಳ ಶಿಕ್ಷೆಯನ್ನು ನೀಡಿ ನ್ಯಾಯಾಲಯ ಆದೇಶ ಹೊರಡಿಸಿತ್ತು. ಪೆರೋಲ್‌ಗಾಗಿ ಕುಟುಂಬದವರು ಅರ್ಜಿ ಸಲ್ಲಿಸಿದ್ದರು. ಆದರೆ, ಜೈಲು ಅಧೀಕ್ಷಕ ಲಂಚ ನೀಡುವಂತೆ ಕೇಳಿದ್ದ.

ಬೆಂಗಳೂರು:ಲಂಚ ಪಡೆಯುವಾಗ ಎಸಿಬಿ ಕೈಗೆ ಸಿಕ್ಕಿಬಿದ್ದ ಮಹಿಳಾ ತಹಶೀಲ್ದಾರ್ ಬೆಂಗಳೂರು:ಲಂಚ ಪಡೆಯುವಾಗ ಎಸಿಬಿ ಕೈಗೆ ಸಿಕ್ಕಿಬಿದ್ದ ಮಹಿಳಾ ತಹಶೀಲ್ದಾರ್

ACB Arrested Jail Superintendent For Taking Bribe

ಹಣ ನೀಡಲು ಒಪ್ಪದ ಕೈದಿ ಪತ್ನಿಗೆ ಈ ವಿಚಾರವನ್ನು ತಿಳಿಸಿದ್ದ. ಆಕೆ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದಳು. ಜಯರಾಂ 5 ಸಾವಿರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ, ಹಣದ ಸಮೇತ ಬಂಧಿಸಿದ್ದಾರೆ.

ಮೈಸೂರು: ನಗರಪಾಲಿಕೆ ಸಹಾಯಕ ಆಯುಕ್ತರ ಮನೆ ಮೇಲೆ ಎಸಿಬಿ ದಾಳಿಮೈಸೂರು: ನಗರಪಾಲಿಕೆ ಸಹಾಯಕ ಆಯುಕ್ತರ ಮನೆ ಮೇಲೆ ಎಸಿಬಿ ದಾಳಿ

Recommended Video

DK Shivakumar ಮನೆಯ ಮೇಲೆ ದಾಳಿ ನಡೆಸಿದ ಹಿಂದಿನ ಅಸಲಿ ಕಾರಣ ಇದೇ | Oneindia Kannada

ತಹಶೀಲ್ದಾರ್ ಎಸಿಬಿ ಬಲೆಗೆ : 7 ಲಕ್ಷ ರೂ. ಲಂಚ ಪಡೆಯುವಾಗ ತಹಶೀಲ್ದಾರ್ ಎಸಿಬಿ ಬಲೆಗೆ ಬಿದ್ದ ಘಟನೆ ಬೆಂಗಳೂರಿನ ಕೆಜಿ ರಸ್ತೆಯಲ್ಲಿ ಮಂಗಳವಾರ ನಡೆದಿತ್ತು. ಅಜಂ ಪಾಷಾ ಅವರ ಬಳಿಕ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಮಹಿಳಾ ತಹಶೀಲ್ದಾರ್, 5 ಲಕ್ಷ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು.

English summary
ACB arrested Parappana Agraharaa jail superintendent for allegedly accepting bribe to grant parole for the Tumakuru based man.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X