Get Updates
Get notified of breaking news, exclusive insights, and must-see stories!

Breaking: ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು, ಮಾರ್ಚ್ 25: ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಯಲಹಂಕದಲ್ಲಿನ ಮನೆ, ದೊಡ್ಡಬಳ್ಳಾಪುರದಲ್ಲಿನ ಟ್ರಸ್ಟ್, ಕಚೇರಿ, ಶಾಲೆ ಹಾಗೂ ಸಂಬಂಧಿಕರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

42 ಜನ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ 5 ತಂಡಗಳಿಂದ ದಾಳಿ ಮಾಡಿದ್ದು, ಸರಕಾರಿ ಗೋಮಾಳ ಜಮೀನನ್ನು ಅಕ್ರಮವಾಗಿ ಪರಬಾರೆ ಮಾಡಿದ್ದ ಆರೋಪ ರಂಗನಾಥ್ ಅವರ ಮೇಲಿದೆ.

ACB Raid On KAS Officer K Ranganath House in Yalahanka

ಬೆಂಗಳೂರು ಉತ್ತರ ಎಸಿಯಾಗಿ 3 ತಿಂಗಳು ಕರ್ತವ್ಯ ನಿರ್ವಹಿಸಿದ್ದ ರಂಗನಾಥ್, ಪ್ರಸ್ತುತ ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮ ನಿಯಮಿತದಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸರ್ಕಾರದಿಂದಲೇ ದೂರು
ಸರ್ಕಾರದಿಂದಲೇ ದೂರು ದಾಖಲಾಗಿದ್ದರಿಂದ ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಮನೆ ಹಾಗೂ ಸಂಬಂಧಿಕರ ಮನೆ ಎಸಿಬಿ ದಾಳಿ ನಡೆಸಲಾಗಿದೆ. ವಿಧಾನಸಭೆ ಅಧಿವೇಶನದಲ್ಲಿ ಕೆ. ರಂಗನಾಥ್ ಅಕ್ರಮದ ಬಗ್ಗೆ ಚರ್ಚೆ ನಡೆದಿತ್ತು.

ಬೆಂಗಳೂರು ಉತ್ತರದಲ್ಲಿ ಕೆ. ರಂಗನಾಥ್ ಎಸಿಯಾಗಿದ್ದ ಸಂದರ್ಭದಲ್ಲಿ ಕೋಟಿ ಕೋಟಿ ವಂಚನೆ ನಡೆದಿತ್ತು. 40 ಎಕರೆ ಗೋಮಾಳದ ಜಾಗವನ್ನು ಪಟ್ಟಭದ್ರ ಹಿತಾಸಕ್ತಿಯಲ್ಲಿ ಖಾಸಗಿಯವರಿಗೆ ರಂಗನಾಥ್ ನೀಡಿದ್ದರು ಎಂಬ ಆರೋಪ ಇದೆ.

ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಜಾಗವನ್ನೇ ಪರಭಾರೆ ಮಾಡುವಂತೆ ಕೆ. ರಂಗನಾಥ್ ಮಾಡಿದ್ದರು. 2020ರಲ್ಲಿ ನಡೆದಿದ್ದ ಮಹಾ ಅಕ್ರಮವನ್ನು ಬಯಲಿಗೆಳೆಯಲು ಸರ್ಕಾರದಿಂದಲೇ ಮುನ್ನುಡಿ ಬರೆಯಲಾಗಿದೆ.

ಗೋಮಾಳದ ಅಕ್ರಮ ದಾಖಲೆ ಹಾಗೂ ರಂಗನಾಥ್‌ರ ಆಸ್ತಿಪಾಸ್ತಿಯ ವಿವರಗಳನ್ನು ಕಲೆಹಾಕಲು ಎಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ. ಯಲಹಂಕ, ನಾಗರಭಾವಿ ಸೇರಿದಂತೆ ಬೆಂಗಳೂರಿನ ಹಲವು ಕಡೆ ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಆಸ್ತಿಪಾಸ್ತಿ ಹುಡುಕಾಟದಲ್ಲಿ ಎಸಿಬಿ ಅಧಿಕಾರಿಗಳು ಬ್ಯುಸಿಯಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+