ಬೀದಿ ಜಗಳಕ್ಕೆ ಆಕ್ಸೆಂಚರ್ ಕಂಪನಿ ಟೆಕ್ಕಿ ಕೊಲೆ, ಆರೋಪಿ ಪೊಲೀಸರ ಬಲೆಗೆ
ಬೆಂಗಳೂರು, ಅಕ್ಟೋಬರ್ 11: ಆಕ್ಸೆಂಚರ್ ಕಂಪೆನಿಯ ಸಾಫ್ಟ್ ವೇರ್ ಉದ್ಯೋಗಿ, ಇಪ್ಪತ್ತೆಂಟು ವರ್ಷದ ಪ್ರಣಯ್ ಮಿಶ್ರಾ ಕೊಲೆಗೆ ಬೀದಿ ಜಗಳ ಕಾರಣ ಎಂದು ತಿಳಿದುಬಂದಿದೆ. ಕೊಲೆ ಆರೋಪಿಗಳ ಪೈಕಿ ಒಬ್ಬನಾದ ಕಾರ್ತೀಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ವೇಳೆ ಕಾರ್ತೀಕ್ ಮೇಲೆ ಗುಂಡು ಹಾರಿಸಿದ್ದು, ಆತನಿಗೆ ಗಾಯಗಳಾಗಿವೆ.
ಈ ಸಂದರ್ಭದಲ್ಲಿ ಪೊಲೀಸರಿಗೂ ಗಾಯಗಳಾಗಿವೆ. ಪ್ರಣಯ್ ರಾಯ್ ನನ್ನು ಸೋಮವಾರ ಹಲವು ಬಾರಿ ಇರಿದು ಕೊಲೆ ಮಾಡಲಾಗಿತ್ತು. ಕಾರ್ತೀಕ್ ಹಾಗೂ ಆತನ ಸ್ನೇಹಿತರಿದ್ದ ಬೈಕ್ ಗೆ ಪ್ರಣಯ್ ಬೈಕ್ ತಾಗಿತ್ತು. ಆ ನಂತರ ಹಿಂಬಾಲಿಸಿಕೊಂಡು ಬಂದು, ಪ್ರಣಯ್ ನನ್ನು ಇರಿದು ಕೊಂದಿದ್ದರು.

ಕಾರ್ತೀಕ್ ಗೆ ಅಪರಾಧ ಹಿನ್ನೆಲೆಯಿದೆ. ಮಂಗಳವಾರ ಕಾರ್ತೀಕ್ ನನ್ನು ಬೆನ್ನಟ್ಟಿದ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಇಬ್ಬರು ಪೊಲೀಸರಿಗೂ ಸಣ್ಣ-ಪುಟ್ಟ ಗಾಯಗಳಾಗಿವೆ. ಸದ್ಯಕ್ಕೆ ಕಾರ್ತೀಕ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಆತನ ಸಹಚರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಒಡಿಶಾ ಮೂಲದ ಪ್ರಣಯ್ ಮಿಶ್ರಾ ಭಾನುವಾರ ಪಾರ್ಟಿ ಮುಗಿಸಿ ಮನೆಗೆ ಹಿಂತಿರುಗಿದ ನಂತರ ಗೆಳತಿಯೊಬ್ಬರನ್ನು ಭೇಟಿಯಾಗಲು ತೆರಳಿದ್ದರು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications