ಬೆಂಗಳೂರು: ಕಾರು-ಬಿಎಂಟಿಸಿ ನಡುವೆ ಡಿಕ್ಕಿ 3 ಸಾವು, ಇಬ್ಬರು ಗಂಭೀರ
ಬೆಂಗಳೂರು, ಸೆಪ್ಟೆಂಬರ್ 12: ನಗರದ ಮಾರುತ್ ಹಳ್ಳಿ ಬಳಿ ಬಿಎಂಟಿಸಿ ಬಸ್ಸು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ಜನ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಮಾರುತಹಳ್ಳಿ ಸಮೀಪದ ರಿಂಗ್ ರೋಡ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಕಿಲ್ಲರ್ ಬಿಎಂಟಿಸಿ ಅನ್ವರ್ಥದಂತೆ ಬಿಎಂಟಿಸಿ ನಗರದಲ್ಲಿ ಇಂದು ಮತ್ತೆ ಮೂರು ಜೀವಗಳ ಬಲಿ ಪಡೆದಿದೆ. ಸ್ಥಳದಲ್ಲಿದ್ದ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ..
ಎಚ್ಎಎಲ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಎಚ್ಎಎಲ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಈ ಪ್ರದೇಶದಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಎಚ್ಎಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.












Click it and Unblock the Notifications