ಶೋಭಾ ಕರಂದ್ಲಾಜೆ ಪ್ರಚಾರದ ವೇಳೆ ಅಪಘಾತ: ಓರ್ವ ಸಾವು!
ಬೆಂಗಳೂರು ಏಪ್ರಿಲ್ 8: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರದ ವೇಳೆ ಅಪಘಾತವಾಗಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.
60 ವರ್ಷದ ಪ್ರಕಾಶ್ ಎಂಬುವವರು ಸಾವನ್ನಪ್ಪಿದ ದುರ್ದೈವಿ. ಇಂದು ಶೋಭಾ ಕರಂದ್ಲಾಜೆ ಪ್ರಚಾರದಲ್ಲಿ ಈ ಅಪಘಾತ ನಡೆದಿದೆ. ಅಪಘಾತ ನಂತರ ಪ್ರಕಾಶ್ ಅವರನ್ನು ಕೆಆರ್ ಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ವಿರುದ್ಧ ಶೋಭಾ ಕರಂದ್ಲಾಜೆ ಸ್ಪರ್ಧಿಸುತ್ತಿದ್ದಾರೆ. ಶೋಭಾ ಅವರು ಇಂದು ಕೆಆರ್ ಪುರದಲ್ಲಿ ಮತಯಾಚನೆ ನಡೆಸಿದರು. ಬೆಳಗ್ಗೆ ಚುನಾವಣಾ ಪ್ರಚಾರದ ವೇಳೆ ಹಲವಾರು ಮುಖಂಡರು ಈ ಪ್ರಚಾರದಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಕಾರೊಂದರ ಚಾಲಕ ಏಕಾಏಕಿ ಕಾರ್ ಡೋರ್ ಓಪನ್ ಮಾಡಿದ್ದಾರೆ. ಹಿಂದೆಯಿಂದ ಸ್ಕೂಟಿಯಲ್ಲಿ ಬಂದ ಪ್ರಕಾಶ್ ಅವರು ಡೋರ್ ತಗುಲಿ ನೆಲಕ್ಕೆ ಬಿದ್ದಿದ್ದಾರೆ.
ಫಾರ್ಚುನ ಕಾರು ಡೋರ್ ಓಪನ್ ಮಾಡಿದ ತಕ್ಷಣ ಸ್ಕೂಟಿಯಲ್ಲಿದ್ದ ಪ್ರಕಾಶ್ ಕೆಳಗೆ ಬಿದ್ದಿದ್ದಾರೆ. ಇದೇ ವೇಳೆ ಬಸ್ವೊಂದು ಪ್ರಕಾಶ್ ಅವರ ಮೇಲೆ ಹರಿದಿದೆ. ತಕ್ಷಣ ಅವರನ್ನು ಕೆಆರ್ ಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಇನ್ನೂ ಶೋಭಾ ಕರಂದ್ಲಾಜೆ ಅವರು ಘಟನೆಯ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ನೀಡಿದರು. ಜೊತೆಗೆ ಪಕ್ಷದಿಂದ ಕುಟುಂಬಕ್ಕೆ ಪರಿಹಾರ ನೀಡುತ್ತೇವೆಂದು ಭರವಸೆ ನೀಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಮಗೆ ತುಂಬಾ ದು:ಖ ಆಗಿದೆ. ಪ್ರಕಾಶ್ ಅವರು ನಮ್ಮ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಅವರ ನಿಧನ ನಮಗೆ ನೋವು ತಂದಿದೆ. ಅವರ ಪರವಾಗಿ ಅವರ ಕುಟುಂಬದ ಪರವಾಗಿ ನಮ್ಮ ಪಕ್ಷ ಇದೆ. ಕೆಆರ್ ಪುರನ ಗಣೇಶ ದೇಗುಲದ ಬಳಿ ಈ ಘಟನೆ ನಡೆದಿದೆ. ಅವರ ಕುಟುಂಬದೊಂದಿಗೆ ನನ್ನ ಪಕ್ಷ ನಿಂತುಕೊಳ್ಳುತ್ತದೆ. ಅವರಿಗೆ ಪರಿಹಾರವನ್ನು ನಮ್ಮ ಪಕ್ಷ ನೀಡಲಿದೆ' ಎಂದರು.
ಸದ್ಯ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬರಬೇಕಾಗಿದೆ. ಪೊಲೀಸರು ವಿಚಾರಣೆ ನಡೆಸಿದ್ದಾರೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications