ಹೊಸೂರು-ಸೂಳಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಮೂವರ ಸಾವು
ಬೆಂಗಳೂರು, ಏ.6: ಯುಗಾದಿಯು ಎಲ್ಲಾ ಜೀವನದಲ್ಲಿ ಖುಷಿ ತರಲಿ ಎಂದು ಪ್ರಾರ್ಥಿಸುವ ಹೊತ್ತಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಹೊಸೂರು-ಸೂಳಗಿರಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಸೂಳಗಿರಿ ಕಡೆಯಿಂದ ಹೊಸೂರು ಕಡೆಗೆ ಅತಿ ವೇಗವಾಗಿ ಕಾರು ಬರುತ್ತಿತ್ತು.ಹಬ್ಬಕ್ಕೆಂದು ತಮ್ಮ ಊರಿಗೆ ಕಾರಿನಲ್ಲಿದ್ದವರು ಹೋಗುವಾಗ ಈ ಅಪಘಾತ ಸಂಭವಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಏಕಾಏಕಿ ಹೆದ್ದಾರಿಯ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತಕ್ಕಿಡಾಗಿದೆ.
ತಂದೆಯ ಕಣ್ಣುದುರೇ ಹೆಣ್ಣುಮಕ್ಕಳಿಬ್ಬರ ಮೇಲೆ ಹರಿಯಿತು ಟ್ರಕ್
ಕಾರು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಗಳು ಆ ರಸ್ತೆಯಲ್ಲಿ ಹೊಸದೇನಲ್ಲ, ಆದರೆ ಎಲ್ಲೆಂದರಲ್ಲಿ ಲಾರಿಗಳನ್ನು ನಿಲ್ಲಿಸುವುದು, ಮನಸ್ಸಿಗೆ ಬಂದಂತೆ ಲಾರಿಯನ್ನು ಚಲಾಯಿಸುವುದರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.