ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸೂರು-ಸೂಳಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಮೂವರ ಸಾವು

|
Google Oneindia Kannada News

ಬೆಂಗಳೂರು, ಏ.6: ಯುಗಾದಿಯು ಎಲ್ಲಾ ಜೀವನದಲ್ಲಿ ಖುಷಿ ತರಲಿ ಎಂದು ಪ್ರಾರ್ಥಿಸುವ ಹೊತ್ತಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಹೊಸೂರು-ಸೂಳಗಿರಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಸೂಳಗಿರಿ ಕಡೆಯಿಂದ ಹೊಸೂರು ಕಡೆಗೆ ಅತಿ ವೇಗವಾಗಿ ಕಾರು ಬರುತ್ತಿತ್ತು.ಹಬ್ಬಕ್ಕೆಂದು ತಮ್ಮ ಊರಿಗೆ ಕಾರಿನಲ್ಲಿದ್ದವರು ಹೋಗುವಾಗ ಈ ಅಪಘಾತ ಸಂಭವಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಏಕಾಏಕಿ ಹೆದ್ದಾರಿಯ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತಕ್ಕಿಡಾಗಿದೆ.

 ತಂದೆಯ ಕಣ್ಣುದುರೇ ಹೆಣ್ಣುಮಕ್ಕಳಿಬ್ಬರ ಮೇಲೆ ಹರಿಯಿತು ಟ್ರಕ್ ತಂದೆಯ ಕಣ್ಣುದುರೇ ಹೆಣ್ಣುಮಕ್ಕಳಿಬ್ಬರ ಮೇಲೆ ಹರಿಯಿತು ಟ್ರಕ್

accident in Hosur sulagiri national highway 3 dies

ಕಾರು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಗಳು ಆ ರಸ್ತೆಯಲ್ಲಿ ಹೊಸದೇನಲ್ಲ, ಆದರೆ ಎಲ್ಲೆಂದರಲ್ಲಿ ಲಾರಿಗಳನ್ನು ನಿಲ್ಲಿಸುವುದು, ಮನಸ್ಸಿಗೆ ಬಂದಂತೆ ಲಾರಿಯನ್ನು ಚಲಾಯಿಸುವುದರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Three people died in a road accident in Hosur sulagiri national highway on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X