ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಾಯುಕ್ತರಿಗೆ ಚಾಕು ಇರಿದಿದ್ದ ಆರೋಪಿಗೆ ಮಂಪರು ಪರೀಕ್ಷೆ

By Manjunatha
|
Google Oneindia Kannada News

ಬೆಂಗಳೂರು, ಜುಲೈ 11: ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರಿಗೆ ಚೂರಿ ಇರಿದಿದ್ದ ಆರೋಪಿ ತೇಜರಾಜ ಶರ್ಮನನ್ನು ಮಂಪರು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಆರೋಪಿ ತೇಜರಾಜ ಶರ್ಮ ಮಾರ್ಚ್‌ 7ರಂದು ಲೋಕಾಯುಕ್ತ ಕಚೇರಿಯಲ್ಲಿಯೇ ನ್ಯಾಯಮೂರ್ತಿ ವೀಶ್ವನಾಥ ಶೆಟ್ಟಿ ಅವರಿಗೆ ಚಾಕು ಇರಿದಿದ್ದ. ವಿಶ್ವನಾಥ ಶೆಟ್ಟಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾದರು.

ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ: ದೋಷಾರೋಪ ಸಲ್ಲಿಕೆಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ: ದೋಷಾರೋಪ ಸಲ್ಲಿಕೆ

ಆರೋಪಿಯನ್ನು ಕೂಡಲೇ ವಶಕ್ಕೆ ಪಡೆದಿದ್ದ ಪೊಲೀಸರು, ಕೆಲವು ದಿನಗಳ ಹಿಂದೆಯಷ್ಟೆ ನ್ಯಾಯಾಲಯಕ್ಕೆ 60 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಕ್ಕಾಗಿ ತಾನು ಈ ಕೃತ್ಯ ಎಸಗಿದ್ದಾಗಿ ಆರೋಪಿ ಹೇಳಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿತ್ತು.

Accused who stabbed Lokayuktha judge will under go narco test

ದೋಷರೋಪ ಪಟ್ಟಿಗೆ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರು ಆರೋಪಿ ಹೇಳಿದ್ದನ್ನಷ್ಟೆ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆತನ ಹಿಂದೆ ಇರಬಹುದಾದ ಕಾಣದ ಕೈಗಳ ಬಗ್ಗೆ ತನಿಖೆ ಮಾಡಿಲ್ಲ ಎಂದಿದ್ದರು.

ಇದರಿಂದಾಗಿ ಹೆಚ್ಚಿನ ತನಿಖೆ ನಡೆಸಲೆಂದು ಆರೋಪಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ನ್ಯಾಯಾಲಯದಿಂದ ಅನುಮತಿ ಪಡೆದಿದ್ದು, ಆತನನ್ನು ಗುಜರಾತ್‌ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕೊಂಡೊಯ್ಯಲಾಗಿದೆ.

English summary
Accused Tejaraj Sharma who stabbed Lokayuktha judge P.Vishwanath Shetty is taken to Gujarat to under go narco test. He stabbed Lokayuktha judge P.Vishwanath Shetty on March 07.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X