ಏಳು ತಿಂಗಳ ಬಳಿಕ ಚಿತ್ರಮಂದಿರದಲ್ಲಿ ಕನ್ನಡದ ಮೊದಲ ಸಿನಿಮಾ ಬಿಡುಗಡೆ
ಬೆಂಗಳೂರು, ನವೆಂಬರ್ 20: ಲಾಕ್ಡೌನ್ ಆರಂಭಕ್ಕೂ ಮುನ್ನ ಬಂದ್ ಆಗಿದ್ದ ಚಿತ್ರಮಂದಿರಗಳು ಕೊನೆಗೂ ಬಾಗಿಲು ತೆರೆಯುತ್ತಿವೆ. ಸುದೀರ್ಘ ಸಮಯದಿಂದ ಚಿತ್ರಮಂದಿರದಲ್ಲಿ ಸಿನಿಮಾ ನೋಡಲಾಗದೆ, ಒಟಿಟಿಯಂತಹ ವೇದಿಕೆಗಳನ್ನು ಅವಲಂಬಿಸಿದ್ದ ಚಿತ್ರ ಪ್ರೇಮಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ. ಕನ್ನಡದ 'ಆಕ್ಟ್-1978' ಚಿತ್ರ ಶುಕ್ರವಾರದಿಂದ ರಾಜ್ಯಾದ್ಯಂತ ಪ್ರದರ್ಶನ ಕಾಣುತ್ತಿದೆ. ಲಾಕ್ಡೌನ್ ಬಳಿಕ ಬಿಡುಗಡೆಯಾಗುತ್ತಿರುವ ಮೊದಲ ಹೊಸ ಚಿತ್ರ ಇದು.
Recommended Video
ಮಲ್ಟಿಪ್ಲೆಕ್ಸ್ಗಳು ಸೇರಿದಂತೆ ಸುಮಾರು 50 ಚಿತ್ರಮಂದಿರಗಳಲ್ಲಿ 'ಆಕ್ಟ್ 1978' ಚಿತ್ರ ತೆರೆಕಾಣುತ್ತಿದೆ. 'ಹರಿವು', 'ನಾತಿಚರಾಮಿ'ಯಂತಹ ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರಗಳನ್ನು ನೀಡಿರುವ ನಿರ್ದೇಶಕ ಮಂಸೋರೆ ಅವರ ಈ ಚಿತ್ರ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವೀರೇಶ್ ಚಿತ್ರಮಂದಿರದಲ್ಲಿ ಗುರುವಾರ ಪ್ರೀಮಿಯರ್ ಪ್ರದರ್ಶನ ಕಂಡಿದೆ. ಚಿತ್ರರಂಗದ ಅನೇಕ ಗಣ್ಯರು ಚಿತ್ರಮಂದಿರಕ್ಕೆ ಆಗಮಿಸಿ ಸಿನಿಮಾ ವೀಕ್ಷಿಸಿದ್ದಾರೆ.

ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಭಾರತದಲ್ಲಿ ಆರಂಭವಾಗುತ್ತಿದ್ದಂತೆಯೇ ಮೊದಲು ಮುಚ್ಚಿದ್ದು ಚಿತ್ರಮಂದಿರಗಳನ್ನು. ಹೀಗಾಗಿ ಅಂದಿನಿಂದ ಮನರಂಜನಾ ಜಗತ್ತು ಅಕ್ಷರಶಃ ಸ್ತಬ್ಧಗೊಂಡಿತ್ತು. ಚಿತ್ರಮಂದಿರಗಳಲ್ಲಿ ಸೋಂಕು ಹರಡಲು ಹೆಚ್ಚಿನ ಸಂಭವ ಇರುವುದರಿಂದ ಅವುಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿರಲಿಲ್ಲ.
ಈಗ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಚಿತ್ರಮಂದಿರಗಳನ್ನುತೆರೆಯಲಾಗಿದೆ. ಲಾಕ್ಡೌನ್ಗೂ ಮುನ್ನ ಚಿತ್ರಮಂದಿರಗಳು ಮುಚ್ಚುವಾಗ ಓಡುತ್ತಿದ್ದ ಸಿನಿಮಾಗಳನ್ನು ಮೊದಲು ಬಿಡುಗಡೆ ಮಾಡಲು ಅವಕಾಶ ನೀಡಲಾಗಿತ್ತು. ಆದರೆ ಇದುವರೆಗೂ ಯಾವುದೇ ಹೊಸ ಸಿನಿಮಾಗಳು ಬಿಡುಗಡೆಯಾಗಿರಲಿಲ್ಲ.

'ಆಕ್ಟ್ 1978' ಚಿತ್ರದ ಮೂಲಕ ಕನ್ನಡದಲ್ಲಿ ಸಿನಿಮಾ ಮನರಂಜನೆ ಲೋಕ ಮತ್ತೆ ಚಿಗುರಿದೆ. ಚಿತ್ರಮಂದಿರದಲ್ಲಿ ಒಂದು ಸೀಟಿನ ಅಂತರ, ಮಾಸ್ಕ್ ಧರಿಸುವಿಕೆ, ಸ್ಯಾನಿಸೈಸರ್ ಬಳಕೆ, ಥರ್ಮಲ್ ಸ್ಕ್ರೀನಿಂಗ್ ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವಿಕೆಯ ಕಡ್ಡಾಯ ನಿಯಮಗಳ ಪಾಲನೆಯ ಜತೆಯಲ್ಲಿ ಸಿನಿಮಾವನ್ನು ಅನಂದಿಸಬಹುದು.
ಯಜ್ಞಾ ಶೆಟ್ಟಿ, ಬಿ.ಸುರೇಶ್, ಪ್ರಮೋದ್ ಶೆಟ್ಟಿ, ಶ್ರುತಿ, ಅಚ್ಯುತ್ ಕುಮಾರ್, ಸಂಚಾರಿ ವಿಜಯ್, ಅವಿನಾಶ್ ಮುಂತಾದವರು 'ಆಕ್ಟ್-1978' ಚಿತ್ರದ ತಾರಾಬಳಗದಲ್ಲಿದ್ದಾರೆ.
-
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಪ್ರೇಮ್ ಬರೆದ ಹಾಡು ಅಕ್ಷರ ರೂಪದ ಬೆತ್ತಲೆ ಸಿನೆಮಾ ತೋರಿಸಿದಂತಿದೆ: ಅರುಣ್ ಜೋಳದಕೂಡ್ಲಿಗಿ ಬರಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ











Click it and Unblock the Notifications