Actor Darshan: ಕುರಿ ಮೇಯಿಸುವವರಿಗೆ ₹50,00,000 ಪರಿಹಾರ, ಹೇಗೆ? - ಮಾಹಿತಿ ತಿಳಿಯಿರಿ
ಸಾಮಾನ್ಯವಾಗಿ ಕುರಿ ಕಾಯುವವರಿಗೆ ಸರ್ಕಾರದಿಂದ ಹಲವು ಸೌಲಭ್ಯಗಳು ಬರುತ್ತವೆ. ಆದರೆ ಈ ವಿಚಾರ ಬಹುತೇಕ ಮಂದಿಗೆ ಗೊತ್ತೇ ಇರುವುದಿಲ್ಲ. ಆದರೆ ಇದೀಗ ಈ ಉಪಯುಕ್ತ ವಿಚಾರವನ್ನು ಒಬ್ಬ ಕುರಿಗಾಯಿಗೆ ನಟ ದರ್ಶನ್ ಬಿಡಿಸಿ ಹೇಳಿದಾಗಲೇ ಗೊತ್ತಾಗಿದೆ ಎನ್ನುವ ಸಂಗತಿಯೊಂದು ಇದೀಗ ಹೊರಬಿದ್ದಿದೆ. ಆ ಮಾಹಿತಿ ಏನು ಎನ್ನುವುದನ್ನು ಇಲ್ಲಿ ತಿಳಿಯಿರಿ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ ಡಿಸೆಂಬರ್ 29ರಂದು ಬಿಡುಗಡೆಗೆ ಸಜ್ಜಾಗಿದೆ. ಇನ್ನು ಈ ಸಿನಿಮಾ ಪ್ರಚಾರವಂತೂ ಅದ್ಧೂರಿಯಾಗಿ ನಡೆಯುತ್ತಿದ್ದು, ಈ ಸಿನಿಮಾ ವೀಕ್ಷಣೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕುಮಾರ್ ಗೋವಿಂದ್ ದರ್ಶನ್ ಸರಳತೆ ಒಂದು ಉದಾಹರಣೆ ನೀಡಿದ್ದಾರೆ.

ನಟ ದರ್ಶನ್ಗೆ ಜೋಡಿಯಾಗಿ ಸ್ಯಾಂಡಲ್ವುಡ್ ಕನಸಿನ ರಾಣಿ ಅಂತೆಲೇ ಹೆಸರಾಗಿರುವ ಮಾಲಾಶ್ರೀ ಅವರ ಪುತ್ರಿ ಆರಾಧನಾ ನಟಿಸಿದ್ದಾರೆ. ಡಿಸೆಂಬರ್ 29ರಂದು ಸಿನಿಮಾ ತೆರೆಗೆ ಅಪ್ಪಳಿಸಿದ್ದು, ಈಗಾಗಲೇ ಟ್ರೈಲರ್, ಹಾಡು ವೀಕ್ಷಿಸಿದ ಅಭಿಮಾನಿಗಳು ಸಿನಿಮಾ ನೋಡಲು ತುದಿಗಾಲಲ್ಲಿ ಕಾಯುತ್ತುದ್ದಾರೆ. ಇನ್ನು ಕಾಟೇರ ಸಿನಿಮಾ ಸಂದರ್ಶನವೊಂದರಲ್ಲಿ ಮಾತಾಡಿದ ನಟ ಕುಮಾರ್ ಗೋವಿಂದ್ ದರ್ಶನ್ ಸರಳತೆಯನ್ನು ಕೊಂಡಾಡಿದ್ದಾರೆ. ಹಾಗಾದರೆ ಅಅವರು ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಕಾಟೇರ ಸಿನಿಮಾದಲ್ಲಿ ನಟ ಕುಮಾರ್ ಗೋವಿಂದ್ ಕೂಡ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಾಟೇರ ಸಿನಿಮಾ ಶೂಟಿಂಗ್ ವೇಳೆ ನಡೆದ ಘಟನೆ ಬಗ್ಗೆ ವಿವರಿಸಿದ್ದಾರೆ. ಕಾಟೇರ ಚಿತ್ರದ ಕೊನೆ ಭಾಗವನ್ನು "ಪಾಂಡವಪುರ"ದಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನು ಶೂಟಿಂಗ್ ವೇಳೆ ಕುರಿ ಕಾಯುವವರಿಗೆ ದರ್ಶನ್ ಸಹಾಯ ಮಾಡಿದ ಬಗ್ಗೆ ಕುಮಾರ್ ಗೋವಿಂದ್ ತಿಳಿಸಿದದ್ದಾರೆ.
ಶೂಟಿಂಗ್ ವೇಳೆ ಒಬ್ಬರು 250 ಕುರಿಗಳನ್ನು ಮೇಯಿಸಿಕೊಂಡು ಬಂದರು. ಇದನ್ನು ನೋಡಿದ ನಾನು ದರ್ಶನ್ ನೀವು ಇದೇ ರೀತಿಯ ಕುರಿಗಳನ್ನು ಸಾಕಿದ್ದೀರಾ ಎಂದು ಕೇಳಿದ್ದರಂತೆ. ಇಲ್ಲ ಅಣ್ಣ ನಂದು ಬೇರೆ ತಳಿಯ ಕುರಿಗಳು ಎಂದಿದ್ದಾರೆ. ತಕ್ಷಣ ಕುರಿ ಕಾಯುವವನನ್ನು ದರ್ಶನ್ ಕರೆದಿದ್ದಾರೆ.
ನಂತರ ಇಷ್ಟೊಂದು ಕುರಿಗಳನ್ನು ಇಟ್ಟುಕೊಂಡಿದ್ದೀರಾ ಏನೆಲ್ಲಾ ಸರ್ಕಾರದಿಂದ ಬರುವ ಸೌಲಭ್ಯವನ್ನು ಪಡೆದಿದ್ದೀರಾ ಎಂದು ಕೇಳಿದರು. ಆಗ ನಟ ದರ್ಶನ್ ಅವರ ಪ್ರಶ್ನೆಗೆ ಉತ್ತರಿಸಿದ ಕುರಿಕಾಯುವ ಹುಡುಗ ಅಣ್ಣ ನನಗೆ ಏನೂ ಗೊತ್ತಿಲ್ಲ ಎಂದರು. ಆಗ ದರ್ಶನ್ ಏನ್ ಅಣ್ಣ ನೀವು ಇಷ್ಟು ಕುರಿ ಇರುವುದಕ್ಕೆ ಸರ್ಕಾರದಿಂದ ನಿಮಗೆ ಕಮ್ಮಿ ಅಂದರೂ 50 ಲಕ್ಷ ರೂಪಾಯಿ ಹಣ ಬರಬೇಕು ಅಂತಾ ಹೇಳಿದ್ದಾರಂತೆ ಎಂದು ಸಂದರ್ಶನದಲ್ಲಿ ಕುಮಾರ್ ಗೋವಿಂದ್ ಹೇಳಿದ್ದಾರೆ.
ಇನ್ನು ದರ್ಶನ್ ತನ್ನ ಸ್ನೇಹಿತರನ್ನು ಕರೆದು ಕುರಿ ಕಾಯುವ ಹುಡುಗ ಮೊಬೈಲ್ಗೆ ವಾಟ್ಸಪ್ ಓಪನ್ ಮಾಡಿ, ಬ್ಯಾಂಕ್ ಖಾತೆ ಓಪನ್ ಮಾಡಲು ತಕ್ಷಣ ಸಹಾಯ ಮಾಡಿದರು. ನಿಮ್ಮ ಊರಿನಲ್ಲಿ ಪಶುಸಂಗೋಪಾನ ವೈದ್ಯರು ಇರುತ್ತಾರೆ, ಅವರಿಗೆ ಸರ್ಟಿಫಿಕೇಟ್ ಮಾಡಲು ಹೇಳಿ ಕಳುಹಿಸಿದರು.
ಇನ್ನು ಈ ವೇಳೆ ದರ್ಶನ್ ಬಳಿ ಎಷ್ಟು ಮಾಹಿತಿ ಇದೆ ಎಂದು ಶೂಟಿಂಗ್ ಸ್ಥಳದಲ್ಲಿದ್ದವರು ಶಾಕ್ ಆದರು. ಇನ್ನು ಕುರಿ ಮೇಯಿಸುವವನ್ನು ಕರೆದು 50 ಲಕ್ಷ ರೂಪಾಯಿ ಸಿಗುತ್ತದೆ ಅಂತಾ ಹೇಳಿದ್ದು ಅವರು ನಿಜಕ್ಕೂ ಗ್ರೇಟ್ ಎಂದು ಕುರಿಗಾಯಿ ಕುಮಾರ್ ಗೋವಿಂದ್ ಹೇಳಿದ್ದರಂತೆ.
-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications