Darshan Case update: ಮತ್ತೆ 14 ದಿನ ನಟ ದರ್ಶನ್ಗೆ ಜೈಲೇ ಗತಿ, ಕೋರ್ಟ್ ಆದೇಶದ ಮಾಹಿತಿ
ಬೆಂಗಳೂರು, ಜುಲೈ 04: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಕೇಸ್ ವಿಚಾರಣೆ ನಡೆಸಿದ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಹೌದು, ಜೂನ್ 8 ರಂದು ನಡೆದ ಕೊಲೆ ವಿಚಾರವಾಗಿ ಜೈಲು ಸೇರಿದ್ದ ನಟ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಇಂದು ಗುರುವಾರ ಮುಗಿದಿದೆ. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ದರ್ಶನ್ ಅನ್ನು ಹಾಜರುಪಡಿಸಿದ್ದರು.

ಈ ವೇಳೆ ವಿಚಾರಣೆ ನಡೆಸಿರುವ ನ್ಯಾಯಾಲಯವು ಹದಿನಾಲ್ಕು ದಿನಗಳ ಕಾಲ ಅಂದರೆ ಜುಲೈ 18ರವರೆಗೆ ದರ್ಶನ್ಗೆ ನ್ಯಾಯಾಂಗ ಬಂಧನ ಮುಂದುವರಿಸಲು ಆದೇಶ ಹೊರಿಡಿಸಿತು. ಇದೇ ವೇಳೆ ಇನ್ನುಳಿದ ಆರೋಪಿಗಳನ್ನು ಸಹ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ಗೆ ಹಾಜರುಪಡಿಸಿದ್ದರು.
ಡಿ.ಗ್ಯಾಂಗ್ಗೆ ಜೈಲೇ ಗತಿ
ನಟ ದರ್ಶನ್ ಆತನ ಪ್ರೇಯಸಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 18 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನು ನ್ಯಾಯಾಧೀಶರು ವಿಸ್ತರಣೆ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾತ್ರವಿರುವ ಎಲ್ಲರನ್ನು ಅನ್ನಪೂರ್ಣೇಶ್ವರಿ ಪೊಲೀಸರು ಬಂಧಿಸಿ ವಿಚಾರ ನಡೆಸಿದ್ದರು. ಅವರೆಲ್ಲರನ್ನು ಇಂದು ವಿಡಿಯೋ ಕಾನ್ಫ್ರೆನ್ಸ್ ಮೂಲಕ ಕೋರ್ಟ್ ಮುಂದೆ ನಿಲ್ಲಿಸಲಾಗಿತ್ತು.
ಬಳಿಕ ಜೂನ್ ಮೂರನೇ ವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯ ದರ್ಶನ್ ಆಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ನೀಡಿತ್ತು. ಇದೀಗ ಮತ್ತೆ ಡಿ ಗ್ಯಾಂಗ್ ಗೆ ನ್ಯಾಯಾಂಗ ಬಂಧ ವಿಸ್ತರಣೆ ಮಾಡಿದೆ.
ಪ್ರಕರಣದ ಹಿನ್ನೆಲೆ ಏನು?
ನಟ ದರ್ಶನ್ ಪ್ರೇಯಸಿ ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆ ತಂದು ಹತ್ಯೆ ಮಾಡಲಾಗಿದೆ. ದರ್ಶನ್ ಸೂಚನೆ ಮೇರೆಗೆ ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಘು ದರ್ಶನ್ ಹಾಗೂ ಸಹಚರರು ಸೇರಿ ಕಾರಿನಲ್ಲಿ ಕರೆ ತಂದಿದ್ದರು.
ರಾಜರಾಜೇಶ್ವರಿಯಲ್ಲಿರುವ ದರ್ಶನ್ ಮನೆಯಿಂದ ತುಸು ದೂರವೇ ಇರುವ ಶೆಡ್ ನಲ್ಲಿಟ್ಟು ಚಿತ್ರಹಿಂಸೆ ನೀಡಲಾಗಿದೆ. ದರ್ಶನ್ ಆಂಡ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಮನಬಂದಂತೆ ಹಲ್ಲೇ ಮಾಡಿದೆ. ಕರೆಂಟ್ ಶಾಕ್ ಕೊಟ್ಟು, ಕಬ್ಬಿಣದ ಸರಳಿನಿಂದ ಹೊಡೆದು, ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ್ದಾಗಿ ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ದರ್ಶನ್ A2 ಆರೋಪಿಯಾಗಿದ್ದು, ಪವಿತ್ರಾಗೌಡ A1 ಆರೋಪಿ ಆಗಿದ್ದಾರೆ. ಇದೀಗ ಮತ್ತೆ ಡಿ ಆಂಡ್ ಗ್ಯಾಂಗ್ಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications